ಮುಲ್ಲಾಮಾರಿ ಜಲಾಶಯದಿಂದ ಮುಖ್ಯ ಕಾಲುವೆಗೆ ನೀರು
Team Udayavani, Aug 11, 2017, 9:37 AM IST
ಚಿಂಚೋಳಿ: ತಾಲೂಕಿನಲ್ಲಿ ಮಳೆ ಅಭಾವದಿಂದಾಗಿ ಮುಂಗಾರು ಹಂಗಾಮಿನ ಹೆಸರು, ಉದ್ದು, ತೊಗರಿ ಬೆಳೆಗಳು ಬಾಡುತ್ತಿರುವುದರಿಂದ ಶಾಸಕ ಡಾ| ಉಮೇಶ ಜಾಧವ್ ಹಾಗೂ ರೈತರ ಬೇಡಿಕೆಯಂತೆ ಕೆಳದಂಡೆ ಮುಲ್ಲಾಮಾರಿ ಜಲಾಶಯದಿಂದ ಮುಖ್ಯ ಕಾಲುವೆಗೆ ನೀರು ಹರಿದು ಬಿಡಲಾಗಿದೆ ಎಂದು ಯೋಜನೆ ಎಇಇ ಕೃಷ್ಣ ಅಗ್ನಿಹೋತ್ರಿ ತಿಳಿಸಿದ್ದಾರೆ. ತಾಲೂಕಿನ ಮುಲ್ಲಾಮಾರಿ ಜಲಾಶಯದ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಚಿಮ್ಮನಚೋಡ, ತಾಜಲಾಪುರ, ಗಾರಂಪಳ್ಳಿ, ಕನಕಪುರ, ನಿಮಾಹೊಸಳ್ಳಿ, ಚಿಂಚೋಳಿ, ಗೌಡನಹಳ್ಳಿ, ಅಣವಾರ, ಖೋದಂಪುರ, ಹೂಡದಳ್ಳಿ, ಚಿಮ್ಮಾಇದಲಾಯಿ, ಪರದಾರ ಮೋತಕಪಳ್ಳಿ, ದೋಟಿಕೊಳ, ಸುಲೇಪೇಟ, ಬೆಡಕಪಳ್ಳಿ, ರಾಮತೀರ್ಥ, ಯಾಕಾಪುರ ಗ್ರಾಮಗಳ ರೈತರ ಹೊಲಗಳಲ್ಲಿ ಇರುವ ಬೆಳೆಗಳಿಗೆ ನೀರು ಹರಿಸಬೇಕಾಗಿದೆ.
ಕೆಳದಂಡೆ ಮುಲ್ಲಾಮಾರಿ ಜಲಾಶಯದಲ್ಲಿ ರೈತರ ಜಮೀನುಗಳಿಗೆ ನೀರು ಹರಿದು ಬಿಡಲು ಸಾಕಷ್ಟು ನೀರಿನ ಸಂಗ್ರಹಣೆ ಇದೆ. ಒಟ್ಟು 80 ಕಿಮೀ ಉದ್ದ ಎಡದಂಡೆ ಮುಖ್ಯಕಾಲುವೆಗೆ ಈಗಾಗಲೇ 40 ಕಿಮೀ ವರೆಗೆ ನೀರು ಹರಿದು ಹೋಗಿದೆ. ರೈತರ ಮುಂಗಾರಿನ
ಬೆಳೆಗಳಿಗೆ ನೀರು ಅವಶ್ಯಕತೆ ಮತ್ತು ರೈತರ ಬೇಡಿಕೆಯಂತೆ ಆ.6 ರಂದು ಮುಖ್ಯಕಾಲುವೆಗೆ ನೀರು ಹರಿದು ಬಿಡಲಾಗಿದೆ ಎಂದು ಎಇಇ ತಿಳಿಸಿದ್ದಾರೆ. ಕೆಳದಂಡೆ ಮುಲ್ಲಾಮಾರಿ ಜಲಾಶಯ ಗೇಟಿನ ಬಳಿ ಎರಡೂ ದಂಡೆಗೆ ಸಿಮೆಂಟ್ ತಡೆಗೋಡೆ ನಿರ್ಮಿಸಲಾಗುತ್ತಿದೆ. ಸರಕಾರದಿಂದ 37ಕೋಟಿ ರೂ.ಮಂಜೂರಿ ಆಗಿದೆ. ಕಾಮಗಾರಿ ಪ್ರಗತಿಯಲ್ಲಿದ್ದು, ಇನ್ನೊಂದು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
MUST WATCH
ಹೊಸ ಸೇರ್ಪಡೆ
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ