ಕಸ ಸಂಗ್ರಹ ವಾಹನ ಮೂಲಕ ಮತದಾನ ಜಾಗೃತಿ


Team Udayavani, Apr 30, 2018, 2:58 PM IST

gul-2.jpg

ಕಲಬುರಗಿ: ಚುನಾವಣೆ ಆಯೋಗ ಸಿದ್ಧಪಡಿಸಿರುವ ಮತದಾರರ ಜಾಗೃತಿ ಕುರಿತ ಧ್ವನಿ ಮುದ್ರಿಕೆಗಳನ್ನು ಹಾಗೂ ಜಿಂಗಲ್ಸ್‌ಗಳನ್ನು ಪಾಲಿಕೆ ವ್ಯಾಪ್ತಿಯ ಹಾಗೂ ಜಿಲ್ಲೆಯ ಗ್ರಾಪಂಗಳಲ್ಲಿರುವ ಕಸ ಸಂಗ್ರಹ ವಾಹನಗಳ ಮೂಲಕ ಬಿತ್ತರಿಸಿ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ.

ಜಿಲ್ಲಾ ಸ್ವೀಪ್‌ ಸಮಿತಿಯಿಂದ ನಗರದ ಜಗತ್‌ ವೃತ್ತದಲ್ಲಿ ಕಸ ಸಂಗ್ರಹಣೆ ಮಾಡುವ ವಾಹನಗಳಿಗೆ ಜಿಂಗಲ್ಸ್‌ ಮತ್ತು ಪೋಸ್ಟರ್‌ಗಳನ್ನು ಅಳವಡಿಸಲು ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಪಾಲಿಕೆ ಆಯುಕ್ತ ರಘುನಂದನ ಮೂರ್ತಿ ಚಾಲನೆ ನೀಡಿದರು.

ನಗರದಲ್ಲಿ ಮಹಾನಗರ ಪಾಲಿಕೆ ಕಸ ಸಂಗ್ರಹಿಸುವ 29 ಬೊಲೇರೊ ಟಿಪ್ಪರ್‌ ಮತ್ತು 57 ಆಟೋ ಟಿಪ್ಪರ್‌ಗಳಿವೆ. ಇವುಗಳಿಗೆ ಈಗಾಗಲೇ ಸೌಂಡ್‌ ಸಿಸ್ಟಮ್‌ ಅಳವಡಿಸಲಾಗಿದೆ. ಒಳ್ಳೆಯ ಕರ ಸಂಗ್ರಹವಿರುವ ಗ್ರಾಪಂಗಳಲ್ಲಿ ಕಸ ಸಂಗ್ರಹಣೆಗಾಗಿ ಆಟೋ ಟಿಪ್ಪರ್‌ ನೀಡಲಾಗಿದೆ. ಜಿಲ್ಲೆಯಲ್ಲಿ ಇಂಥಹ 40 ಆಟೋ ಟಿಪ್ಪರಗಳು ಗ್ರಾಮೀಣ ಪ್ರದೇಶಗಳಲ್ಲಿವೆ ಎಂದು ವಿವರಿಸಿದರು.

ನಗರದ ಎಲ್ಲ 55 ವಾರ್ಡುಗಳಲ್ಲಿ ಮಹಾನಗರ ಪಾಲಿಕೆ ಕಸ ಸಂಗ್ರಹಣೆ ಮಾಡುವ ವಾಹನಗಳು ಬೆಳಗಿನ 6 ಗಂಟೆಯಿಂದ
ಪ್ರಾರಂಭಿಸಿ ಎಲ್ಲ ಮನೆಗಳಿಗೆ ತಲುಪುತ್ತವೆ.ಈ ವಾಹನಗಳು ಎಲ್ಲ ಮನೆಗಳಿಂದ ಕಸ ಸಂಗ್ರಹಿಸುವ ಸಮಯದಲ್ಲಿ ಚುನಾವಣೆ ಹಾಗೂ ಮತದಾನ ಜಾಗೃತಿ ಗೀತೆಗಳನ್ನು ಬಿತ್ತರಿಸುವ ಮೂಲಕ ಎಲ್ಲ ಮತದಾರರಿಗೆ ಚುನಾವಣೆ, ಮತದಾನದ ಅರಿವು ಮೂಡಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.

ಕಸ ಸಂಗ್ರಹಣೆ ವಾಹನಗಳ ಮೇಲೆ ವಿವಿ ಪ್ಯಾಟ್‌, ಎಲೆಕ್ಟ್ರಾನಿಕ್‌ ಮತಯಂತ್ರ, ಮತದಾನದ ದಿನಾಂಕ, ಆಸೆ ಆಮಿಷಗಳಿಗೆ ಒಳಗಾಗದೇ ಮತದಾನ ಮಾಡುವ ಬಗ್ಗೆ ಹಾಗೂ ಒಂದು ಮತದ ಮಹತ್ವದ ಬಗ್ಗೆ ಮಾಹಿತಿ ನೀಡುವ ಪೋಸ್ಟರ್‌ಗಳನ್ನು ಅಳವಡಿಸಲಾಗಿದೆ ಎಂದು ಹೇಳಿದರು.

ಜಿಪಂ ಉಪ ಕಾರ್ಯದರ್ಶಿ ಮಹ್ಮದ್‌ ಯುಸೂಫ್‌, ಸ್ವೀಪ್‌ ನೋಡಲ್‌ ಅಧಿಕಾರಿ ಮೈಸೂರು ಗಿರೀಶ, ಜಿಪಂ ಸಹ ಕಾರ್ಯದರ್ಶಿ ಸಂಪತ್‌ ಪಾಟೀಲ, ಕೃಷಿ ಸಹಾಯಕ ನಿರ್ದೇಶಕ ಅನೀಲ ರಾಠೊಡ, ಕಲಬುರಗಿ ಉತ್ತರ ಕ್ಷೇತ್ರ ಶಿಕ್ಷಣಾ ಧಿಕಾರಿ ಚನ್ನಬಸಪ್ಪ ಮುಧೋಳ ಹಾಗೂ ಮತ್ತಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.