ತ್ಯಾಜ್ಯ ಸಮಸ್ಯೆಗೆ ಇನ್ನು ಸಿಗಲಿದೆ ಮುಕ್ತಿ 


Team Udayavani, Dec 24, 2018, 3:37 PM IST

24-december-12.gif

ಶಹಾಬಾದ: ನಗರದ ಬಡಾವಣೆಗಳಲ್ಲಿ ಕಸದಿಂದ ಕೂಡಿದ ಉಪ್ಪರಿಗೆಗಳು ಕಾಣುತ್ತಿಲ್ಲ. ದುರ್ವಾಸನೆ ಬೀರುತ್ತಿಲ್ಲ. ಕಸದಲ್ಲಿ ಓಡಾಡಿಕೊಂಡಿರುವ ಹಂದಿ, ನಾಯಿಗಳ ಕಾಟವು ಕಾಣುತ್ತಿಲ್ಲ. ಇದಕ್ಕೆ ನಗರಸಭೆ ಕೈಗೊಂಡಿರುವ ಕಾರ್ಯವೇ ಸಾಕ್ಷಿ.

ನಗರದ ಒಟ್ಟು 27 ವಾರ್ಡ್ ಗಳಲ್ಲಿ ಟಂಟಂಗಳ ಮೂಲಕ ಕಸ ವಿಲೇವಾರಿ ಮಾಡುತ್ತಿರುವ ನಗರಸಭೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ನಗರದ ಬಹುತೇಕ ಬಡಾವಣೆಗಳಲ್ಲಿ ಪೌರಕಾರ್ಮಿಕರ ಕೊರತೆಯಿಂದ ಕಸ ವಿಲೇವಾರಿ ಸಮಸ್ಯೆ ತಲೆದೋರಿತ್ತು. ಪೌರಾಯುಕ್ತ ಬಿ.ಬಸಪ್ಪ ಹೊರಗುತ್ತಿಗೆಯಲ್ಲಿ 48 ಕಾರ್ಮಿಕರನ್ನು ತೆಗೆದುಕೊಂಡಿದ್ದಾರೆ. ಅದರಲ್ಲಿ 26 ಜನ ಲೋಡರ್, 14 ಜನ ಚಾಲಕರು, ಮೂವರು ಮೇಲ್ವಿಚಾರಕರು, ಇಬ್ಬರು ಸೆಕ್ಯೂರಿಟಿ ಗಾರ್ಡ್‌, ಒಬ್ಬ ಜೆಸಿಬಿ ಚಾಲಕ ಹಾಗೂ 45 ಜನ ನಗರಸಭೆ ಪೌರ ಕಾರ್ಮಿಕರನ್ನು ಬಳಸಿಕೊಂಡು ನಗರದ ಚರಂಡಿ ಹಾಗೂ ಕಸದ ತೊಟ್ಟಿಗಳನ್ನು ಸ್ವಚ್ಛಗೊಳಿಸಲು ಮುಂದಾಗಿದ್ದಾರೆ.

ನಗರ ಸಭೆಯಲ್ಲಿ ಮೂಲೆ ಗುಂಪಾಗಿರುವ ಟಂಟಂಗಳನ್ನು ಬಳಸಿಕೊಂಡು ಕಸ ಸಂಗ್ರಹ ಮಾಡುತ್ತಿರುವುದರಿಂದ ಪ್ರತಿ ಬಡಾವಣೆಗಳಲ್ಲಿಯೂ ಕಸದ ಸಮಸ್ಯೆ ದೂರವಾಗಿದೆ. ಬೆಳಗ್ಗೆ 6:00ಕ್ಕೆ ಪೌರಕಾರ್ಮಿಕರು ಕಸ ವಿಲೇವಾರಿ ಮಾಡುವ ಟಂಟಂಗಳನ್ನು ಬಡಾವಣೆಗಳಲ್ಲಿ ತಂದ ಕೂಡಲೇ ನಿವಾಸಿಗಳು ಕಸ ಹಾಕುತ್ತಿದ್ದಾರೆ. ನಂತರ ನಗರಸಭೆ ಟ್ರ್ಯಾಕ್ಟರ್‌ಗಳ ಮೂಲಕ ಕಸವನ್ನು ನೇರವಾಗಿ ನಗರ ಹೊರವಲಯದ ಭಂಕೂರ ಗ್ರಾಮದಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ತೆಗೆದುಕೊಂಡು ಹೋಗುವ ವ್ಯವಸ್ಥೆ ಮಾಡಲಾಗುತ್ತಿದೆ.

ಕಸವಿಲೇವಾರಿ ಮಾಡಲು ಮೂಲೆ ಸೇರಿದ್ದ 10 ವಾಹನಗಳಲ್ಲಿ ಐದು ವಾಹನ ಬಳಕೆ ಮಾಡುತ್ತಿರುವುದರಿಂದ ನಗರದಲ್ಲಿ ರಸ್ತೆಗಳ ಪಕ್ಕದಲ್ಲಿ ವಿವಿಧ ಬಡಾವಣೆಗಳಲ್ಲಿ ಸಂಗ್ರಹವಾಗುತ್ತಿದ್ದ ಕಸ ಸದ್ಯ ಮಾಯವಾಗುತ್ತಿದೆ. ಅಲ್ಲದೇ ಸಾರ್ವಜನಿಕರು ರಸ್ತೆ ಬದಿಯಲ್ಲಿ ಕಸ ಚೆಲ್ಲುವುದನ್ನು ಕಡಿಮೆ ಮಾಡಿದ್ದಾರೆ. ಅಲ್ಲದೇ ನಗರಸಭೆಯಿಂದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ನೈರ್ಮಲ್ಯ ಹಾಗೂ ಪರಿಸರ ಅಭಿಯಂತರ ಅಭಯಕುಮಾರ ತಿಳಿಸಿದ್ದಾರೆ.

ಪೌರ ಕಾರ್ಮಿಕರ ಕೊರತೆಯಿಂದ ತಲೆದೋರಿದ್ದ ಸಮಸ್ಯೆಯಿಂದ ನಗರದಲ್ಲಿ ಸ್ವಚ್ಛತೆ ಮಾಯವಾಗಿತ್ತು. ಈಗ ಹೊರಗುತ್ತಿಗೆ ಮೂಲಕ ಕಾರ್ಮಿಕರನ್ನು ತೆಗೆದುಕೊಂಡು ಸುಮಾರು ಎರಡ್ಮೂರು ವರ್ಷಗಳಿಂದ ಸಂಗ್ರಹವಾದ ಕಸ ವಿಲೇವಾರಿ ಮಾಡುತ್ತಿದ್ದೇವೆ. ಜನವರಿ ಮೊದಲನೇ ವಾರದಲ್ಲಿ ಮನೆಮನೆಗೆ ತಳ್ಳೋ ಗಾಡಿ ಬಳಸಿಕೊಂಡು ಕಸ ಸಂಗ್ರಹ ಮಾಡಲಾಗುತ್ತದೆ. ಗೃಹ ಬಳಕೆ ಪ್ಲಾಸ್ಟಿಕ್‌, ಒಣ ಕಸ ರಸ್ತೆ ಮೇಲೆ ಎಸೆಯುವುದನ್ನು ಮಾಡದೇ ಸಾರ್ವಜನಿಕರು ಮನೆ ಹತ್ತಿರ ಬರುವ ವಾಹನದಲ್ಲಿ ಹಾಕಬೇಕು. ನಗರದ ಅಂದ ಹೆಚ್ಚಿಸುವ ಜವಾಬ್ದಾರಿ ನಮ್ಮ ಹೊಣೆ. ಇದಕ್ಕೆ ಸಾರ್ವಜನಿಕರ ಸಹಕಾರ ಮುಖ್ಯ.
. ಬಿ. ಬಸಪ್ಪ, ನಗರಸಭೆ ಪೌರಾಯುಕ್ತ 

ನಗರದಲ್ಲಿ ಎಲ್ಲಿ ನೋಡಿದರೂ ಕಸ ತುಂಬಿಕೊಂಡಿದ್ದ ಚರಂಡಿಗಳು ಸಿಗುತ್ತಿದ್ದವು. ಈಗ ನಗರಸಭೆಯವರು ಹೊರಗುತ್ತಿಗೆ ಮೂಲಕ ಕಾರ್ಮಿಕರನ್ನು ತೆಗೆದುಕೊಂಡು ಸ್ವಚ್ಛತೆ ನಡೆಸಿದ್ದಾರೆ. ಇದಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜನರು ತಮ್ಮ ಮನೆ ಕಸವನ್ನು ರಸ್ತೆಗೆ, ಚರಂಡಿಯೊಳಗೆ ಎಸೆಯದೇ ದಿನಾಲೂ ಕಸ ಸಂಗ್ರಹಣೆ ಮಾಡಲು ಬರುವ ವಾಹಗಳಲ್ಲಿ ಹಾಕಿ. ನಗರಸಭೆ ಕಾರ್ಯಕ್ಕೆ ಸಹಕಾರ ನೀಡಿ.
.ಡಾ| ಅಹ್ಮದ್‌ ಪಟೇಲ್‌, ನಗರಸಭೆ ಸದಸ್ಯ

ಮಲ್ಲಿನಾಥ ಜಿ. ಪಾಟೀಲ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.