ನಾವದಗಿ: ಶಾಲೆ ಕೋಣೆಯೊಳಗೆ ನುಗ್ಗಿದ ಮಳೆ ನೀರು


Team Udayavani, Jun 8, 2018, 10:57 AM IST

gul-6.jpg

ಚಿಂಚೋಳಿ: ತಾಲೂಕಿನಲ್ಲಿ ಕಳೆದ ಬುಧವಾರ ರಾತ್ರಿಯಿಡಿ ಸುರಿದ ಗುಡುಗು ಮಿಂಚಿನಿಂದ ಕೂಡಿದ ಮಳೆಯಿಂದಾಗಿ ಗ್ರಾಮದಲ್ಲಿ ಇರುವ ಸರಕಾರಿ ಹಿರಿಯ ಮತ್ತು ಪ್ರೌಢಶಾಲೆಗಳ ಪ್ರತಿಯೊಂದು ಕೋಣೆಯಲ್ಲಿ ಮಳೆ ನೀರು ನುಗ್ಗಿದ್ದರಿಂದ ಮಕ್ಕಳು ತೊಂದರೆ ಪಡಬೇಕಾಯಿತು.

ಚಿಂಚೋಳಿ-ಕಲಬುರಗಿ ರಾಜ್ಯ ಹೆದ್ದಾರಿಯಲ್ಲಿ ಇರುವ ನಾವದಗಿ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಸರಕಾರಿ ಪ್ರೌಢ ಶಾಲೆ ಒಂದೇ ಸ್ಥಳದಲ್ಲಿ ನಡೆಯುತ್ತಿದ್ದು, ಮಳೆಗಾಲದಲ್ಲಿ ಎಲ್ಲ ತರಗತಿ ಕೋಣೆಗಳು ಸಂಪೂರ್ಣ ಸೋರುತ್ತಿವೆ. ಒಟ್ಟು 10 ಕೋಣೆಗಳಲ್ಲಿ ಕೇವಲ ನಾಲ್ಕು ಶಾಲಾ ಕೋಣೆಗಳು ಸ್ವಲ್ಪಮಟ್ಟಿಗೆ ಮಕ್ಕಳು ಕುಳಿತುಕೊಳ್ಳಬಹುದು. ಎಲ್ಲ ಕೋಣೆಗಳು ಶಿಥಿಲಾವಸ್ಥೆಯಿಂದ ಕೂಡಿವೆ.

ಶಾಲೆಯಲ್ಲಿ 1ನೇ ತರಗತಿಯಿಂದ 8ನೇ ತರಗತಿ ವರೆಗೆ ಒಟ್ಟು ಮಕ್ಕಳ ಸಂಖ್ಯೆ140 ಮತ್ತು 9,10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳ ಸಂಖ್ಯೆ 60ಇದೆ. ಪ್ರತಿವರ್ಷ ಮಳೆಗಾಲದಲ್ಲಿ ಗ್ರಾಮದೊಳಗೆ ನಿಂತ ಮಳೆ ನೀರು ಮತ್ತು ಹೊಲಸು ಶಾಲೆ ಆವರಣದೊಳಗೆ ನುಗ್ಗುತ್ತಿರುವುದರಿಂದ ಮಕ್ಕಳಿಗೆ ಕುಳಿತುಕೊಳ್ಳುವುದಕ್ಕಾಗಿ ಸ್ಥಳ ಅಭಾವ ಆಗುತ್ತಿದೆ.

ಪ್ರತಿವರ್ಷ ಮಳೆಗಾಲದಲ್ಲಿ ಕೋಣೆಗಳು ಸೋರಿಕೆ ಆಗುತ್ತಿರುವುದರಿಂದ ಮಕ್ಕಳ ದಾಖಲಾತಿ, ಅಗತ್ಯ ಪಠ್ಯಪುಸ್ತಕಗಳು ಹಾಗೂ ವಿಜ್ಞಾನ ಉಪಕರಣಗಳು ಹಾಳಾಗುತ್ತಿವೆ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು 1968ರಲ್ಲಿ ಪ್ರಾರಂಭಿಸಲಾಗಿದೆ. ಇದನ್ನು ಇನ್ನುವರೆಗೆ ದುರಸ್ತಿ ಮಾಡದೆ ಇರುವುದರಿಂದ ಶಿಥಿಲಾವಸ್ಥೆಗೆ ತಲುಪಿದೆ. ವಿದ್ಯಾರ್ಥಿಗಳು ಭಯದ ವಾತಾವರಣದಲ್ಲಿ ವಿದ್ಯಾಭ್ಯಾಸ ಮಾಡುವ ಪರಿಸ್ಥಿತಿ ಇದೆ. 

2015ರಲ್ಲಿ ಸರಕಾರಿ ಪ್ರೌಢಶಾಲೆ ಹೊಸದಾಗಿ ಪ್ರಾರಂಭಿಸಲಾಗಿದೆ. ಕಳೆದ ಮೂರು ವರ್ಷಳಿಂದ ಇಲ್ಲಿಯವರೆಗೆ ಕಾಯಂ ಸಹ ಶಿಕ್ಷಕರನ್ನೇ ನೇಮಕಗೊಳಿಸಿಲ್ಲ. ಕೇವಲ ನಿಯೋಜನೆ ಮೇಲೆಯೇ ಬಂದ ಸಹ ಶಿಕ್ಷಕರೇ ಮಕ್ಕಳಿಗೆ ಪಾಠಭೋಧನೆ ಮಾಡುತ್ತಿದ್ದಾರೆ. ನಾವದಗಿ ಮತ್ತು ಹೊಸಳ್ಳಿ ಗ್ರಾಮಗಳ ಮಧ್ಯೆ ಹೊಸ ಪ್ರೌಢಶಾಲೆ ಕಟ್ಟಡ ನಿರ್ಮಾಣಕ್ಕಾಗಿ ಎಚ್‌. ಕೆ.ಆರ್‌.ಡಿ.ಬಿ.ಯಿಂದ ಅನುದಾನ ಬಂದಿದೆ. ಆದರೆ ಶಾಲೆ ಕೋಣಿ ನಿರ್ಮಿಸಿ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟಿಲ್ಲ ಎಂದು ಗ್ರಾಮಸ್ಥರು ದೂರುತ್ತಿದ್ದಾರೆ.

ನಾವದಗಿ ಶಾಲೆ ದುರಸ್ತಿ ಮತ್ತು ನೂತನ ಶಾಲೆ ಕೋಣೆ ಕಟ್ಟಿಸಿ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡುವಂತೆ ಬಿಇಒ ಕಚೇರಿಗೆ ಪತ್ರ ಬರೆಯಲಾಗಿದೆ ಮತ್ತು ಅಧಿಕಾರಿಗಳಿಗೆ ತಿಳಿಸಲಾಗಿದೆ. ಆದರೆ ಯಾವುದೇ ಪ್ರಯೋಜನ ಆಗಿಲ್ಲ. ಮಳೆಗಾಲ ಬಂದರೆ ಸಾಕು ಊರಿನ ಎಲ್ಲ ಹೊಲಸು ನೀರು ಶಾಲೆಯೊಳಗೆ ಬರುತ್ತದೆ. ಊರಿನವರು ಸಹಕಾರ ನೀಡುತ್ತಿಲ್ಲ ಎಂದು ಅಸಮಾಧಾನವಾಗಿದೆ.  ರವಿಕುಮಾರ ಕಾರಪೆಂಟರ, ಮುಖ್ಯಶಿಕ್ಷಕ

ನಾವದಗಿ ಶಾಲೆ ದುಸ್ಥಿತಿ ಬಗ್ಗೆ ಶಾಸಕ ಡಾ| ಉಮೇಶ ಜಾಧವ್‌ ಗಮನಕ್ಕೆ ತರಲಾಗಿದೆ. ಅವರು ಭರವಸೆ ನೀಡಿದ್ದಾರೆಯೇ ಹೊರತು ಕಾರ್ಯರೂಪಕ್ಕೆ ಬಂದಿಲ್ಲ. ಬಿಇಒಗೆ ಮನವಿ ಪತ್ರ ಸಲ್ಲಿಸಿದರೂ ಶಾಲೆ ಸ್ಥಿತಿಗತಿ ಪರಿಶೀಲನೆ ಮಾಡಿಲ್ಲ. ಇಲ್ಲಿ ಹೆಚ್ಚಾಗಿ ಪರಿಶಿಷ್ಟ ಜಾತಿ, ಬಡವರು, ಹಿಂದುಳಿದ ವರ್ಗಗಳ ಮಕ್ಕಳೆ ಅಭ್ಯಸಿಸುತ್ತಾರೆ. ಶಾಲೆಗೆ ಹೊಸ ಕಟ್ಟಡ ನಿರ್ಮಿಸಬೇಕು. ಇಲ್ಲವಾದಲ್ಲಿ ಬರುವ ದಿನಗಳಲ್ಲಿ ಹೋರಾಟ ನಡೆಸುತ್ತೇವೆ. 
 ಭರತ ಬುಳ್ಳ, ಚಿಂತಕೋಟಿ ಗ್ರಾಪಂ ಸದಸ

ನಾವದಗಿ ಗ್ರಾಮದ ಸರಕಾರಿ ಶಾಲೆಯ ದುಸ್ಥಿತಿ ಬಗ್ಗೆ ತಿಳಿಸಿದರೂ ಹಾಗೂ ಮಳೆ ನೀರು ಶಾಲೆಯೊಳಗೆ ಹೊಕ್ಕರೂ ಇಲ್ಲಿಯವರೆಗೆ ಅಧಿಕಾರಿಗಳು ಭೇಟಿ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ. 
 ಅಣ್ಣಾರಾವ ನಾಟೀಕಾರ, ಗ್ರಾಮದ ಮುಖಂಡ

ಟಾಪ್ ನ್ಯೂಸ್

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.