ವಾಡಿ: ನೀರಿನ ಟ್ಯಾಂಕಿಗೆ ಬಿದ್ದು ನರಳಾಡಿ 30 ಕೋತಿಗಳ ಸಾವು

ಗ್ರಾಮಸ್ಥರಿಗೆ ಸಾಂಕ್ರಾಮಿಕ ರೋಗದ ಭೀತಿ

Team Udayavani, Dec 16, 2022, 9:40 PM IST

1-qqwwwqe

ವಾಡಿ: ಬಳಕೆಯಲ್ಲಿಲ್ಲದ ಶಿಥಿಲ ನೀರಿನ ಟ್ಯಾಂಕ್‌ಗೆ ಬಿದ್ದ ನಲವತ್ತಕ್ಕೂ ಹೆಚ್ಚು ಕೋತಿಗಳಲ್ಲಿ ಸುಮಾರು ಮೂವತ್ತು ಕೋತಿಗಳು ನರಳಿ ನರಳಿ ಮೃತಪಟ್ಟ ಘಟನೆ ಚಿತ್ತಾಪೂರ ತಾಲೂಕಿನ ಹಳಕರ್ಟಿ ಗ್ರಾಮದಲ್ಲಿ ಸಂಭವಿಸಿದೆ. ಕೋತಿಗಳ ಸಾಮೂಹಿಕ ಸಾವಿನಿಂದ ದುರ್ವಾಸನೆ ಹಬ್ಬಿದ್ದು, ಗ್ರಾಮಸ್ಥರಿಗೆ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ.

ಗ್ರಾಪಂ ಕೇಂದ್ರ ಸ್ಥಾನವಾಗಿರುವ ಹಳಕರ್ಟಿ ಗ್ರಾಮದಲ್ಲಿರುವ ಶಿಥಿಲ ನೀರಿನ ಟ್ಯಾಂಕ್ (ಓವರ್ ಹೆಡ್ ಟ್ಯಾಂಕ್) ಬೀಳುವ ಹಂತಕ್ಕೆ ತಲುಪಿದ್ದರ ಪರಿಣಾಮ ಕಳೆದ ಐದಾರು ವರ್ಷಗಳಿಂದ ನೀರು ಸಂಗ್ರಹ ಕೈಬಿಡಲಾಗಿದೆ. ಕಳೆದ ನಾಲ್ಕಾರು ದಿನಗಳ ಹಿಂದೆ ನೀರು ಕುಡಿಯಲು ಹೋಗಿ ಸುಮಾರು ಕೋತಿಗಳು ಪ್ರಾಣ ಕಳೆದುಕೊಂಡಿವೆ.

ಹಬ್ಬಿದ ದುರ್ವಾಸನೆ ಮತ್ತು ಮರದ ಮೇಲೆ ಕೋತಿಗಳ ಪರದಾಟ ಕಂಡು ಗ್ರಾಮಸ್ಥರು ಟ್ಯಾಂಕ್ ಪರಿಶೀಲಿಸಿದಾಗ ಕೋತಿಗಳು ಮೃತಪಟ್ಟ ದಾರುಣ ಘಟನೆ ಬೆಳಕಿಗೆ ಬಂದಿದೆ. ಗ್ರಾಮದ ಯುವಕರು ಹಗ್ಗ ಇಳಿಬಿಟ್ಟು ಕೆಲವು ಕೋತಿಗಳನ್ನು ರಕ್ಷಣೆ ಮಾಡಿದ್ದಾರೆ. ಆದರೆ ನೀರು ಆಹಾರವಿಲ್ಲದೆ ಐದಾರು ದಿನಗಳ ಕಾಲ ಟ್ಯಾಂಕಿನಲ್ಲೇ ನರಳಾಡಿದ್ದ ಕೋತಿಗಳು ಪ್ರಾಣಬಿಟ್ಟಿವೆ.

ಗ್ರಾಪಂ ವಿರುದ್ಧ ಗ್ರಾಮಸ್ಥರ ಆಕ್ರೋಶ: ಜನ ವಸತಿ ಜಾಗದಲ್ಲಿರುವ ಈ ಟ್ಯಾಂಕ್ ನೆಲಕ್ಕುರುಳಿ ಪ್ರಾಣಾಪಾಯ ತಂದಿಡುವ ಮುಂಚೆಯೇ ಅಧಿಕಾರಿಗಳು ಎಚ್ಚೆತ್ತುಕೊಂಡು ತೆರವು ಮಾಡಬೇಕು ಎಂಬುದು ಗ್ರಾಮಸ್ಥರ ಕೂಗಾಗಿದೆ. ಕೋತಿಗಳು ಬಿದ್ದು ಸತ್ತರೂ ಗ್ರಾಪಂ ಅಧಿಕಾರಿಗಳು ಹಾಗೂ ಗ್ರಾಪಂ ಚುನಾಯಿತ ಜನಪ್ರತಿನಿಧಿಗಳು ಸಮಸ್ಯೆ ಬಗೆಹರಿಸಲು ಮುಂದಾಗದಿರುವುದು ಗ್ರಾಮಸ್ಥರ ಆಕ್ರೋಶ ಕಾರಣವಾಗಿದೆ.

ದುರಂತರವೆಂದರೆ ಗ್ರಾಮದ ಖಾಸಗಿ ಶಾಲೆಯೊಂದರ ಅಂಗಳದಲ್ಲಿದ್ದ ಇಂತಹದ್ದೇ ಇನ್ನೊಂದು ಓವರ್ ಹೆಡ್ ಟ್ಯಾಂಕ್ ನಾಲ್ಕು ವರ್ಷಗಳ ಹಿಂದೆ ಧರೆಗುರುಳಿತ್ತು. ಅದೃಷ್ಟವಶಾತ್ ಅಂದು ಯಾವುದೇ ಪ್ರಾಣಾಪಾಯ ಸಂಭವಿಸಿರಲಿಲ್ಲ. ಈಗ ಮತ್ತೊಂದು ಟ್ಯಾಂಕ್ ಬೀಳುವ ಹಂತಕ್ಕೆ ತಲುಪಿದ್ದರೂ ಯಾರೂ ತಲೆಕೆಡಿಸಿಕೊಳ್ಳುತ್ತಿಲ್ಲ.

ಗ್ರಾಪಂ ಕಚೇರಿ ಮುಂದೆ ಹೋರಾಟ ನಡೆಸಿದ್ದರೂ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ. ಸ್ವತಹ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ನೀಲಗಂಗಾ ಬಬಲಾದ ಅವರು ಬಂದು ಗ್ರಾಮದಲ್ಲಿ ಸಂಚರಿಸಿ ಪರಸ್ಥಿತಿ ಕಣ್ಣಾರೆ ಕಂಡರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಎಸ್‌ಯುಸಿಐ) ಪಕ್ಷದ ಮುಖಂಡರಾದ ಗೌತಮ ಪರತೂರಕರ, ಹೇಮಂತ ವಾಕೋಡೆ, ಚೌಡಪ್ಪ ಗಂಜಿ, ಮಹಾಂತೇಶ ಹುಳಗೋಳ, ಶರಣು ಪಾಣೆಗಾಂವ, ದತ್ತಾತ್ರೇಯ ಹುಡೇಕರ ಹಾಗೂ ಈರಣ್ಣ ಇಸಬಾ ದೂರಿದ್ದಾರೆ. ಪರಿಣಾಮ ಇಂದು ಈ ಟ್ಯಾಂಕಿನಲ್ಲಿ ಮೂವತ್ತರಿಂದ ನಲವತ್ತು ಕೋತಿಗಳು ಬಿದ್ದು ಹೊರ ಬರಲಾಗದೆ ಉಸಿರುಗಟ್ಟಿ ಸತ್ತಿವೆ.

ಗ್ರಾಮದಲ್ಲಿ ದುರ್ವಾಸನೆ ಹರಡಿದೆ. ಸಾಂಕ್ರಾಮಿಕ ರೋಗ ಹರಡುವ ಆತಂಕ ಉಂಟಾಗಿದೆ. ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ಶಿಥಿಲ ಟ್ಯಾಂಕ್ ತೆರವು ಮಾಡಲು ಮುಂದಾಗಬೇಕು. ಇದಕ್ಕೂ ಮೊದಲು ಮೃತಪಟ್ಟ ಕೋತಿಗಳನ್ನು ಹೊರ ತೆಗೆದು ಔಷಧ ಸಿಂಪಡಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.