Wadi; ಮರದ ಆಸರೆಗೆ ನಿಂತ ಇಬ್ಬರು ಸಿಡಿಲಿಗೆ ಬಲಿ
ಮೊಬೈಲ್ ಟವರ್ ರಾಡು ಬಿದ್ದು ವಿದ್ಯಾರ್ಥಿನಿಗೆ ಗಾಯ
Team Udayavani, May 26, 2024, 8:02 PM IST
ವಾಡಿ: ಮಳೆ ಗಾಳಿ ಗುಡುಗಿನಿಂದ ರಕ್ಷಣೆ ಪಡೆಯಲು ಮರದ ಆಸರೆ ಪಡೆದ ಇಬ್ಬರು ಬೈಕ್ ಸವಾರರು ಸಿಡಿಲಿಗೆ ಬಲಿಯಾದ ಘಟನೆ ರವಿವಾರ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ವಾಡಿ ಪಟ್ಟಣದ ಹನುಮಾನ ನಗರದ ನಿವಾಸಿಯಾದ ಪ್ರಕಾಶ ಏಕನಾಥ ವಾಘಮೂರೆ (55) ಹಾಗೂ ಬಿರ್ಲಾ ಏರಿಯಾ ನಿವಾಸಿ ಸತೀಶ ಪ್ರಲ್ಹಾದ ಶೇಳಕೆ (40) ಮೃತ ದುರ್ದೈವಿಗಳು. ಯಾದಗಿರಿಯಿಂದ ವಾಡಿ ನಗರಕ್ಕೆ ಬರುತ್ತಿದ್ದ ವೇಳೆ ಕಾರ್ಮೋಡ ಕವಿದು ಭಯಂಕರ ಬಿರುಗಾಳಿ ಬೀಸಿದ ಪರಿಣಾಮ ಬೈಕ್ ಸವಾರಿ ಕಷ್ಟವಾಗಿದೆ. ಗುಡುಗು ಸಿಡಿಲು ಅಬ್ಬರಿಸಿ ಏಕಾಏಕಿ ಮಳೆ ಆರಂಭವಾಗಿದೆ. ರಕ್ಷಣೆ ಪಡೆಯಲು ಹೆದ್ದಾರಿ ಪಕ್ಕದ ಮರದ ಆಸರೆ ಪಡೆದಿದ್ದರು ಎನ್ನಲಾಗಿದೆ.
ಈ ವೇಳೆ ಸಿಡಿಲು ಬಡಿದು ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿಡಿಲ ಹೊಡೆತಕ್ಕೆ ಮರದ ದೊಡ್ಡ ಕೊಂಬೆಗಳ ತೊಗಟೆ ಸುಲಿದಿರುವುದನ್ನು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಚಿತ್ತಾಪುರ ಸಿಪಿಐ ವಿಜಯಕುಮಾರ ಭಾವಗಿ ಹಾಗೂ ವಾಡಿ ಠಾಣೆಯ ಪಿಎಸ್ಐ ಮಂಜುನಾಥ ರೆಡ್ಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೊಬೈಲ್ ಟವರ್ ರಾಡು ಬಿದ್ದು ವಿದ್ಯಾರ್ಥಿನಿಗೆ ಗಾಯ
ಜೋರಾದ ಬಿರುಗಾಳಿ ಹೊಡೆತಕ್ಕೆ ಮೊಬೈಲ್ ಟವರ್ ರಾಡು ಕಳಚಿ ಬಿದ್ದು ಕೂದಲೆಳೆ ಅಂತರದಲ್ಲಿ ವಿದ್ಯಾರ್ಥಿನಿ ಪಾರಾದ ಘಟನೆ ಚಿತ್ತಾಪುರ ತಾಲ್ಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ರವಿವಾರ ಸಂಜೆ ಸಂಭವಿಸಿದೆ. 18 ವರ್ಷದ ಸುಮಾ ಗಾಯಗೊಂಡು ಆಸ್ಪತ್ರೆ ಸೇರಿದ ವಿದ್ಯಾರ್ಥಿನಿ.
ಜೋರಾಗಿ ಗಾಳಿ ಬೀಸಿದ ಪರಿಣಾಮ 180 ಅಡಿ ಎತ್ತರದ ಬಿಎಸ್ ಎನ್ ಎಲ್ ಮೊಬೈಲ್ ಟವರ್ ರಾಡು ಕಳಚಿ ಬಿದ್ದಿದೆ. ಈ ವೇಳೆ ಮನೆಯ ಅಂಗಳದಲ್ಲಿದ್ದ ವಿದ್ಯಾರ್ಥಿನಿಗೆ ಬಡೆದಿದ್ದು ಘಟನೆಯಿಂದ ಬಲಗೈ ಮತ್ತು ಎಡಗೈಗೆ ಗಂಭೀರ ಗಾಯವಾಗಿದೆ. ತಲೆಯ ಮೇಲೆ ಬಿದ್ದದ್ದರೆ ಪ್ರಾಣಾಪಾಯ ಸಂಭವಿಸುವ ಸಾಧ್ಯತೆಯಿತ್ತು ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಗಾಯಗೊಂಡ ಬಾಲಕಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಹೋರಾಟ ಮತ್ತೆ ಮುನ್ನೆಲೆಗೆ: ಖಂಡ್ರೆ
371ಜೆ ಕಲಂ ಅನುಷ್ಠಾನಕ್ಕೆ ಸಚಿವಾಲಯ ಆರಂಭಿಸಲು ಪ್ರಾಮಾಣಿಕ ಪ್ರಯತ್ನ: ಸಚಿವ ಖಂಡ್ರೆ
Kalaburagi; ತೈಲ ಬೆಲೆ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ
Alanda; ಕುವೈತ್ ಅಗ್ನಿ ದುರಂತದಲ್ಲಿ ಮೃತ ವ್ಯಕ್ತಿಯ ಶವ ಸ್ವಗ್ರಾಮಕ್ಕೆ ಆಗಮನ: ಅಂತ್ಯಕ್ರಿಯೆ
Chincholi ತಾಲೂಕಿನಾದ್ಯಂತ ಧಾರಾಕಾರ ಮಳೆ, ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಳ
MUST WATCH
ಹೊಸ ಸೇರ್ಪಡೆ
ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು
ಪಂಪ್ವೆಲ್-ಪಡೀಲ್ ಚತುಷ್ಪಥ ಕಾಮಗಾರಿ: ಸಂಚಾರಕ್ಕೆ ಸಂಕಷ್ಟ
Udayavani Campaign-ನಮಗೆ ಬಸ್ ಬೇಕೇ ಬೇಕು:ದಯವಿಟ್ಟು ಈ ಹೆಣ್ಮಕ್ಕಳ ಸಮಸ್ಯೆ ಕೇಳಿ…
Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್
Vihan- Amar; ಜೂ.21ಕ್ಕೆ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಮೊದಲ ಹಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.