ಹೊಟ್ಟೆಗೆ ರೊಟ್ಟಿ ಖಾತ್ರಿಪಡಿಸಿದ ರಟ್ಟೆ ಶಕ್ತಿ !


Team Udayavani, Jun 1, 2020, 5:14 PM IST

01-June-22

ಸಾಂದರ್ಭಿಕ ಚಿತ್ರ

ವಾಡಿ: ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಮನೆಯಲ್ಲಿ ಲಾಕ್‌ಡೌನ್‌ ಸಂಕಟ ಅನುಭವಿಸಿದ ಗ್ರಾಮೀಣ ಜನರಿಗೆ ಉದ್ಯೋಗ ಖಾತ್ರಿ ಯೋಜನೆ ರಟ್ಟೆಗೆ ಕೆಲಸ ಕೊಟ್ಟು ಹೊಟ್ಟೆಗೆ ರೊಟ್ಟಿ ಒದಗಿಸಿದ್ದು, ಕೂಲಿ ಕಾರ್ಮಿಕರ ಬದುಕಿಗೆ ಇದು ಆಸರೆಯಾಗಿದೆ.

ಲಾಡ್ಲಾಪುರ ಗ್ರಾಪಂ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಒಟ್ಟು 800 ಜನ ಶ್ರಮಿಕರು ಕೆರೆ ಹೂಳೆತ್ತುವ ಹಾಗೂ ಹೊಲಗಳಲ್ಲಿ ಬದು ನಿರ್ಮಾಣ ಕಾಯಕದಲ್ಲಿ ತೊಡಗಿದ್ದಾರೆ. ಗ್ರಾಪಂ ಪಿಡಿಒ ಗುರುನಾಥರೆಡ್ಡಿ ಹೂವಿನಬಾವಿ ಹಾಗೂ ಗ್ರಾಪಂ ಅಧ್ಯಕ್ಷ ಸಾಬಣ್ಣ ಆನೇಮಿ ಅವರು ಕೋವಿಡ್  ಸಂಕಟದಲ್ಲಿ ಆರ್ಥಿಕ ತೊಂದರೆಯಲ್ಲಿದ್ದ ಗ್ರಾಮಸ್ಥರಿಗೆ ಜಾಬ್‌ ಕಾರ್ಡ್‌ ವಿತರಿಸುವ ಮೂಲಕ ಕೆಲಸ ಒದಗಿಸಿದ್ದಾರೆ. ಪ್ರತಿನಿತ್ಯ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಕೆರೆಯಂಗಳದಲ್ಲಿ ಕೂಲಿಕಾರರ ಸೈನ್ಯ ಗುದ್ದಲಿ ಸಲಿಕೆ ಹಿಡಿದು ಬೆವರು ಸುರಿಸುತ್ತಿದೆ. ಕೆರೆಯ ಏರಿಯ ಮೇಲೆ ಬುಟ್ಟಿ ತುಂಬ ಮಣ್ಣು ಹೊತ್ತು ಜಾನಪದ ಹಾಡುಗಳನ್ನು ಹೇಳುತ್ತಾ ಕಾಯಕ ಕ್ರಾಂತಿಗೆ ಧ್ವನಿಗೂಡಿಸುತ್ತಿದ್ದಾರೆ.

ಕೃಷಿ ಭೂಮಿಯಲ್ಲಿ ಬದು ನಿರ್ಮಾಣ: ಸಾಮಾನ್ಯವಾಗಿ ಉದ್ಯೋಗ ಖಾತ್ರಿ ಯೋಜನೆಯ ಕೆಲಸ ಎಂದರೆ ಕೆರೆ ಮತ್ತು ಹಳ್ಳದಲ್ಲಿ ಹೂಳೆತ್ತುವ ಕಾಯಕ. ಲಾಡ್ಲಾಪುರದಲ್ಲೂ ಕೋಗಿಲ ಕೆರೆ ಹೂಳೆತ್ತುವ ಕಾರ್ಯ ಭರದಿಂದ ಸಾಗಿದೆ. ಇದರ ಜತೆಗೆ ರೈತರ ಹೊಲಗಳಲ್ಲಿ ಬದು ನಿರ್ಮಾಣಕ್ಕೆ ವಿಶೇಷ ಆಸಕ್ತಿ ವಹಿಸಲಾಗಿದೆ. ಭಾರಿ ಮಳೆಯಿಂದ ಹೊಲ ಗದ್ದೆಗಳ ಮಣ್ಣು ಕೊಚ್ಚಿ ಹೋಗದಿರಲಿ, ಫಲವತ್ತಾದ ಕೃಷಿ ಮಣ್ಣು ರೈತನ ಹೊಲದಲ್ಲಿಯೇ ಉಳಿಯಬೇಕು. ಅನ್ನದಾತನ ಭೂಮಿ ರಕ್ಷಣೆಯಾಗಬೇಕು ಎಂಬ ಮಹತ್ವದ ಉದ್ದೇಶದಿಂದ ಗ್ರಾಪಂ ಅಧಿಕಾರಿಗಳು, ಕೆರೆ ಹೂಳೆತ್ತುವ ಕಾರ್ಯಕ್ಕಿಂತ ಬದು ನಿರ್ಮಿಸುವಂತೆ ಕಾರ್ಮಿಕರಿಗೆ ಸೂಚಿಸುತ್ತಿರುವುದು ರೈತಪರ ಕಾಳಜಿ ಎದ್ದು ಕಾಣುತ್ತಿದೆ. ಒಟ್ಟಾರೆ ಕೋವಿಡ್ ಸಂಕಷ್ಟದಲ್ಲಿ ಹೊಟ್ಟೆಗೆ ಗಂಜಿಯಿಲ್ಲದೆ ಚಿಂತೆಯಲ್ಲಿದ್ದ ಗುಡ್ಡದ ಊರು ಲಾಡ್ಲಾಪುರದ ಕೃಷಿ ಕೂಲಿಕಾರ್ಮಿಕರಿಗೆ ಉದ್ಯೋಗ ಖಾತ್ರಿ ಕೈ ಹಿಡಿದಿದೆ. ಗ್ರಾಮಸ್ಥರು ಸೈನಿಕರ ರೂಪದಲ್ಲಿ ಕೆಲಸಕ್ಕೆ ಹಾಜರಾಗುತ್ತಿದ್ದಾರೆ.

ಕೋವಿಡ್ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಈ ವೇಳೆ ದುಡಿಯುವ ಜನಗಳಿಗೆ ಉದ್ಯೋಗ ಕೊಡುವುದು ಮುಖ್ಯ ಎಂದು ಭಾವಿಸಿ ಉದ್ಯೋಗ ಖಾತ್ರಿ ಯೋಜನೆಗೆ ಚುರುಕು ಮೂಡಿಸಲಾಗಿದೆ. ಲಾಡ್ಲಾಪುರದಲ್ಲಿ ಒಟ್ಟು 800 ಜನ ಕೂಲಿಕಾರರು ಕೆಲಸ ಮಾಡುತ್ತಿದ್ದಾರೆ. 540 ಜನರು ಗ್ರಾಮದ ಕೋಗಿಲ ಕೆರೆಯಲ್ಲಿ ಹೂಳೆತ್ತಲು ಮುಂದಾಗಿದ್ದರೆ, 260 ಜನರು ತಮ್ಮ ತಮ್ಮ ಹೊಲಗಳಲ್ಲಿ ಬದು ನಿರ್ಮಾಣ ಮಾಡಿಕೊಳ್ಳುತ್ತಿದ್ದಾರೆ. ಕ್ವಾರಂಟೈನ್‌ ಮುಗಿಸಿ ಬಂದ ವಲಸೆ ಕಾರ್ಮಿಕರಿಗೂ ಉದ್ಯೋಗ ನೀಡಲು ಸಿದ್ಧರಿದ್ದೇವೆ. ಆದರೆ ಅವರು ನಮಗೆ ಕೆಲಸ ಬೇಕು ಎಂದು ಆಧಾರ್‌ ಗುರುತಿನ ಚೀಟಿ ಮತ್ತು ಪಡಿತರ ಚೀಟಿಯ ದಾಖಲಾತಿಗಳೊಂದಿಗೆ ಗ್ರಾಪಂಗೆ ಅರ್ಜಿ ಸಲ್ಲಿಸಬೇಕು.
ಗುರುನಾಥರೆಡ್ಡಿ
ಹೂವಿನಬಾವಿ, ಪಿಡಿಒ,
ಲಾಡ್ಲಾಪುರ ಗ್ರಾಪಂ.

ಮಡಿವಾಳಪ್ಪ ಹೇರೂರ

Ad

ಟಾಪ್ ನ್ಯೂಸ್

ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ:  ಡಾ.ಜಿ. ಪರಮೇಶ್ವರ್‌

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್‌

Yaduveer-Wodeyar

ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ

Maha-CM–MLA-Canteen

ಕ್ಯಾಂಟೀನ್‌ ಸಿಬ್ಬಂದಿಗೆ ಹಲ್ಲೆ: ಜನಪ್ರತಿನಿಧಿಗಳು ಹೊಡೆಯುವುದು ಸರಿಯಲ್ಲ: ಸಿಎಂ ಫಡ್ನವೀಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರಕಾರ ಆದೇಶಕ್ಕೆ ಹೈಕೋರ್ಟ್‌ ತಡೆ

ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರಕಾರ ಆದೇಶಕ್ಕೆ ಹೈಕೋರ್ಟ್‌ ತಡೆ

BNG-KLB-Assult

ನಟ ದರ್ಶನ್‌ ಆ್ಯಂಡ್‌ ಗ್ಯಾಂಗ್‌ ಕೇಸ್‌ ರೀತಿ ಮತ್ತೆರಡು ಭೀಭತ್ಸ ಕೃತ್ಯ!

Recruitment process for 540 posts in the Forest Department has begun: Minister Eshwar Khandre

Recruitments: ಅರಣ್ಯ ಇಲಾಖೆಯಲ್ಲಿ 540 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭ: ಸಚಿವ ಖಂಡ್ರೆ

Kalaburagi: Tell people about the 100-year history of RSS: Minister Priyank Kharge

Kalaburagi: ಆರ್‌ಎಸ್‌ಎಸ್ ನ ನೂರು ವರ್ಷದ ಇತಿಹಾಸ ಜನರಿಗೆ ತಿಳಿಸಿ: ಸಚಿವ ಪ್ರಿಯಾಂಕ್ ಖರ್ಗೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ:  ಡಾ.ಜಿ. ಪರಮೇಶ್ವರ್‌

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್‌

Yaduveer-Wodeyar

ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.