ತಾಂಡಾ-ಗ್ರಾಮಗಳಲ್ಲೀಗ ನೀರು ದೊರೆತ ಸಂಭ್ರಮ


Team Udayavani, Jan 16, 2018, 11:50 AM IST

gul-8.jpg

ಚಿಂಚೋಳಿ: ತಾಲೂಕಿನ ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಹಾಗೂ ಬೇಸಿಗೆ ದಿನಗಳಲ್ಲಿ ಜನ ಜಾನುವಾರುಗಳಿಗೆ ನೀರಿನ ಸಮಸ್ಯೆ ಆಗದಂತೆ ಸರಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಅದರಲ್ಲಿ ತಾಲೂಕಿನ ಗಡಿಲಿಂಗದಳ್ಳಿ ಬಹುಗ್ರಾಮ ಯೋಜನೆ ಯಶಸ್ವಿಯಾಗಿ ಗ್ರಾಮ, ತಾಂಡಾಗಳಿಗೆ ನೀರು ಸರಬರಾಜು ಆಗುತ್ತಿರುವುದರಿಂದ ಸದಾ ನೀರಿನ ದಾಹದಿಂದ ಬಳಲುತ್ತಿದ್ದ ಜನರಲ್ಲಿ ಸಂತಸದ ಕಳೆ ಮೂಡಿಸಿದೆ.

ತಾಲೂಕಿನ ಐನಾಪುರ ವಲಯದಲ್ಲಿ ಬರುವ ಬಹುತೇಕ ಗ್ರಾಮ, ತಾಂಡಾಗಳು ಬೇಸಿಗೆ ದಿನಗಳಲ್ಲಿ ಸಾಕಷ್ಟು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವುದರಿಂದ ಸರಕಾರದಿಂದ 2015-16ನೇ ಸಾಲಿನಲ್ಲಿ ಗಡಿಲಿಂಗದಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ತಾಂಡಾ/ಗ್ರಾಮಗಳಿಗೆ ಶುದ್ಧ ನೀರು ಪೂರೈಕೆಗೆ ಬಹುಗ್ರಾಮ ನೀರಿನ ಯೋಜನೆ ಮಂಜೂರಿಗೊಂಡಿದೆ. ಯೋಜನೆ ಅನುಷ್ಠಾನಕ್ಕಾಗಿ 4 ಕೋಟಿ ರೂ. ಅನುದಾನ ನೀಡಿ ಕಾಮಗಾರಿಯನ್ನು ತಾಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ-ವಿಭಾಗಕ್ಕೆ ವಹಿಸಿಕೊಡಲಾಗಿದೆ.

ಚೆನ್ನೂರ ಗ್ರಾಮದ ಹತ್ತಿರ ಇರುವ ಕೆಳದಂಡೆ ಮುಲ್ಲಾಮಾರಿ ಜಲಾಶಯದಿಂದ ದಿನನಿತ್ಯ ನೀರು ಪೂರೈಕೆ ಆಗುತ್ತಿದೆ.
2017ರಲ್ಲಿ ಗಡಿಲಿಂಗದಳ್ಳಿ ಬಹುಗ್ರಾಮ ಕುಡಿಯುವ ನೀರು ಯೋಜನೆ ಪ್ರಾರಂಭ ಆಗಿರುವುದರಿಂದ ಕಾನೂ ನಾಯಕ
ತಾಂಡಾ, ಫತ್ತು ನಾಯಕ ತಾಂಡಾ, ರೂಪ್ಲಾ ನಾಯಕ ತಾಂಡಾ, ಹೇಮಲಾ ನಾಯಕ ತಾಂಡಾ, ಶಿವರಾಮ ನಾಯಕ
ತಾಂಡಾ, ಚೆನ್ನೂರ ತಾಂಡಾ ಜನರು ನೀರಿನ ಉಪಯೋಗ ಪಡೆದುಕೊಳ್ಳುತ್ತಿದ್ದಾರೆ. ಹೀಗಾಗಿ ಮಹಿಳೆಯರ ಮುಖದಲ್ಲಿ
ಮಂದಹಾಸ ಮೂಡಿದೆ.

ಕಳೆದ ಎರಡು ದಶಕಗಳಿಂದ ಬೇಸಿಗೆ ದಿನಗಳಲ್ಲಿ ಕುಡಿಯುವ ನೀರಿನ ಬರ ಎದುರಿಸುತ್ತಿದ್ದ ಐನಾಪುರ, ಚಂದನಕೇರಾ, ಪಸ್ತಪುರ, ಮೋಘಾ, ಹೂವಿನಬಾವಿ, ಸಾಸರಗಾಂವ್‌, ರಾಣಾಪುರ, ರುಮ್ಮನಗೂಡ ಭೂಯ್ನಾರ(ಕೆ) ಖಾನಾಪುರ,
ಕೊಟಗಾ, ಚೆಂಗಟಾ, ಪಂಗರಗಾ, ಗಡಿಲಿಂಗದಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಲ್ಲಿ ಈಗಾಗಲೇ ಚಂದನಕೇರಾ
ಬಹುಗ್ರಾಮ ಯೋಜನೆಯಿಂದ ಕುಡಿಯುವ ನೀರು ಸರಬರಾಜು ಆಗುತ್ತಿರುವುದರಿಂದ ಕಳೆದ ವರ್ಷದ ಬೇಸಿಗೆ
ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಲಿಲ್ಲವೆಂದು ಎಇಇ ಶಿವಾಜಿರಾವ ಡೋಣಿ ತಿಳಿಸಿದ್ದಾರೆ.

ಚಂದನಕೇರಾ ಬಹುಗ್ರಾಮಕ್ಕೆ 19 ಕೋಟಿ ರೂ. ಗಡಿಲಿಂಗದಳ್ಳಿ-ಐನಾಪುರ ಗ್ರಾಮ ಯೋಜನೆಗೆ 4ಕೋಟಿ ರೂ.
ಮತ್ತು ಪಸ್ತಪುರ-ಹೂವಿನಬಾವಿ ಬಹುಗ್ರಾಮ ಯೋಜನೆಗೆ 5ಕೋಟಿ ರೂ. ನೀಡಿದ್ದರಿಂದ ಯೋಜನೆಗಳು ಹಿಂದುಳಿದ ಗ್ರಾಮೀಣ ಪ್ರದೇಶದಲ್ಲಿ ಯಶಸ್ವಿ ಆಗಿರುವುದರಿಂದ ಸದ್ಯ ಕುಡಿಯುವ ನೀರಿನ ಸಮಸ್ಯೆ ಎದುರಾಗಿಲ್ಲ ಎಂದು ಎಇ ರಾಮಚಂದ್ರ ಜಾಧವ್‌ ತಿಳಿಸಿದ್ದಾರೆ.

ನೀರು ದೊರೆತಿದ್ದು ಸಂತಸ ತಂದಿದೆ
ಗಡಿಲಿಂಗದಳ್ಳಿ ಗ್ರಾಪಂ ವ್ಯಾಪ್ತಿಯ ತಾಂಡಾಗಳಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಶಾಸಕ ಡಾ| ಉಮೇಶ ಜಾಧವ ಬಹುಗ್ರಾಮ ಯೋಜನೆ ಮಂಜೂರಿಗೊಳಿಸಿದ್ದಾರೆ. ಈಗ ಎಲ್ಲ ತಾಂಡಾದ ಜನರು ನೀರು ಪಡೆದುಕೊಳ್ಳುತ್ತಿದ್ದಾರೆ. ನಮಗೆ ಖುಷಿ ತಂದಿದೆ. ಒಟ್ಟಾರೆ ಗ್ರಾಮಸ್ಥರು ಬಹು ದಿನಗಳಿಂದ ಎದುರಿಸುತ್ತಿದ್ದ ಕುಡಿಯುವ ನೀರಿನ ಬರ ಬಹುಗ್ರಾಮ ಯೋಜನೆ ಮೂಲಕ ನೀಗಿದಂತಾಗಿದೆ. 
 ವಿಜಯಕುಮಾರ ರಾಠೊಡ, ಗ್ರಾಪಂ ಸದಸ್ಯ

ಶಾಮರಾವ ಚಿಂಚೋಳಿ

ಟಾಪ್ ನ್ಯೂಸ್

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.