ಕಲಬುರಗಿಯಲ್ಲಿ ಮಹಿಳಾ ಅಂಚೆ ಕಚೇರಿ ಕಾರ್ಯಾರಂಭ


Team Udayavani, Mar 10, 2020, 11:06 AM IST

ಕಲಬುರಗಿಯಲ್ಲಿ ಮಹಿಳಾ ಅಂಚೆ ಕಚೇರಿ ಕಾರ್ಯಾರಂಭ

ಕಲಬುರಗಿ: ಭಾರತೀಯ ಅಂಚೆ ಇಲಾಖೆಯ ಕಲಬುರಗಿ ವಿಭಾಗದ ಮೊದಲ ಮಹಿಳಾ ಅಂಚೆ ಕಚೇರಿ ಸೋಮವಾರದಿಂದ ಆರಂಭವಾಗಿದೆ.

ನಗರದ ಜಗತ್‌ ವೃತ್ತದಲ್ಲಿರುವ ಅಂಚೆ ಕಚೇರಿಯಲ್ಲಿ ಇನ್ಮುಂದೆ ಪೂರ್ಣ ಪ್ರಮಾಣದಲ್ಲಿ ಮಹಿಳೆಯರೇ ಕಾರ್ಯ ನಿರ್ವಹಣೆ ಮಾಡಲಿದ್ದಾರೆ. ಮಹಿಳಾ ದಿನಾಚರಣೆ ಅಂಗವಾಗಿ ಕೇಂದ್ರ ಸರ್ಕಾರ ಎಲ್ಲ ಅಂಚೆ ಕಚೇರಿ ವಿಭಾಗದಲ್ಲಿ ತಲಾ ಒಂದು ಮಹಿಳಾ ಅಂಚೆ ಕಚೇರಿ ಆರಂಭಿಸುವಂತೆ ಮಾರ್ಗದರ್ಶನ ನೀಡಿತ್ತು. ಸರ್ಕಾರದ ಸಲಹೆಯಂತೆ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳನ್ನೊಳಗೊಂಡಿರುವ ಕಲಬುರಗಿ ವಿಭಾಗದಲ್ಲಿ ಜಗತ್‌ ವೃತ್ತದ ಅಂಚೆ ಕಚೇರಿಯನ್ನು ಆಯ್ಕೆ ಮಾಡಿ ಮಹಿಳಾ ಕಚೇರಿಯನ್ನಾಗಿ ಪರಿವರ್ತಿಸಲಾಗಿದೆ.

ಈ ಅಂಚೆ ಕಚೇರಿಯಲ್ಲಿ ಮತ್ತು ಕೆಲಸ-ಕಾರ್ಯಗಳ ನಿರ್ವಹಣೆ ಹಾಗೂ ಗ್ರಾಹಕರಿಗೆ ಎಲ್ಲ ರೀತಿಯ ಸೇವೆಯನ್ನು ಮಹಿಳೆಯರು ಒದಗಿಸುತ್ತಾರೆ. ಒಬ್ಬರು ಅಂಚೆ ಪಾಲಕರು (ಪೋಸ್ಟ್‌ ಮಾಸ್ಟರ್‌), ಇಬ್ಬರು ಅಂಚೆ ಸಹಾಯಕರು ಹಾಗೂ ಒಬ್ಬರು ಪರಿಚಾಕರ ಹುದ್ದೆ ಇದ್ದು, ಎಲ್ಲ ಹುದ್ದೆಗಳಿಗೆ ಮಹಿಳೆಯರನ್ನೇ ನಿಯೋಜಿಸಲಾಗಿದೆ. ಸೋಮವಾರದಿಂದ ಮಹಿಳಾ ಸಿಬ್ಬಂದಿ ತಮ್ಮ ಕಾರ್ಯಭಾರ ಶುರು ಮಾಡಿದರು.

ಕಳೆಗಟ್ಟಿದ ಸಂಭ್ರಮ: ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಮೊದಲ ಮಹಿಳಾ ಅಂಚೆ ಕಚೇರಿಯ ಹೆಗ್ಗಳಿಕೆಗೆ ಪಾತ್ರವಾದ ಕಾರಣ ಕಚೇರಿಯಲ್ಲಿ ಸಂಭ್ರಮ ಮನೆ ಮಾಡಿತ್ತು. ಪರಿಪೂರ್ಣವಾಗಿ ಮಹಿಳಾ ಸಿಬ್ಬಂದಿ ಕಚೇರಿಯಲ್ಲಿ ಇದ್ದರಿಂದ ಕಚೇರಿ ಹೊಸ ಕಳೆಗಟ್ಟಿತ್ತು. ಪೋಸ್ಟ್‌ ಮಾಸ್ಟರ್‌ ನಾಗಮ್ಮ ಬಿ.ಸುರಪುರ, ಅಂಚೆ ಸಹಾಯಕರಾದ ಅಶ್ವಿ‌ನಿ ಮತ್ತು ಗುರುಬಾಯಿ ಹಾಗೂ ಪರಿಚಾರಕಿ ರಾಧಮ್ಮ ಸಗಡರದಿಂದಲೇ ಕಾರ್ಯ ನಿರ್ವಹಿಸಿದರು.

ಈ ಮಹಿಳಾ ಕಚೇರಿ ಕಟ್ಟಡದ ಮೇಲ್ಮಹಡಿಯಲ್ಲಿರುವ ಕಲಬುರಗಿ ವಿಭಾಗದ ಅಂಚೆ ಕಚೇರಿಗಳ ವರಿಷ್ಠ ಅಧೀಕ್ಷಕರ ಕಾರ್ಯಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು. ಸಹಾಯಕ ಅಂಚೆ ಅಧೀಕ್ಷಕರಾದ ಸಿ.ಜಿ. ಕಾಂಬಳೆ ಮತ್ತು ವಿ.ಎಲ್‌. ಚಿತ್ತಕೋಟೆ ಮಹಿಳಾ ಸಿಬ್ಬಂದಿಗೆ ಹೂಗುತ್ಛ ನೀಡಿ ಶುಭ ಹಾರೈಸಿದರು.

ನಮ್ಮ ಮಹಿಳಾ ಅಂಚೆ ಕಚೇರಿ ಎಲ್ಲ ಕಚೇರಿಗಳಂತೆಯೇ ಕಾರ್ಯ ನಿರ್ವಹಿಸಲಿದೆ. ಆದರೆ, ಸಂಪೂರ್ಣವಾಗಿ ಮಹಿಳಾ ಸಹದ್ಯೋಗಿಗಳ ಮಧ್ಯೆ ಕೆಲಸ ಮಾಡುತ್ತೇವೆ ಎಂಬುವುದೇ ಖುಷಿ ವಿಷಯ. ಕಚೇರಿಯಲ್ಲಿ ಮಹಿಳೆಯರೇ ಇರುವುದರಿಂದ ಮಹಿಳಾ ಗ್ರಾಹಕರೊಂದಿಗೆ ಸಂವಹನ ನಡೆಸಲು ತುಂಬಾ ಅನುಕೂಲವಾಗಲಿದೆ. –ಅಶ್ವಿ‌ನಿಫಿ, ಅಂಚೆ ಸಹಾಯಕಿ

ಕಲಬುರಗಿ ವಿಭಾಗದ ವ್ಯಾಪ್ತಿಯ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ 2 ಮುಖ್ಯ ಅಂಚೆ ಕಚೇರಿಗಳು, 72 ಇಲಾಖಾ ಕಚೇರಿಗಳು ಹಾಗೂ 553 ಅಂಚೆ ಕಚೇರಿ ಕಾರ್ಯ ನಿರ್ವಹಿಸುತ್ತಿವೆ. ಇದು ಮೊದಲ ಮಹಿಳಾ ಅಂಚೆ ಕಚೇರಿ ಆಗಿದೆ. ಕಲಬುರಗಿ ನಗರದ ಹೃದಯ ಭಾಗದಲ್ಲಿರುವ ಕಚೇರಿಯಲ್ಲಿ ಎಲ್ಲ ರೀತಿಯ ಅಂಚೆ ಸೇವೆಗಳನ್ನು ಮಹಿಳಾ ಸಿಬ್ಬಂದಿ ಒದಗಿಸಲಿದ್ದಾರೆ. ಮಹಿಳೆಯರಿಗೆ ಹೆಚ್ಚಿನ ತಾಳ್ಮೆ ಹಾಗೂ ಸಹನೆ ಇರುವುದರಿಂದ ವಿಶೇಷವಾಗಿ ಮಹಿಳಾ ಗ್ರಾಹಕರಿಗೂ ಉತ್ತಮ ಸೇವೆ ಸಿಗಲಿದೆ. – ವಿ.ಎಲ್‌. ಚಿತ್ತಕೋಟೆ, ಸಹಾಯಕ ಅಂಚೆ ಅಧೀಕ್ಷಕರು

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.