9 ವರ್ಷದ ಮಗನೊಂದಿಗೆ ನೇಣಿಗೆ ಶರಣಾದ ತಾಯಿ: ಪತಿ ವಿರುದ್ಧ ಕಿರುಕುಳ ಆರೋಪ
Team Udayavani, Mar 11, 2021, 3:01 PM IST
ಕಲಬುರಗಿ: ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆಯೊಬ್ಬಳು ಒಂಬತ್ತು ವರ್ಷದ ಮಗನೊಂದಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ.
ಮೃತರನ್ನು ಸುಚಿತ್ರಾ (34 ವ), ಮತ್ತವರ ಮಗ ವಿನೀತ್ (9) ಎಂದು ಗುರುತಿಸಲಾಗಿದೆ.
ಇಲ್ಲಿನ ಓಂ ನಗರದಲ್ಲಿರುವ ಅಪಾರ್ಟ್ಮೆಂಟ್ ನಲ್ಲಿರುವ ಈ ದುರಂತ ನಡೆದಿದ್ದು, ಇಬ್ಬರೂ ಒಂದೇ ಫ್ಯಾನ್ ಗೆ ಸೀರೆಯಿಂದ ನೇಣು ಬಿಗಿದುಕೊಂಡಿದ್ದಾರೆ. ಸುಚಿತ್ರಾ ಪತಿ ಜಗದೀಶ್ ಕಾಂಬಳೆ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದೆ.
ಇದನ್ನೂ ಓದಿ:ಚುನಾವಣೆಯನ್ನು ಪ್ರಜಾಸತ್ತಾತ್ಮಕವಾಗಿ ಗೆಲ್ಲಬೇಕು, ಹಿಂಸೆಯಿಂದಲ್ಲ: ದೀದಿ ಬೆಂಬಲಕ್ಕೆ ಎಚ್ಡಿಕೆ
ಕಾಳಗಿ ಪಟ್ಟಣದ ಬ್ಯಾಂಕ್ ನಲ್ಲಿ ಸಹಾಯಕ ವ್ಯವಸ್ಥಾಪಕರಾಗಿರುವ ಜಗದೀಶ್ ಕಾಂಬಳೆ, ಸುಚಿತ್ರಾಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದ. ಮಗುವಿಗೆ ಮಾತು ಬರಲ್ಲ. ಮಾನಸಿಕ ಅಸ್ವಸ್ಥನನ್ನು ಹೆತ್ತಿದೀಯ ಎಂದು ಹಿಂಸೆ ಕೊಡುತ್ತಿದ್ದ. ಇದೇ ವಿಷಯವಾಗಿ ಆಗಾಗ್ಗೆ ಕಿರುಕುಳ ನೀಡುತ್ತಿದ್ದ. ಹೀಗಾಗಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಗುವಿನೊಂದಿಗೆ ಸುಚಿತ್ರಾ ನೇಣು ಬಿಗಿದುಕೊಂಡಿರುವ ಶಂಕೆ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಒಳಉಡುಪು, ಸ್ಯಾನಿಟರಿ ಪ್ಯಾಡ್ ಗಳಲ್ಲಿ ಕೋಟಿ ರೂ ಮೌಲ್ಯದ ಅಕ್ರಮ ಚಿನ್ನಸಾಗಾಟ: ಮಹಿಳೆ ವಶಕ್ಕೆ
ಸುಚಿತ್ರಾ ಪೋಷಕರು ಬೆಳಗಾವಿಯಲ್ಲಿ ನೆಲೆಸಿದ್ದು, ವಿಷಯ ತಿಳಿದು ಅವರು ನಗರಕ್ಕೆ ಈಗಾಗಲೇ ಆಗಮಿಸಿದ್ದಾರೆ. ಸುಚಿತ್ರಾ ಮತ್ತು ಬಾಲಕನ ಸಾವಿನ ಬಗ್ಗೆ ಆಕೆಯ ತಂದೆ ನೀಡಿರುವ ದೂರಿನ ಮೇರೆಗೆ ಎಂ.ಬಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು