ನೀರು ಬಿಡುಗಡೆ: ಮರಳು ದಂಧೆಗೆ ದಾರಿ!


Team Udayavani, Feb 10, 2019, 8:52 AM IST

gul-2.jpg

ಕಲಬುರಗಿ: ಈ ಹಿಂದೆ ಬ್ಯಾರೇಜ್‌ನಿಂದ ನೀರು ಖಾಲಿ ಮಾಡಿ ಮರಳು ಎತ್ತಿ ಹಾಕಿರುವಂತೆ ಈಗಲೂ ಅದೇ ನೀತಿ ಅನುಸರಿಸುವ ಕಾರ್ಯ ತೆರೆ ಮರೆಯಲ್ಲಿ ನಡೆದಿದೆಯೇ ಎನ್ನುವ ಅನುಮಾನ ಈಗ ಕಾಡತೊಡಗಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಗುರುವಾರ ಜಿಲ್ಲೆಯ ಜೇವರ್ಗಿ ತಾಲೂಕು ಭೀಮಾ ನದಿಗೆ ನಿರ್ಮಿಸಲಾದ ಕಲ್ಲೂರು ಬ್ಯಾರೇಜ್‌ನಿಂದ ನೀರು ಹರಿಬಿಡಲಾಗಿದೆ.

ನದಿ ಕೆಳಗಿನ ಹಾಗೂ ಮೇಲ್ಭಾಗದ ರೈತರಿಗೆ ಮಾಹಿತಿ ನೀಡದೇ ನೀರು ಬಿಡಲಾಗಿದೆ. ಬ್ಯಾರೇಜ್‌ನಲ್ಲಿ ನೀರು ಇದೆ ಎನ್ನುವ ಆಶಾಭಾವನೆಯೊಂದಿಗೆ ಕೆಲವು ರೈತರು ಗೋಧಿ, ಕಡಲೆ ಬಿತ್ತಿದ್ದಾರೆ. ಒಂದು ಸಲ ನೀರು ಬಿಟ್ಟರೆ ಬೆಳೆ ಕೈಗೆ ಬರಬಹುದು ಎಂಬ ಮಹಾದಾಸೆ ಹೊಂದಿದ್ದ ರೈತರಿಗೆ ಈಗ ನಿರಾಸೆಯಾಗಿದೆ.

ಯಾವುದೇ ಅಲ್ಪಾವಧಿ ಬೆಳೆ ಬೆಳೆಯಬಾರದು ಎಂದು ಕೆಬಿಜೆಎನ್‌ಎಲ್‌ ಅಧಿಕಾರಿಗಳು ಹೇಳಿಲ್ಲ. ಆದರೆ ಮರಳು ಮಾಫಿಯಾಕ್ಕೆ ಕುಮ್ಮಕ್ಕು ನೀಡುವ ಉದ್ದೇಶದಿಂದಲೇ ನೀರು ಬಿಡಲಾಗಿದೆ ಎನ್ನಲಾಗುತ್ತಿದೆ. ಕಲಬುರಗಿ ಮಹಾನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಸರಡಗಿ ಬ್ಯಾರೇಜ್‌ನಲ್ಲಿ ನೀರು ಸಂಗ್ರಹಿಸಲು ಬಿಡಲಾಗುತ್ತಿದೆ ಎನ್ನುವ ಸಬೂಬು ಹೇಳಲಾಗುತ್ತಿದೆ ಎಂದು ಆರೋಪಿಸಲಾಗುತ್ತಿದೆ.

ಮರಳು ದಂಧೆ ಶುರು: ಕಲ್ಲೂರು ಬ್ಯಾರೇಜ್‌ನಿಂದ ನೀರು ಖಾಲಿ ಮಾಡುತ್ತಿದ್ದಂತೆ ಅಕ್ರಮ ಮರಳುಗಾರಿಕೆ ಶುರುವಾಗಿದೆ. ಒಮ್ಮೆಲೆ ನೂರಾರು ಲಾರಿಗಳು ನದಿಗಿಳಿದಿವೆ. ಹಿಟಾಚಿಗಳ ಮೂಲಕ ಮರಳು ಎತ್ತುವಳಿ ಮಾಡಲಾಗುತ್ತಿದೆ. ಮರಳು ತುಂಬಿದ ಲಾರಿಗಳು ರೈತರ ಹೊಲಗಳ ಮೂಲಕ ದಾರಿ ಮಾಡಿಕೊಂಡು ಸಾಗುತ್ತಿವೆ. ಹಾಳಾಗುತ್ತಿರುವ ಹೊಲಗಳನ್ನು ರಕ್ಷಿಸುವಂತೆ ರೈತರು ಪೊಲೀಸರು ಹಾಗೂ ಕಂದಾಯ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಚುನಾವಣೆ ಸಂದರ್ಭದಲ್ಲೆ ಜೋರು: ಅಕ್ರಮ ಮರಳುಗಾರಿಕೆ ದಂಧೆ ಚುನಾವಣೆ ಸಂದರ್ಭದಲ್ಲೆ ಜೋರಾಗಿ ನಡೆಯುತ್ತದೆ. ಕಳೆದ ವರ್ಷದ ವಿಧಾನಸಭೆ ಚುನಾವಣೆ ವೇಳೆಯಲ್ಲಿ ಹಗಲಿರಳು ರಾಜಾರೋಷವಾಗಿ ಅಕ್ರಮ ಮರಳುಗಾರಿಕೆ ನಡೆದಿತ್ತು. ಚುನಾವಣೆ ಮುಗಿದ ನಂತರ ಕಳೆದ ಜೂನ್‌ ತಿಂಗಳಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಜಂಟಿಯಾಗಿ ದಾಳಿ ನಡೆಸಿ, ಭೀಮಾ ನದಿ ದಡದ ಅಫಜಲಪುರ ಹಾಗೂ ಜೇವರ್ಗಿ ತಾಲೂಕಿನ ವಿವಿಧೆಡೆ ಅಕ್ರಮ ಮರಳು ದಾಸ್ತಾನು ಅಡ್ಡೆಗಳಲ್ಲಿ ಸಂಗ್ರಹಿಸಿದ್ದ ಕೋಟ್ಯಂತರ ರೂ. ಮೊತ್ತದ ಮರಳು ಜಪ್ತಿ ಮಾಡಲಾಗಿತ್ತು. ಆದರೆ, ವಶಪಡಿಸಿಕೊಂಡ ಮರಳು ಏನಾಯಿತು ಎನ್ನುವುದರ ಕುರಿತು ಯಾರ ಬಳಿಯೂ ಸ್ಪಷ್ಟ ಮಾಹಿತಿ ಇಲ್ಲ.

ಅಕ್ರಮ ಮರಳುಗಾರಿಕೆ ತಡೆಗಟ್ಟಲಾಗುವುದು, ಅಕ್ರಮದಲ್ಲಿ ಭಾಗಿಯಾದ ಪೊಲೀಸ್‌ ಅಧಿಕಾರಿಗಳು ಮತ್ತು ಪೊಲೀಸರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಎಸ್‌ಪಿ ಸ್ಪಷ್ಟವಾಗಿ ತಿಳಿಸಿದ್ದರು. ಆದರೆ, ಎಸ್‌ಪಿ ಎನ್‌. ಶಶಿಕುಮಾರ ಹೇಳಿಕೆ ಎಳ್ಳು ಕಾಳಷ್ಟು ಕಾರ್ಯರೂಪಕ್ಕೆ ಬಾರದೇ ಎಂದಿನಂತೆ ಮರಳುಗಾರಿಕೆ ನಡೆದಿರುವುದು ಆಡಳಿತ ವ್ಯವಸ್ಥೆಗೆ ಹಿಡಿದ ಕನ್ನಡಿ ಎನ್ನಬಹುದು.

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅಕ್ರಮ ಮರಳುಗಾರಿಕೆ ತಡೆಗೆ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದರು. ಇದಾದ ಒಂದೆರಡು ವಾರಗಳ ಕಾಲ ಸ್ಥಗಿತಗೊಂಡಿದ್ದ ಅಕ್ರಮ ಮರಳುಗಾರಿಕೆ ಮತ್ತೆ ಎಂದಿನಂತೆ ಶುರುವಾಗಿದೆ. ಒಟ್ಟಾರೆ ಅಕ್ರಮ ಮರಳುಗಾರಿಕೆ ದಂಧೆ ಒಂದು ವರ್ತುಲದೊಳಗಿನ ಒಳ ಒಪ್ಪಂದದ ಮೇರೆಗೆ ನಡೆಯುತ್ತಿದೆ. ಹೀಗಾಗಿ ದಂಧೆಗೆ ಕಡಿವಾಣ ಬೀಳುತ್ತಿಲ್ಲ. ಇದೇ ಕಾರಣಕ್ಕೆ ಅಫಜಲಪುರ, ದೇವಲಗಾಣಗಾಪುರ, ನೇಲೋಗಿ, ಫರಹತಾಬಾದ, ಶಹಾಬಾದ, ಮಳಖೇಡ, ಸೇಡಂ, ಸುಲೇಪೇಟ್ ಪೊಲೀಸ್‌ ಠಾಣಾಧಿಕಾರಿಗಳ ನಿಯೋಜನೆ ದೊಡ್ಡ ಮಟ್ಟದ ಲಾಬಿಯೊಂದಿಗೆ ನಡೆಯುತ್ತಿದೆ.

ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಜನರು ಅಕ್ರಮ ಮರಳುಗಾರಿಕೆ ವಿರುದ್ಧ ಎಲ್ಲಿಯ ವರೆಗೆ ಒಗ್ಗಟ್ಟಾಗಿ ಪ್ರಶ್ನಿಸುವುದಿಲ್ಲವೋ ಅಲ್ಲಿಯ ವರೆಗೆ ಅಕ್ರಮ ಮರಳುಗಾರಿಕೆ ತಡೆ ಅಸಾಧ್ಯ.

ಪ್ರಾದೇಶಿಕ ಆಯುಕ್ತರ ನಿರ್ದೇಶನದ ಮೇರೆಗೆ ಕಲಬುರಗಿ ಮಹಾನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಜೇವರ್ಗಿ ತಾಲೂಕಿನ ಕಲ್ಲೂರ ಬ್ಯಾರೇಜ್‌ನಿಂದ ನೀರುಬಿಡಲಾಗಿದೆ. ಸುತ್ತಮುತ್ತಲಿನ ರೈತರಿಗೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
• ಮುಗಳಿ ಎ.ಎನ್‌.,ಕೆಬಿಜೆಎನ್‌ಎಲ್‌ ಸೂಪರಿಟೆಂಡೆಂಟ್

ಮುನ್ಸೂಚನೆ ನೀಡದೆ ಕಲ್ಲೂರ ಬ್ಯಾರೇಜ್‌ನಿಂದ ಭೀಮಾ ನದಿ ನೀರು ಹರಿ ಬಿಡಲಾಗಿದೆ. ನೀರು ಖಾಲಿ ಆಗುತ್ತಿರುವಂತೆ ದೊಡ್ಡ-ದೊಡ್ಡ ಲಾರಿಗಳ ಮೂಲಕ ಅಕ್ರಮವಾಗಿ ಮರಳು ಸಾಗಾಟ ಜೋರಾಗಿ ನಡೆದಿದೆ.
• ಅಣ್ಣರಾವ್‌ ಪಾಟೀಲ, ಮಾಹೂರ ರೈತ

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.