ಮತ ಖಾತ್ರಿ: ವಿವಿ ಪ್ಯಾಟ್‌ ಪ್ರಾತ್ಯಕ್ಷಿಕೆ


Team Udayavani, Mar 30, 2018, 12:18 PM IST

gul-1.jpg

ಚಿತ್ತಾಪುರ: ವಿದ್ಯುನ್ಮಾನ ಮತಯಂತ್ರ (ಇವಿಎಂ)ದಲ್ಲಿ ದಾಖಲಿಸಿದ ಮತ ಯಾರಿಗೆ ಬಿದ್ದಿದೆ ಎಂಬುವುದನ್ನು ಖಚಿತ ಪಡಿಸುವ ಮತ ಖಾತ್ರಿ ಯಂತ್ರ (ವಿವಿ ಪ್ಯಾಟ್‌)ದ ಪ್ರಾತ್ಯಕ್ಷಿಕೆಗೆ ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಚಾಲನೆ ನೀಡಲಾಯಿತು.

ವಿವಿಧ ರಾಜಕೀಯ ಪಕ್ಷಗಳ ಮುಖಂಡರಿಗೆ ಈ ಬಗ್ಗೆ ಮಾಹಿತಿ ನೀಡಲು ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲಾಗಿತ್ತು. ಸೇಡಂ ಸಹಾಯಕ ಆಯುಕ್ತ ಎಂ.ಪಿ ಮಾರುತಿ ಮಾತನಾಡಿ, ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಎಲ್ಲ ರಾಜಕೀಯ ಪಕ್ಷಗಳು, ಶಾಲಾ-ಕಾಲೇಜು, ಸಂಘ-ಸಂಸ್ಥೆ, ಗ್ರಾಮೀಣ ಪ್ರದೇಶದಲ್ಲಿ ಹಾಗೂ ಜಾತ್ರೆಗಳಲ್ಲಿ ಇವಿಎಂ ಮತ್ತು ವಿವಿಪ್ಯಾಟ್‌ ಯಂತ್ರ ಬಳಕೆ ಕುರಿತು ಅಣುಕು ಮತದಾನದ ಮೂಲಕ ಜಾಗೃತಿ ಮೂಡಿಸಲಾಗುತ್ತದೆ. ಇವಿಎಂ ಮತ್ತು ವಿವಿ ಪ್ಯಾಟ್‌ಗಳನ್ನು ಈಗಾಗಲೇ ಹಲವು ಬಾರಿ ತಪಾಸಣೆಗೆ ಒಳಪಡಿಸಲಾಗಿದೆ.

ವಿವಿ ಪ್ಯಾಟ್‌ನಲ್ಲಿ ಉತ್ತಮ ಗುಣಮಟ್ಟದ ಪೇಪರ್‌ನ್ನು ಮುದ್ರಣಕ್ಕೆ ಬಳಸಲಾಗುತ್ತದೆ. 22.5/15 ವೊಲ್ಟೆಜ್‌ ಬ್ಯಾಟರಿ ಕಾರ್ಯನಿರ್ವಹಿಸಲಿದೆ. ಒಂದು ರೀಲ್‌ನಲ್ಲಿ 1,500 ಮತಗಳು ಮುದ್ರಣಗೊಳ್ಳುತ್ತವೆ. ಪ್ರತಿ ವಿವಿ ಪ್ಯಾಟ್‌ ಯಂತ್ರದ ಜತೆಗೆ ಹೆಚ್ಚುವರಿ ರೀಲ್‌ನ್ನು ಕೊಡಲಾಗುತ್ತದೆ ಎಂದು ಹೇಳಿದರು.

ಮತದಾನ ಖಾತ್ರಿ ಪಡಿಸುವ ಯಂತ್ರ ಇದಾಗಿದೆ. ಮತದಾನದ ನಂತರ ಯಾರಿಗೆ ಮತದಾನ ಮಾಡಲಾಗಿದೆ ಎಂಬುವುದನ್ನು ಮತದಾರ ಖಾತ್ರಿ ಪಡಿಸಿಕೊಳ್ಳಲು ಏಳು ಸೆಕೆಂಡ್‌ ಮತಪತ್ರ ವಿವಿ ಪ್ಯಾಟ್‌ನಲ್ಲಿ ಪ್ರದರ್ಶನಗೊಳ್ಳುತ್ತದೆ. ನಂತರ ಅದು ವಿವಿಪ್ಯಾಟ್‌ ಪೆಟ್ಟಿಗೆಯಲ್ಲಿ ತುಂಡರಿಸಿಕೊಂಡು ಬೀಳುತ್ತದೆ ಎಂದು ಮಾಹಿತಿ ನೀಡಿದರು. ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿರುವುದರಿಂದ
ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರ ಕಾರ್ಯಕ್ರಮ, ಸಮಾರಂಭಗಳಿಗೆ ಉಪಯೋಗಿಸಲಾಗುವ ಪ್ಲೆಕ್ಸ್‌, ಕ್ಯಾಪ್‌, ಟೀ-ಶರ್ಟ, ಶಾಮಿಯಾನ, ಟವಲ್‌, ತಾತ್ಕಾಲಿಕ ವೇದಿಕೆ, ಬ್ಯಾನರ್‌, ಸ್ಪೀಕರ್‌, ಕರಪತ್ರ ಹೀಗೆ ಅನೇಕ ವಸ್ತು ಹಾಗೂ ಉಪಹಾರ, ಊಟ, ನೀರು ಸೇರಿದಂತೆ ಇನ್ನಿತರ ಸಾಮಗ್ರಿಗಳಿಗೆ ದರ ನಿಗದಿಪಡಿಸಲಾಗಿದೆ. ಮುದ್ರಣ ಮತ್ತು ವಿದ್ಯುನ್ಮಾನ ವಾಹಿನಿಯಲ್ಲಿ ನೀಡಲಾಗುವ ಜಾಹೀರಾತಿಗೂದರ ಇದ್ದು, ಇದೆಲ್ಲದರ ಖರ್ಚನ್ನು ಆಯಾ ರಾಜಕೀಯ ಪಕ್ಷದ ಖಾತೆ ಲೆಕ್ಕಕ್ಕೆ ತೆಗೆದುಕೊಳ್ಳಲಾಗುತ್ತದೆ ಎಂದು
ಹೇಳಿದರು.

ಮಾಸ್ಟರ್‌ ಟ್ರೇನರ್‌ಗಳಾದ ಬಸವರಾಜ ಎಂಬತ್ನಾಳ, ಕಾಶಿರಾಯ ಕಲಾಲ್‌, ಸಂತೋಷ ಶಿರನಾಳ ಅವರು ಇವಿಎಂ ಮತ್ತು ವಿವಿಪ್ಯಾಟ್‌ ಮತಯಂತ್ರದ ಕಾರ್ಯನಿರ್ವಹಿಸುವ ಕುರಿತು ಸಮಗ್ರ ಮಾಹಿತಿಯನ್ನು ಪ್ರಾಯೋಗಿಕವಾಗಿ ರಾಜಕೀಯ ಪಕ್ಷದವರಿಗೆ ಹಾಗೂ ಪತ್ರಕರ್ತರಿಗೆ ತಿಳಿಸಿಕೊಟ್ಟರು.

ತಹಶೀಲ್ದಾರ್‌ ಶಿವಾನಂದ ಪಿ. ಸಾಗರ, ತಾಪಂ ಇಒ ಲಕ್ಷ್ಮಣ ಶೃಂಗೇರಿ, ಕೃಷಿ ಇಲಾಖೆ ಸಹಾಯಕ ಆಯುಕ್ತ ಜಾಲೇಂದ್ರ ಗುಂಡಪ್ಪ, ಸೋಮು ರಾಠೊಡ, ದಶರಥ, ಮಧುಸೋಧನ್‌ ಗಾಳೆ, ಕರೀಬಬಸಪ್ಪ, ವಿಜಯಕುಮಾರ, ಮಾಹಾನಿಂಗಯ್ಯ, ಮಕ್‌ಸೂದ್‌, ಬಾಬು ಇದ್ದರು.

ಹಣ ಸಾಗಿಸಿದರೆ ಜಪ್ತಿ
ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಯಾವುದೇ ಪಕ್ಷಕ್ಕೆ ಸಿಮೀತವಾದ ವಾಹನಗಳಲ್ಲಿ 50 ಸಾವಿರ ರೂ. ಇದ್ದರೆ ಅದನ್ನು ಜಪ್ತಿ ಮಾಡಿಕೊಂಡು ದೂರು ದಾಖಲಿಸಿಕೊಳ್ಳಬೇಕು. 10 ಲಕ್ಷರೂ. ಕ್ಕಿಂತ ಹೆಚ್ಚು ಹಣ ಸಾಗಿಸುತ್ತಿರುವ ವಾಹನಗಳು ಚೆಕ್‌ಪೋಸ್ಟ್‌ ಹತ್ತಿರ ಸಿಕ್ಕರೇ ಐಟಿ ಅಧಿ ಕಾರಿಗಳಿಗೆ ಪರೀಶಿಲಿಸಲು ಒಪ್ಪಿಸಲಾಗುವುದು.
 ಎಂ.ಪಿ. ಮಾರುತಿ ಸಹಾಯಕ ಆಯುಕ್ತರು, ಸೇಡಂ

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.