ಬರ ಬವಣೆ 37 ಗ್ರಾಮಗಳಲ್ಲಿ ನೀರಿನದ್ದೇ ಸಮಸ್ಯೆ
Team Udayavani, Feb 22, 2019, 6:43 AM IST
ಚಿಂಚೋಳಿ: ತಾಲೂಕಿನಲ್ಲಿ ಬಿಸಿಲಿನ ಪ್ರಖರತೆ ದಿನೇ ದಿನೇ ಹೆಚ್ಚುತ್ತಿದ್ದು, ಕೊಳವೆ ಮತ್ತು ತೆರದ ಬಾವಿಗಳಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಇದರಿಂದ ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ.
ಶಾಸಕ ಡಾ| ಉಮೇಶ ಜಾಧವ ಕಳೆದ ಮೂರು ತಿಂಗಳಿಂದ ತಾಲೂಕು ಮಟ್ಟದ ಕೆಡಿಪಿ ಸಭೆ ನಡೆಸಿಲ್ಲ. ಅಲ್ಲದೇ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮ-ತಾಂಡಾಗಳಿಗೆ ಒಮ್ಮೆಯೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆ ಆಲಿಸಿಲ್ಲ. ತಾಲೂಕಿನಲ್ಲಿ 37 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ.
262 ಕೊಳವೆ ಬಾವಿಗಳಲ್ಲಿ ಒಟ್ಟು 183 ಸುಸ್ಥಿತಿಯಲ್ಲಿವೆ. 81 ಕೊಳವೆಬಾವಿ ಬತ್ತಿ ಹೋಗಿವೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮೂಲಗಳಿಂದ ತಿಳಿದು ಬಂದಿವೆ. ರುಮ್ಮನಗೂಡ, ಪಸ್ತಪುರ ರಟಕಲ್, ಗಂಜಗೇರಾ, ರಾಮತಿರ್ಥ, ಸುಂಠಾಣ, ಗರಗಪಳ್ಳಿ, ಯಲ್ಮಾಮಡಿ, ಮೋನುನಾಯಕ ತಾಂಡಾ, ಸಿರಸನ ಬುಗಡಿ ತಾಂಡಾ, ಮೋಘಾ, ಕುಂಚಾವರಂ, ಮೊಗದಂಪುರ, ಚಿಂದಾನೂರ, ಚಾಪ್ಲಾನಾಯಕ ತಾಂಡಾ, ಚಿಕ್ಕನಿಂಗದಳ್ಳಿ, ಜಿಲವರ್ಷ, ಧರ್ಮಸಾಗರ, ಅಂತಾವರಂ, ಕುಸರಂಪಳ್ಳಿ, ನಾಗಾಇದಲಾಯಿ, ಸೂರುನಾಯಕ ತಾಂಡಾ, ಬೆನಕೆಪಳ್ಳಿ, ಫತ್ತುನಾಯಕ ತಾಂಡಾ, ಎಂಪಳ್ಳಿ, ಗುರಂಪಳ್ಳಿ, ಇದ್ದಲಮೊಕ ತಾಂಡಾ, ಗೊಂದಲಸೇತ ತಾಂಡಾ, ರಾಮಚಂದ್ರ ನಾಯಕ ತಾಂಡಾ, ಪೆದ್ದಾತಾಂಡಾ, ಸೇರಿಭಿಕನಳ್ಳಿ ತಾಂಡಾಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದೆ. ಆದರೂ ಸಂಬಂಧಿಸಿದ ಇಲಾಖೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿಲ್ಲ ಎಂದು ಎಂಬುದು ಸಾರ್ವಜನಿಕರ ಆರೋಪವಾಗಿದೆ.
ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು 170 ಲಕ್ಷ ರೂ.ಅನುದಾನ ನೀಡುವಂತೆ ಟಾಸ್ಕ್ಫೋರ್ಸ್ ಸಮಿತಿ ಕ್ರಿಯಾ ಯೋಜನೆ ತಯಾರಿಸಿ ಜಿಲ್ಲಾಧಿಕಾರಿಗಳಿಗೆ ಸಲ್ಲಿದೆ. ಆದರೆ ಅನುದಾನ ಇನ್ನು ಬಿಡುಗಡೆ ಯಾಗಿಲ್ಲ ಎಂದು ಹೇಳಲಾಗುತ್ತಿದೆ.
ಕೆಳದಂಡ ಮುಲ್ಲಾಮಾರಿ ಜಲಾಶಯದಿಂದ ನೀರು ಹರಿದುಬಿಟ್ಟಿದ್ದರಿಂದ ನದಿ ದಂಡೆಯಲ್ಲಿರುವ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಸ್ವಲ್ಪಮಟ್ಟಿಗೆ ಸುಧಾರಿಸಿದೆ. ಆದರೆ ಇನ್ನುಳಿದ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗುತ್ತಿ¨
ಶಾಮರಾವ ಚಿಂಚೋಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
MUST WATCH
ಹೊಸ ಸೇರ್ಪಡೆ
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ