Wadi; ಮರದ ಆಸರೆಗೆ ನಿಂತ ಇಬ್ಬರು ಸಿಡಿಲಿಗೆ ಬಲಿ

ಮೊಬೈಲ್ ಟವರ್ ರಾಡು ಬಿದ್ದು ವಿದ್ಯಾರ್ಥಿನಿಗೆ ಗಾಯ

Team Udayavani, May 26, 2024, 8:02 PM IST

1-sdsaas

ವಾಡಿ: ಮಳೆ ಗಾಳಿ ಗುಡುಗಿನಿಂದ ರಕ್ಷಣೆ ಪಡೆಯಲು ಮರದ ಆಸರೆ ಪಡೆದ ಇಬ್ಬರು ಬೈಕ್ ಸವಾರರು ಸಿಡಿಲಿಗೆ ಬಲಿಯಾದ ಘಟನೆ ರವಿವಾರ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ವಾಡಿ ಪಟ್ಟಣದ ಹನುಮಾನ ನಗರದ ನಿವಾಸಿಯಾದ ಪ್ರಕಾಶ ಏಕನಾಥ ವಾಘಮೂರೆ (55) ಹಾಗೂ ಬಿರ್ಲಾ ಏರಿಯಾ ನಿವಾಸಿ ಸತೀಶ ಪ್ರಲ್ಹಾದ ಶೇಳಕೆ (40) ಮೃತ ದುರ್ದೈವಿಗಳು. ಯಾದಗಿರಿಯಿಂದ ವಾಡಿ ನಗರಕ್ಕೆ ಬರುತ್ತಿದ್ದ ವೇಳೆ ಕಾರ್ಮೋಡ ಕವಿದು ಭಯಂಕರ ಬಿರುಗಾಳಿ ಬೀಸಿದ ಪರಿಣಾಮ ಬೈಕ್ ಸವಾರಿ ಕಷ್ಟವಾಗಿದೆ. ಗುಡುಗು ಸಿಡಿಲು ಅಬ್ಬರಿಸಿ ಏಕಾಏಕಿ ಮಳೆ ಆರಂಭವಾಗಿದೆ. ರಕ್ಷಣೆ ಪಡೆಯಲು ಹೆದ್ದಾರಿ ಪಕ್ಕದ ಮರದ ಆಸರೆ ಪಡೆದಿದ್ದರು ಎನ್ನಲಾಗಿದೆ.

ಈ ವೇಳೆ ಸಿಡಿಲು ಬಡಿದು ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿಡಿಲ ಹೊಡೆತಕ್ಕೆ ಮರದ ದೊಡ್ಡ ಕೊಂಬೆಗಳ ತೊಗಟೆ ಸುಲಿದಿರುವುದನ್ನು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಚಿತ್ತಾಪುರ ಸಿಪಿಐ ವಿಜಯಕುಮಾರ ಭಾವಗಿ ಹಾಗೂ ವಾಡಿ ಠಾಣೆಯ ಪಿಎಸ್ಐ ಮಂಜುನಾಥ ರೆಡ್ಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೊಬೈಲ್ ಟವರ್ ರಾಡು ಬಿದ್ದು ವಿದ್ಯಾರ್ಥಿನಿಗೆ ಗಾಯ

ಜೋರಾದ ಬಿರುಗಾಳಿ ಹೊಡೆತಕ್ಕೆ ಮೊಬೈಲ್ ಟವರ್ ರಾಡು ಕಳಚಿ ಬಿದ್ದು ಕೂದಲೆಳೆ ಅಂತರದಲ್ಲಿ ವಿದ್ಯಾರ್ಥಿನಿ ಪಾರಾದ ಘಟನೆ ಚಿತ್ತಾಪುರ ತಾಲ್ಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ರವಿವಾರ ಸಂಜೆ ಸಂಭವಿಸಿದೆ. 18 ವರ್ಷದ ಸುಮಾ ಗಾಯಗೊಂಡು ಆಸ್ಪತ್ರೆ ಸೇರಿದ ವಿದ್ಯಾರ್ಥಿನಿ.

ಜೋರಾಗಿ ಗಾಳಿ ಬೀಸಿದ ಪರಿಣಾಮ 180 ಅಡಿ ಎತ್ತರದ ಬಿಎಸ್ ಎನ್ ಎಲ್ ಮೊಬೈಲ್ ಟವರ್ ರಾಡು ಕಳಚಿ ಬಿದ್ದಿದೆ. ಈ ವೇಳೆ ಮನೆಯ ಅಂಗಳದಲ್ಲಿದ್ದ ವಿದ್ಯಾರ್ಥಿನಿಗೆ ಬಡೆದಿದ್ದು ಘಟನೆಯಿಂದ ಬಲಗೈ ಮತ್ತು ಎಡಗೈಗೆ ಗಂಭೀರ ಗಾಯವಾಗಿದೆ. ತಲೆಯ ಮೇಲೆ ಬಿದ್ದದ್ದರೆ ಪ್ರಾಣಾಪಾಯ ಸಂಭವಿಸುವ ಸಾಧ್ಯತೆಯಿತ್ತು ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಗಾಯಗೊಂಡ ಬಾಲಕಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಟಾಪ್ ನ್ಯೂಸ್

ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್

Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್

PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್-‌ ಏನಿದು ವಿವಾದ?

PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್-‌ ಏನಿದು ವಿವಾದ?

12-uppinangady

Uppinangady: ಮಹಿಳೆ ಸಾವು; ಕೊಲೆ ಶಂಕೆ

Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು

Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು

UK: ಡಿಲೀಟ್‌ ಆದ ಮೇಸೆಜ್‌ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!

UK: ಡಿಲೀಟ್‌ ಆದ ಮೇಸೆಜ್‌ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Veerashaiva-Lingayat separate religion recognition protest back to fore: Eshwar Khandre

ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಹೋರಾಟ ಮತ್ತೆ ಮುನ್ನೆಲೆಗೆ: ಖಂಡ್ರೆ

371ಜೆ ಕಲಂ ಅನುಷ್ಠಾನಕ್ಕೆ ಸಚಿವಾಲಯ ಆರಂಭಿಸಲು‌ ಪ್ರಾಮಾಣಿಕ ಪ್ರಯತ್ನ: ಸಚಿವ ಖಂಡ್ರೆ

371ಜೆ ಕಲಂ ಅನುಷ್ಠಾನಕ್ಕೆ ಸಚಿವಾಲಯ ಆರಂಭಿಸಲು‌ ಪ್ರಾಮಾಣಿಕ ಪ್ರಯತ್ನ: ಸಚಿವ ಖಂಡ್ರೆ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

Alanda; ಕುವೈತ್ ಅಗ್ನಿ ದುರಂತದಲ್ಲಿ ಮೃತ ವ್ಯಕ್ತಿಯ ಶವ ಸ್ವಗ್ರಾಮಕ್ಕೆ ಆಗಮನ: ಅಂತ್ಯಕ್ರಿಯೆ

Alanda; ಕುವೈತ್ ಅಗ್ನಿ ದುರಂತದಲ್ಲಿ ಮೃತ ವ್ಯಕ್ತಿಯ ಶವ ಸ್ವಗ್ರಾಮಕ್ಕೆ ಆಗಮನ: ಅಂತ್ಯಕ್ರಿಯೆ

4-chincholi

Chincholi ತಾಲೂಕಿನಾದ್ಯಂತ ಧಾರಾಕಾರ ಮಳೆ, ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಳ

MUST WATCH

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

ಹೊಸ ಸೇರ್ಪಡೆ

ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ಪಂಪ್‌ವೆಲ್‌-ಪಡೀಲ್‌ ಚತುಷ್ಪಥ ಕಾಮಗಾರಿ: ಸಂಚಾರಕ್ಕೆ ಸಂಕಷ್ಟ

ಪಂಪ್‌ವೆಲ್‌-ಪಡೀಲ್‌ ಚತುಷ್ಪಥ ಕಾಮಗಾರಿ: ಸಂಚಾರಕ್ಕೆ ಸಂಕಷ್ಟ

Udayavani Campaign-ನಮಗೆ ಬಸ್ ಬೇಕೇ ಬೇಕು:ದಯವಿಟ್ಟು ಈ ಹೆಣ್ಮಕ್ಕಳ ಸಮಸ್ಯೆ ಕೇಳಿ…

Udayavani Campaign-ನಮಗೆ ಬಸ್ ಬೇಕೇ ಬೇಕು:ದಯವಿಟ್ಟು ಈ ಹೆಣ್ಮಕ್ಕಳ ಸಮಸ್ಯೆ ಕೇಳಿ…

Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್

Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್

First single of Ibbani Tabbida Ileyali Movie releasing on June 21

Vihan- Amar; ಜೂ.21ಕ್ಕೆ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಮೊದಲ ಹಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.