ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಶ್ರಮ
Team Udayavani, Sep 8, 2022, 5:48 PM IST
ಸೇಡಂ: ಮತಕ್ಷೇತ್ರದಲ್ಲಿ ಹಲವಾರು ಸಮಸ್ಯೆಗಳು ತಾಂಡವವಾಡುತ್ತಿವೆ. ಅವುಗಳಿಗೆ ಮುಕ್ತಿ ನೀಡುವ ನಿಟ್ಟಿನಲ್ಲಿ ತಮ್ಮ ಜೀವ ಇರುವವರೆಗೂ ಶ್ರಮಿಸಲು ತಾವು ಸದಾ ಸಿದ್ಧ ಎಂದು ಜೆಡಿಎಸ್ ಮುಖಂಡ ಬಾಲರಾಜ ಗುತ್ತೇದಾರ ಹೇಳಿದರು.
ತಾಲೂಕಿನ ಖಂಡೇರಾಯನಪಲ್ಲಿಯಲ್ಲಿ 21ನೇ ದಿನದ ಪಾದಯಾತ್ರೆಯಲ್ಲಿ ಮನೆ, ಮನೆಗೆ ತೆರಳಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಮಾತನಾಡಿದ ಅವರು, ಮತಕ್ಷೇತ್ರದಲ್ಲಿ ಹಲವಾರು ಗ್ರಾಮಗಳು ಮೂಲಸೌಕರ್ಯದಿಂದ ವಂಚಿತವಾಗಿವೆ. ವಿದ್ಯುತ್, ಕುಡಿಯುವ ನೀರು, ಶೌಚಾಲಯ, ರಸ್ತೆ, ಆಸ್ಪತ್ರೆ ಸೇರಿ ಅನೇಕ ಸೌಲಭ್ಯಗಳಿಲ್ಲದೇ ಸಾರ್ವಜನಿಕರು ಪರದಾಡುವಂತಾಗಿದೆ. ಆಡಳಿತರೂಢ ಬಿಜೆಪಿ ಹಾಗೂ ಈ ಮೊದಲು ಆಡಳಿತದಲ್ಲಿದ್ದ ಕಾಂಗ್ರೆಸ್ ಎರಡು ಪಕ್ಷಗಳು ಜನರ ಕುಂದುಕೊರತೆ ನಿವಾರಿಸುವಲ್ಲಿ ವಿಫಲವಾಗಿವೆ ಎಂದು ಆರೋಪಿಸಿದರು.
ಕ್ಷೇತ್ರದ ಜನತೆ ಬಿಜೆಪಿ ಮತ್ತು ಕಾಂಗ್ರೆಸ್ ಎರಡು ರಾಷ್ಟ್ರೀಯ ಪಕ್ಷಗಳ ನಡೆಗೆ ಬೇಸತ್ತು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪ್ರಾದೇಶಿಕ ಹಾಗೂ ರೈತಪರ, ಜನಪರ ಪಕ್ಷವಾದ ಜೆಡಿಎಸ್ ಪಕ್ಷದತ್ತ ಒಲವು ತೋರುತ್ತಿದ್ದು, ಮುಂದೆ ಜೆಡಿಎಸ್ ಅಧಿಕಾರಕ್ಕೆ ಬರುವುದು ನಿಶ್ಚಿತ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಜನಪರ ಆಡಳಿತ ಜೆಡಿಎಸ್ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.
ಬಾಲರಾಜ ಬ್ರಿಗೇಡ್ ತಾಲೂಕಾಧ್ಯಕ್ಷ ಶಿವಕುಮಾರ ನಿಡಗುಂದಾ, ಜೆಡಿಎಸ್ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾವತಿ ಗೊಬ್ಬೂರ, ಪರ್ವಿನ್ ಬೇಗಂ, ಅನಿಲ ಗುತ್ತೇದಾರ, ಲಕ್ಷಿ¾à, ಪರಮೇಶ್ವರ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ