ಬಸವಸಾಗರ ಜಲಾಶಯದಲ್ಲಿ ನೀರು ಸಂಗ್ರಹ ಕೊಂಚ ಏರಿಕೆ
Team Udayavani, Jun 4, 2018, 10:04 AM IST
ನಾರಾಯಣಪುರ: ಕಳೆದ ಮೇ 18ರಿಂದ ಮಲಪ್ರಭಾ ನದಿ ತೀರ ಹಾಗೂ ಜಲಾಶಯದ ತೀರ ಪ್ರದೇಶಗಳಲ್ಲಿ ಮುಂಗಾರು ಪೂರ್ವದಲ್ಲಿ ಅನೀರಿಕ್ಷಿತವಾಗಿ ಸುರಿದ ಮಳೆಯಿಂದ ಇಲ್ಲಿನ ಬಸವಸಾಗರ ಜಲಾಶಯಕ್ಕೆ ನೀರಿನ ಒಳಹರಿವು ಆರಂಭವಾಗಿದ್ದು, ಜಲಾಶಯದ ನೀರಿನ ಸಂಗ್ರಹ ಮಟ್ಟದಲ್ಲಿ ಕೊಂಚ ಏರಿಕೆ ಕಂಡಿದೆ.
ಕೃಷ್ಣಾ ಅಚ್ಚುಕಟ್ಟು ಪ್ರದೇಶ ಸುಮಾರು ಆರು ಲಕ್ಷ ಹೆಕ್ಟೇರ್ ಪ್ರದೇಶದ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಮಹತ್ವದ ನೀರಾವರಿ ಯೋಜನೆಗಳೊಂದಾದ ಕೃಷ್ಣಾ ಮೇಲ್ದಂಡೆ ಯೋಜನೆ ಅಡಿ ನಿರ್ಮಿಸಲಾದ ಬಸವಸಾಗರ ಜಲಾಶಯವು 1982ರಲ್ಲಿ ಲೋಕಾರ್ಪಣೆಗೊಂಡು ಈ ಭಾಗದ ಜನರ ಜೀವನಾಡಿಯಾಗಿದೆ.
ಉತ್ತರ ಕರ್ನಾಟಕದ ಯಾದಗಿರಿ, ಕಲಬುರಗಿ, ವಿಜಯಪುರ, ರಾಯಚೂರು ಜಿಲ್ಲೆ ಸೇರಿದಂತೆ ಬಸವಸಾಗರ ಹಿನ್ನೀರನ್ನು ಬಳಸಿಕೊಂಡು ಕುಡಿಯುವ ನೀರು, ಬೃಹತ್ನೀರಾವರಿ ಯೋಜನೆ ಅಡಿಯಲ್ಲಿ ಕಾಲುವೆ ಮತ್ತು ಏತ ನೀರಾವರಿಯಿಂದ ನೀರು ಬಳಸಿಕೊಂಡು ಕೃಷಿಗೆ ನೀರಾವರಿ ಸೇರಿದಂತೆ ಉದ್ಯಮಗಳಿಗೆ ಅಗತ್ಯ ನೀರನ್ನು ಒದಗಿಸಲು ಈ ಬೃಹತ್ ಜಲಾಶಯವೇ ಜಲಮೂಲವಾಗಿದೆ.
ಜಲಾಶಯಕ್ಕೆ ಒಳಹರಿವು: ಕೃಷ್ಣಾ ಹಾಗೂ ಮಲಪ್ರಭಾ ನದಿಗಳು ಕೂಡಲ ಸಂಗಮದಲ್ಲಿ ಕೂಡಿ ಸಂಗಮವಾಗುವ ನೀರೇ ಬಸವಸಾಗರ ಜಲಾಶಯದ ಹಿನ್ನೀರಾಗಿದೆ. ಕೃಷ್ಣೆ ಉಗಮವಾದ ಸ್ಥಳ ಮಹಾರಾಷ್ಟ್ರದ ಮಹಾಬಲೇಶ್ವರ ಕಣಿವೆ
ಪ್ರದೇಶ ಸೇರಿದಂತೆ ಕೃಷ್ಣಾ ನದಿ ತೀರದ ಪ್ರದೇಶದಲ್ಲಿ ಸುರಿಯುವ ಮಳೆಯಿಂದಲೇ ಅತ್ಯಧಿಕ ಪ್ರಮಾಣದಲ್ಲಿ ಒಳಹರಿವು ಹರಿದು ಆಲಮಟ್ಟಿ ಲಾಲ್ಬಹದ್ದೂರ ಶಾಸ್ತ್ರೀ ಜಲಾಶಯಕ್ಕೆ ಬಂದು ಸೇರುತ್ತದೆ. ನಂತರ ಆಲಮಟ್ಟಿ ಜಲಾಶಯ ಭರ್ತಿಯಾಗಿ ಹೊರಬಿಡಲಾದ ನೀರು ಇಲ್ಲಿನ ಬಸವಸಾಗರ ಭರ್ತಿಗೆ ಸಹಕಾರಿಯಾಗತ್ತದೆ. ಪ್ರಸ್ತುತ
ಮುಂಗಾರು ಪೂರ್ವವೇ ಮಲಪ್ರಭಾ ನದಿ ತೀರದಲ್ಲಿ ಮಳೆ ಸುರಿದಿದ್ದರಿಂದ ಅನೀರಿಕ್ಷಿತವಾಗಿ ಬಸವಸಾಗರಕ್ಕೆ ಒಳಹರಿವು ಹರಿದು ಬರುತ್ತಿದೆ ಎಂದು ಆಣೆಕಟ್ಟು ಗೇಟ್ಸ್ ಉಪವಿಭಾಗದ ಪ್ರಭಾರಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಆರ್.ಎಲ್. ಹಳ್ಳೂರ ಮಾಹಿತಿ ನೀಡಿದ್ದಾರೆ.
ಆರ್ಟಿಪಿಸಿಎಲ್ಗೆ ಒಂದು ಟಿಎಂಸಿ ಅಡಿ ನೀರು: ರಾಯಚೂರು ಶಾಖೋತ್ಪನ್ನ ವಿದ್ಯುತ್ ಉತ್ಪಾದನ ಘಟಕದ ಬೇಡಿಕೆ ಹಾಗೂ ಸರ್ಕಾರದ ನಿರ್ದೇಶನದಂತೆ ಪ್ರತಿ ವರ್ಷದಂತೆ ಈ ವರ್ಷವೂ ಒಂದು ಟಿಎಂಸಿ ಅಡಿಯಷ್ಟು ನೀರನ್ನು ಜಲಾಶಯದ ಮುಖ್ಯ ಕ್ರಸ್ಟ್ಗೇಟ್ ಮುಖಾಂತರ ನದಿ ಮೂಲಕ ಆರ್ಟಪಿಸಿಎಲ್ ಗೆ ಹರಿಬಿಡಲಾಗಿದೆ. ಮೇ 31ರಿಂದ ಜಲಾಶಯದ ಮುಖ್ಯ ಕ್ರಸ್ಟ್ಗೇಟ್ಗಳನ್ನು ತೆರೆದು ನೀರು ಹರಿಸಿ ಪುನಃ ಜೂ. 2ರ ಸಂಜೆ ನೀರು ಹರಿಸುವುದನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಣೆಕಟ್ಟು ಉಪವಿಭಾಗದ ಪ್ರಭಾರಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಚಂದ್ರ ತಿಳಿಸಿದ್ದಾರೆ.
ಪ್ರಸ್ತುತ ಜಲಾಶಯದ 487.94 ಮೀಟರ್ ನೀರಿನ ಮಟ್ಟದಲ್ಲಿ 17.12 ಟಿಎಂಸಿ ಅಡಿಯಷ್ಟು ನೀರು ಸಂಗ್ರಹಗೊಂಡಿದೆ. ಜಲಾಶಯಕ್ಕೆ ಮೇ 18ರಿಂದ 1200 ಕ್ಯೂಸೆಕ್ನಷ್ಟು ಒಳಹರಿವು ನಿರಂತವಾಗಿ ಬರುವುದಕ್ಕೆ ಆರಂಭವಾಗಿ, ಜೂ.
3ಕ್ಕೆ 738 ಕ್ಯೂಸೆಕ್ನಷ್ಟು ನೀರಿನ ಒಳಹರಿವು ಇದೆ. ಜಲಾಶಯವನ್ನೇ ನೆಚ್ಚಿಕೊಂಡಿರುವ ಪ್ರಮುಖ ನಗರ, ಪಟ್ಟಣಗಳು ಹಾಗೂ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜಿಗೆ ಯಾವುದೇ ತೊಂದರೆಯಿಲ್ಲ ಎಂದು ಮಾಹಿತಿ
ಅಣೆಕಟ್ಟು ಅಧಿಕಾರಿಗಳು ತಿಳಿಸಿದ್ದಾರೆ.
ಬಸವರಾಜ ಶಾರದಳ್ಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್