ಯಾಗಾಪುರದಲ್ಲಿ ನರೇಗಾ ಕೆಲಸ ಚುರುಕು
Team Udayavani, May 20, 2020, 5:44 PM IST
ಸಾಂದರ್ಭಿಕ ಚಿತ್ರ
ವಾಡಿ: ಕೇವಲ 60 ಜನ ಕಾರ್ಮಿಕರಿಂದ ಆರಂಭಿಸಲಾಗಿದ್ದ ಉದ್ಯೋಗ ಖಾತ್ರಿ ಕೆಲಸಕ್ಕೆ ಈಗ 540 ಜನ ಶ್ರಮಿಕರು ಕೈ ಜೋಡಿಸಿದ್ದಾರೆ. ಸ್ವಂತ ಜಮೀನುಗಳಲ್ಲಿ ಬದು ನಿರ್ಮಾಣ ಹಾಗೂ ಕೆರೆ ಹೂಳೆತ್ತುವ ಕಾಯಕದಲ್ಲಿ ತೊಡಗುವ ಮೂಲಕ ಕೋವಿಡ್ ತಂದಿಟ್ಟ ಸಂಕಟದ ದಿನಗಳನ್ನು ಎದುರಿಸುತ್ತಿದ್ದಾರೆ.
ಕೆಲಸವಿಲ್ಲದೆ ಆರ್ಥಿಕ ಸಮಸ್ಯೆಯಲ್ಲಿ ಸಿಲುಕಿದ್ದ ಗ್ರಾಮದ ಕಾರ್ಮಿಕ ಮಹಿಳೆಯರಿಗೆ ಉದ್ಯೋಗ ಖಾತ್ರಿಪಡಿಸಿರುವ ಯಾಗಾಪುರ ಗ್ರಾಪಂ ಅಭಿವೃದ್ಧಿ ಅಧಿಕಾರಿ ಪಾರ್ವತಿ ಪೂಜಾರಿ, ಕೆಲಸ ಕೇಳಲು ಬರುತ್ತಿರುವವರೆಲ್ಲರಿಗೂ ಕೂಲಿ ಒದಗಿಸುತ್ತಿದ್ದಾರೆ. ಕೇಂದ್ರ ಸರಕಾರದ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕುರಿತು ಗ್ರಾಮಸ್ಥರಲ್ಲಿ ಅರಿವು ಮೂಡಿಸುವ ಮೂಲಕ ದುಡಿಯುವ ಕೈಗಳಿಗೆ ಕೆಲಸ ಒದಗಿಸಿ ಖಾತ್ರಿ ಯೋಜನೆಗೆ ಮತ್ತಷ್ಟು ಚುರುಕು ಮೂಡಿಸಿದ್ದಾರೆ.
ಕೋವಿಡ್ ವೈರಸ್ ಹರಡಲು ಘೋಷಣೆಯಾಗಿರುವ ಲಾಕ್ಡೌನ್ ನಿಯಮ ಪಾಲಿಸುವ ಜತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಕಾರ್ಮಿಕರು ಕೆಲಸದಲ್ಲಿ ತೊಡಗುತ್ತಿದ್ದಾರೆ. ಉದ್ಯೋಗ ಅರಸಿ ವಿವಿಧೆಡೆ ವಲಸೆ ಹೋಗಿದ್ದ ಗ್ರಾಪಂ ವ್ಯಾಪ್ತಿಯ ವಿವಿಧ ತಾಂಡಾಗಳ ಜನರು ಮರಳಿ ಬಂದಿದ್ದಾರೆ. 14 ದಿನಗಳ ಕ್ವಾರಂಟೈನ್ ಎದುರಿಸಿ ಆರೋಗ್ಯ ಕಾಪಾಡಿಕೊಂಡ ಕಾರ್ಮಿಕರಿಗೂ ಗ್ರಾಮದಲ್ಲಿ ಉದ್ಯೋಗ ಖಾತ್ರಿಪಡಿಸಲಾಗುವುದು ಎಂದು ಪಿಡಿಒ ಪಾರ್ವತಿ ಪೂಜಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು
Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !
Banda; ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ
Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ