ಕವಿ ಕಂಡದ್ದು, ಇತರರಿಗೂ ಕಾಣಬೇಕೆಂದಿಲ್ಲ: ಪ್ರೊ| ನಿಂಗಣ್ಣ


Team Udayavani, Aug 11, 2022, 3:55 PM IST

5-poet

ಕಲಬುರಗಿ: ಯಾವುದು ದೃಢವಾಗಿರುತ್ತದೋ, ಯಾವುದು ಪ್ರತಿಫಲನ ಶಕ್ತಿ ಹೊಂದಿರುತ್ತದೆಯೋ ಮತ್ತು ಯಾವುದು ಪ್ರಕೃತಿದತ್ತವಾಗಿರುತ್ತದೋ ಅದು ಮಾತ್ರವೇ ಹಚ್ಚ ಹಸಿರಿನಿಂದ ಕೂಡಿ ತನ್ನೊಂದಿಗೆ ಇತರರನ್ನು ಹಸಿರಾಗಿಸಿ ಮಟ್ಟಸ ವಾಗಿಡುತ್ತದೋ ಅದು ಖುಷಿ ವಿಚಾರ ಎಂದು ಗುಲ್ಬರ್ಗ ವಿಶ್ವವಿದ್ಯಾಲಯ ಇಂಗ್ಲಿಷ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ| ನಿಂಗಣ್ಣ. ಟಿ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಹೊರವಲದಯಲ್ಲಿರುವ ಶ್ರೀನಿವಾಸ ಸರಡಗಿ ಚಿನ್ನದ ಕಂತಿ ಚಿಕ್ಕವಿರೇಶ್ವರ ಸಂಸ್ಥಾನ ಹಿರೇಮಠದ ಆವರಣದಲ್ಲಿರುವ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸ ಎಸ್‌.ಎಸ್‌. ಪಾಟೀಲರ ವಯೋನಿವೃತ್ತಿ ಪ್ರಯುಕ್ತ “ಬಿಸಿಲೂರಿನ ಹಸಿರು’ ಕೃತಿ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

ವಿಜ್ಞಾನ ಮತ್ತು ಸಾಹಿತ್ಯ ಎರಡೂ ಬೇರೆಯಾಗಿವೆ. ವಿಜ್ಞಾನ ಎಂದರೆ ಒಂದು ವಿಷಯ, ವಸ್ತು ಮತ್ತು ಘಟನೆಯನ್ನು ಸಂಶೋಧನೆ ಮಾಡಿ ಅರ್ಥ ಮಾಡಿಕೊಳ್ಳುವುದು. ಸಾಹಿತ್ಯ ಹಾಗಲ್ಲ. ಅದು ಕವಿ ಕಂಡದ್ದು, ಅದು ಇತರರಿಗೂ ಕಾಣಬೇಕೆಂದಿಲ್ಲ. ಆದರೆ, ಅದನ್ನು ಆಸ್ವಾದಿಸಬಹುದು. ಊಹಾತ್ಮಕವೂ ಮತ್ತು ಅನುಭಾವಾತ್ಮಕವೂ ಇರಬಹುದು. ಅದು ತಿಳಿಯಬೇಕಷ್ಟೆ ಎಂದರು.

ನ್ಯಾಯವಾದಿ ಹಣಮಂತರಾಯ ಅಟ್ಟೂರ ಮಾತನಾಡಿ, ವಿದ್ಯಾರ್ಥಿಗಳಿಗೆ ಅಕ್ಷರದ ಜೊತೆಗೆ ಸಂಸ್ಕಾರ ನೀಡುವ ಯಾವುದಾದರೂ ಕಾಲೇಜು ಇದ್ದರೆ ಅದು ಶ್ರೀನಿವಾಸ ಸರಡಗಿಯ ಸರ್ಕಾರಿ ಪದವಿಪೂರ್ವ ಕಾಲೇಜು. ಪಾಟೀಲರು ಹುದ್ದೆಯಿಂದ ನಿವೃತ್ತಿಯಾಗಿದ್ದಾರೆ. ಆದರೆ ಜೀವನದಿಂದ ನಿವೃತ್ತಿ ಆಗಿಲ್ಲ ಎಂದು ಹೇಳಿದರು.

ಶ್ರೀನಿವಾಸ ಸರಡಗಿಯ ಚಿನ್ನದ ಕಂತಿ ಚಿಕ್ಕವೀರೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಡಾ| ರೇವಣಸಿದ್ಧ ಶಿವಾಚಾರ್ಯರು ಮಾತನಾಡಿ, ಶಿಕ್ಷಕರು, ವಿದ್ಯಾರ್ಥಿಗಳನ್ನು ಸುಂದರ ಮೂರ್ತಿಯಾಗಿ ರೂಪಿಸಿ, ಅಕ್ಷರದೊಂದಿಗೆ ಸಂಸ್ಕಾರ ನೀಡಿ ಒಳ್ಳೆಯ ಸಮಾಜ ನಿರ್ಮಿಸಲು ಸಹಕಾರಿಯಾಗುತ್ತಾರೆ ಎಂದು ಹೇಳಿದರು.

ನಿವೃತ್ತ ಪ್ರಾಂಶುಪಾಲ ವೈಜನಾಥ ಕೊಳಾರ ಮತ್ತು ವಯೋನಿವೃತ್ತಿ ಹೊಂದುತ್ತಿರುವ ಉಪನ್ಯಾಸಕ ಎಸ್‌. ಎಸ್‌.ಪಾಟೀಲ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಶೇಖರಯ್ಯ ರುಮಾಲ್‌ ಅಧ್ಯಕ್ಷತೆ ವಹಿಸಿದ್ದರು. ಮಾಜಿ ವಿದ್ಯಾರ್ಥಿಗಳಾದ ಜಲೀಲ್‌ ಮತ್ತು ಕಾಶಿಬಾಯಿ ಗುತ್ತೇದಾರ ಅನಿಸಿಕೆ ವ್ಯಕ್ತಪಡಿಸಿದರು. ಉಪನ್ಯಾಸಕ ಹಾಗೂ ವಿದ್ಯಾರ್ಥಿ ಸಂಘದ ಸಲಹೆಗಾರ ರಾಜೇಂದ್ರ ರಂಗದಾಳ ನಿರೂಪಿಸಿದರು. ಉಪನ್ಯಾಸಕಿ ಜ್ಯೋತಿ ಸನ್ಮಾನ ಕಾರ್ಯಕ್ರಮ ನಡೆಸಿಕೊಟ್ಟರು. ಮಾಜಿ ವಿದ್ಯಾರ್ಥಿನಿ ನಾಗರತ್ನ ಪ್ರಾರ್ಥಿಸಿದರು. ಉಪನ್ಯಾಸಕ ಶಿವಶರಣಪ್ಪ ತಮ್ಮಗೋಳ ಸ್ವಾಗತಿಸಿದರು.

ಗುರೂಜಿ ಡಿಗ್ರಿ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಕಲ್ಯಾಣಕುಮಾರ ಶೀಲವಂತ, ವೈದ್ಯರಾದ ಡಾ| ಪ್ರವೀಣ ಕಡಾಳೆ, ನಿವೃತ್ತ ಪ್ರಾಂಶುಪಾಲ ಕೆ . ಶರಣಪ್ಪ, ಡಾ| ಮಲ್ಲಿಕಾರ್ಜುನ ವಡ್ಡನಕೇರಿ, ನಿವೃತ್ತ ಪ್ರಾಂಶುಪಾಲ ಅನಂತರಾವ್‌ ಕುಲಕರ್ಣಿ, ಶ್ರಿನಿವಾಸ ಸರಡಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವೀಣಕುಮಾರ ಆಡೆ, ಮಾಜಿ ಅಧ್ಯಕ್ಷ ಸಂಗಯ್ಯ ಸ್ವಾಮಿ ಹಿರೇಮಠ, ಸಂತೋಷ ಆಡೆ, ನಂದ ಆಡೆ, ಚಂದ್ರಕಲಾ ಪಾಟೀಲ, ಡಾ| ಜಯಶ್ರೀ ಪಾಟೀಲ, ಪ್ರಿಯಾಂಕಾ ಪಾಟೀಲ, ಡಾ| ಸಾಗರ ಪಾಟೀಲ , ಮಹಾರುದ್ರ ಲಕ್ಕಾ, ಸರಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕಿ ಸುವರ್ಣಾ, ಧರ್ಮರಾಯ ಜವಳಿ, ಶಿವಯ್ಯ ಸ್ವಾಮಿ, ಶಿವರಾಯ ಮಾಲಿಪಾಟೀಲ ಇದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.