ವಚನ ಸಂರಕಣೆಗೆ ಜೀವ ಮುಡುಪಾಗಿಟ್ಟವರು ಡಾ| ಹಳಕಟ್ಟಿ
Team Udayavani, Jul 10, 2018, 12:04 PM IST
ಕಲಬುರಗಿ: 12ನೇ ಶತಮಾನದ ಬಸವಾದಿ ಶರಣರ ವಚನಗಳ ಸಂರಕ್ಷಣೆಗೆ ತಮ್ಮ ಜೀವನವನ್ನೇ ಮುಡುಪಾಗಿಟ್ಟವರು ವಚನ ಪಿತಾಮಹ ಡಾ| ಫ.ಗು. ಹಳಕಟ್ಟಿ ಅವರು ಎಂದಿಗೂ ಮರೆಯಲಾಗದ ಶರಣ ಚೇತನರು ಎಂದು ಸಾರಂಗಮಠದ ಜಗದ್ಗುರು ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು ಹೇಳಿದರು.
ನಗರದ ಪ್ರಿಯದರ್ಶಿನಿ ಬಾಲಕಿಯರ ಪಿಯು ಕಾಲೇಜಿನ ಸಭಾಂಗಣದಲ್ಲಿ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸಾಧಕ ಶರಣರಿಗೆ ವಚನ ಪಿತಾಮಹ ಡಾ| ಫ.ಗು. ಹಳಕಟ್ಟಿ ಸ್ಮಾರಕ ಪ್ರಶಸ್ತಿ ಪ್ರದಾನ ಮಾಡಿ ಸ್ವಾಮೀಜಿ ಮಾತನಾಡಿದರು.
ಮರೆಯಾಗುತ್ತಿದ್ದ ವಚನಗಳನ್ನು ಸಂರಕ್ಷಿಸಿ ಅವುಗಳನ್ನು ರಕ್ಷಿಸಿ ಅದಕ್ಕೆ ಪುನರ್ಜನ್ಮ ನೀಡಿದ ಕೀರ್ತಿ ಹಳಕಟ್ಟಿ ಅವರಿಗೆ ಸಲ್ಲುತ್ತದೆ. ಹಳಕಟ್ಟಿ ಅವರಿಂದ ವಚನ ಸಾಹಿತ್ಯ ಬೆಳಕಿಗೆ ಬಂದಿದೆ ಎಂದು ಹೇಳಿದರು.
ಉಪನ್ಯಾಸ ನೀಡಿದ ಜಯಶ್ರೀ ಚಟ್ನಳ್ಳಿ, ಡಾ| ಹಳಕಟ್ಟಿ ಅವರು ತಾಳೆಗರಿಗಳಲ್ಲಿದ್ದ ಶರಣರ ವಚನಗಳನ್ನು ಓದಿ ಸಂಶೋಧಿಸಿ ಸಂಗ್ರಹಿಸಿ ಇಡದಿದ್ದರೆ ಬಸವಣ್ಣ ಸೇರಿದಂತೆ ಯಾವ ಶರಣರ ಬಗ್ಗೆಯೂ ಮಾಹಿತಿ ಲಭ್ಯವಾಗುತ್ತಿರಲಿಲ್ಲ. ಡಾ| ಹಳಕಟ್ಟಿ ಅವರು ಸಂಗ್ರಹಿಸಿದ ವಚನಗಳು ಲೋಕಕ್ಕೆ ತಿಳಿವಳಿಕೆ ತಿರುಳು ತಿಳಿಸುತ್ತಿವೆ ಎಂದು ಹೇಳಿದರು.
ಅಕಾಡೆಮಿ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ
ಪ್ರಾಚಾರ್ಯ ಭಾರತಿ ಸಂಗಾವಿ, ಪ್ರೊ| ಎಸ್.ಜಿ. ಕೆಲ್ಲೂರ, ವಿನೋದ ಜನವರಿ ಮಾತನಾಡಿದರು.
ಸಂಸ್ಥೆ ಕಾರ್ಯದರ್ಶಿ ಮಾರುತಿರಾವ ಮಾಲೆ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಡಾ| ಶೀಲಾ ಸಿದ್ದರಾಮ, ಆರ್.ಸಿ. ಘಾಳೆ, ಬಸವರಾಜೇಂದ್ರ ಗುಂಡೆ ತಡಕಲ್, ಶಿವಶರಣ ದೇಗಾಂವ, ಪ್ರೊ| ಶೋಭಾದೇವಿ ಚೆಕ್ಕಿ, ಜಮಖಂಡಿಯ ಸರಸ್ವತಿ ಸಬರದ, ಅಫಜಲಪುರದ
ಮಹೇಶ ಅಲೇಗಾಂವ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪರಮೇಶ್ವರ ಶಟಕಾರ, ಎಸ್.ಎಂ. ಪಟ್ಟಣಕರ, ಹಣಮಂತ್ರಾಯ ಅಟ್ಟೂರ, ಶ್ರೀಕಾಂತ ಪಾಟೀಲ ತಿಳಗೂಳ, ಡಾ| ಬಾಬುರಾವ ಶೇರಿಕಾರ, ಡಾ| ಅಶೋಕ ಜೀವಣಗಿ, ಸೂರ್ಯಕಾಂತ ಸೊನ್ನದ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ