ಬಡವರ ಕಲ್ಯಾಣವೇ ಬಿಜೆಪಿ ಗುರಿ: ಶಾಸಕ ತೇಲ್ಕೂರ
Team Udayavani, Jun 11, 2018, 9:52 AM IST
ಸೇಡಂ: ಬಡವರ ಕಲ್ಯಾಣವೇ ಬಿಜೆಪಿಯ ಪ್ರಮುಖ ಗುರಿಯಾಗಿದೆ ಎಂದು ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಹೇಳಿದರು.
ತಾಲೂಕಿನ ಬುರಗಪಲ್ಲಿ ಗ್ರಾಮದಲ್ಲಿ ಆಯೋಜಿಸಿದ ಪ್ರಧಾನ ಮಂತ್ರಿ ಉಜ್ಜಲ ಯೋಜನೆಯ ಗ್ಯಾಸ್ ಸಿಲೆಂಡರ್ ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿಧಾನಸಭೆ ವ್ಯಾಪ್ತಿಯ ಬಹುತೇಕ ಗ್ರಾಮಗಳನ್ನು ಬಯಲು ಶೌಚ ಮುಕ್ತ ಮಾಡುವ ಉದ್ದೇಶ ಹೊಂದಲಾಗಿದೆ. ಕೇಂದ್ರ ಸರ್ಕಾರದ ಅನೇಕ ಯೋಜನೆಗಳನ್ನು ಜನರ ಏಳ್ಗೆಗಾಗಿ ರೂಪಿಸಲಾಗಿದೆ. ಅವುಗಳನ್ನು ಅರಿತು ಸದುಪಯೋಗ ಮಾಡಿಸಿಕೊಳ್ಳಬೇಕು ಎಂದು ಹೇಳಿದರು. ನೂತನ ಶಾಸಕ ರಾಜಕುಮಾರ ಪಾಟೀಲರಿಗೆ ಗ್ರಾಮದಲ್ಲಿ ಮೆರವಣಿಗೆ ನಡೆಸಿ ಅಭಿನಂದಿಸಲಾಯಿತು. ಮಾಜಿ ಶಾಸಕ ಬಸವಂತರೆಡ್ಡಿ ಪಾಟೀಲ ಮೋತಕಪಲ್ಲಿ, ತಾಪಂ ಸದಸ್ಯ ನಾಗರೆಡ್ಡಿ ದೇಶಮುಖ, ಬಿಜೆಪಿ ಮಾಜಿ ತಾಲೂಕಾಧ್ಯಕ್ಷ ಬಸವರಾಜ ಭೂತಪುರ, ಬಸರೆಡ್ಡಿ ಮಾಲಿಪಾಟೀಲ ಇದ್ದರು.
ಶಕ್ತಿ ಕೇಂದ್ರದ ಅಧ್ಯಕ್ಷ ರಘುನಾಥರೆಡ್ಡಿ ಪೊಲೀಸ ಪಾಟೀಲ ಸ್ವಾಗತಿಸಿದರು. ವಿಷ್ಣು ನಿರೂಪಿಸಿದರು. ತಿರುಪತರೆಡ್ಡಿ ಬುರುಗಪಲ್ಲಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್