ಮಹಿಳಾ ಮೀಸಲಾತಿ ಶೇ. 50 ಹೆಚ್ಚಿಸಿ


Team Udayavani, Mar 9, 2019, 6:02 AM IST

gul-1.jpg

ಕಲಬುರಗಿ: ಸ್ಥಳೀಯ ಸಂಸ್ಥೆಗಳಲ್ಲಿ ನೀಡಿರುವ ಮಾದರಿಯಂತೆ ಶಾಸನಸಭೆಗಳಲ್ಲೂ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ನೀಡಲು ಸರ್ಕಾರಗಳು ಮುಂದಾಗಬೇಕು ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಹೇಳಿದರು.

ಶರಣಬಸವ ವಿಶ್ವವಿದ್ಯಾಲಯದ ಇಂಜಿನಿಯರಿಂಗ್‌ ಮತ್ತು ತಂತ್ರಜ್ಞಾನ ( ಮಹಿಳಾ) ವಿಭಾಗ, ವ್ಯವಹಾರ ಅಧ್ಯಯನ ವಿಭಾಗದಿಂದ ಇನ್ನರ್‌ವ್ಹಿಲ್‌ ಕ್ಲಬ್‌ ಆಫ್‌ ಗುಲ್ಬರ್ಗಾ ಸನ್‌ಸಿಟಿ ಸಹಯೋಗದೊಂದಿಗೆ ಶುಕ್ರವಾರ ದೊಡ್ಡಪ್ಪ ಅಪ್ಪ ಸಭಾ ಮಂಟಪದಲ್ಲಿ ಮಾತೋಶ್ರೀ ಗೋದುತಾಯಿ ದೊಡ್ಡಪ್ಪ
ಅಪ್ಪ ಅವರ 48ನೇ ಪುಣ್ಯಸ್ಮರೋಣೋತ್ಸವ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ, ಭಾರತೀಯ ವೀರ ವನಿತೆಯರಿಗೆ ಅಭಿನಂದನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮಾತೋಶ್ರೀ ಗೋದುತಾಯಿ ಅವ್ವನವರು ದೊಡ್ಡ ವ್ಯಾಪಾರಸ್ಥ ಕುಟುಂಬದಿಂದ ಬಂದರೂ ಇಲ್ಲಿನ ಶರಣ ಪರಂಪರೆಗೆ ಹೊಂದಿಕೊಂಡು ನಿತ್ಯ ಪೂಜೆ, ದಾಸೋಹ ಕಾಯಕದಲ್ಲಿ ನಿರತರಾಗಿರುತ್ತಿದ್ದರು. ಇದು ಅವರ ಸರಳತೆಗೆ ಸಾಕ್ಷಿಯಾಗಿದೆ. ಶರಣಬಸವೇಶ್ವರವಿದ್ಯಾವರ್ಧಕ ಸಂಘ ಸ್ಥಾಪನೆ ಉದ್ದೇಶದ ಹಿಂದೆ ಮಾತೋಶ್ರೀ ಗೋದುತಾಯಿ ಅವ್ವನವರ ಪ್ರೇರಣೆ ಇರ ಬಹುದು ಎಂದರು.

ವಾಣಿಜ್ಯ ತೆರಿಗೆ ಇಲಾಖೆ ಉಪ ಆಯುಕ್ತೆ ಮೀರಾ ಪಂಡಿತ ಮಾತನಾಡಿ, ಮಹಿಳೆಗೆ ಮೊದಲು ಅವಮಾನ, ಅಪಮಾನಗಳು ಎದುರಾಗುತ್ತವೆ. ಇವೆಲ್ಲವನ್ನು ಮೆಟ್ಟಿ ನಿಂತಾಗ ಬಹುಮಾನ, ಸನ್ಮಾನ ದೊರಕುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶರಣಬಸವ ವಿವಿ ಕುಲಪತಿ ಡಾ| ನಿರಂಜನ ನಿಷ್ಟಿ ಮಾತನಾಡಿ, ಸ್ತ್ರೀವಾದ ಎನ್ನುವುದು ಇತ್ತೀಚೆಗೆ ನಾವು ಆಮದು ಮಾಡಿಕೊಂಡ ವಿಷಯವಾಗಿದೆ.

ಇದಕ್ಕೂ ಮುಂಚೆಯೇ ನಮ್ಮ ಸಂಸ್ಕೃತಿಯಲ್ಲಿ ಮಹಿಳೆಗೆ ಗೌರವ ಕೊಡಲಾಗಿದೆ. ಆದರೆ, ಕೆಲವು ಕಾರಣಗಳಿಂದ ಮಹಿಳಾ ಸಮಾನತೆ ಸಾಧ್ಯವಾಗಿಲ್ಲ. ಶರಣ ಸಂಸ್ಥಾನ ಮತ್ತು ಅದರ ಅಂಗ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಸಮಾನ ಪ್ರಾತಿನಿಧ್ಯ ನೀಡಲಾಗಿದೆ ಎಂದು ಹೇಳಿದರು. 

ಇನ್ನರ್‌ವ್ಹಿಲ್‌ ಕ್ಲಬ್‌ ಆಫ್‌ ಗುಲ್ಬರ್ಗಾ ಸನ್‌ ಸಿಟಿ ಅಧ್ಯಕ್ಷೆ ತೃಪ್ತಿ ದೇಸಾಯಿ, ಡೀನ್‌ ಡಾ| ಲಿಂಗರಾಜ ಶಾಸ್ತ್ರೀ ಮಾತನಾಡಿದರು. ಯುದ್ಧರಂಗದಲ್ಲಿ ಹುತಾತ್ಮನರಾದ ಯೋಧರ ಪತ್ನಿಯರಾದ ಮಲ್ಲಮ್ಮಾ ಬಸವರಾಜಪ್ಪ, ಚಂದ್ರಕಲಾ ಮಲ್ಲಿಕಾರ್ಜುನ, ಭಾಗೀರಥಿದೇವಿ ಅಂಬಾದಾಸ, ರಾಧಿಕಾದೇವಿ ಜ್ಞಾನೇಶ್ವರ, ಸುಲೋಚನಾ ವೀರಶೆಟ್ಟಿ, ಭಾರತಿ ಗೊಲ್ಲಾಳಪ್ಪ ಅವರನ್ನು ಸನ್ಮಾನಿಸಲಾಯಿತು.

ಮಹಿಳಾ ದಿನಾಚಾರಣೆ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಮ ಕುಲಪತಿ ಡಾ| ವಿ.ಡಿ. ಮೈತ್ರಿ, ಮೌಲ್ಯಮಾಪನ ಕುಲಸಚಿವ ಡಾ| ಶಿವದತ್ತ ಹೊನ್ನಳ್ಳಿ, ಡಾ| ಲಕ್ಷ್ಮೀ ಮಾಕಾ, ಗೀತಾ ಹರವಾಳ, ವಾಣಿಶ್ರೀ, ಎನ್‌ ಶಶಿಕಲಾ ವೇದಿಕೆ ಮೇಲಿದ್ದರು. ವಿಜಯಲಕ್ಷ್ಮೀ ಪ್ರಾರ್ಥಿಸಿದರು. ಸೂಷ್ಮಾ ಸ್ವಾಗತಿಸಿದರು, ಚೇತನಾ ಪಾಟೀಲ, ಶ್ವೇತಾ ನಿರೂಪಿಸಿದರು. ಇನ್ನರ್‌ವ್ಹಿಲ್‌ ಕ್ಲಬ್‌ ಆಫ್‌ ಗುಲ್ಬರ್ಗಾ ಸನ್‌ಸಿಟಿ ಕಾರ್ಯದರ್ಶಿ ಶ್ವೇತಾ ಎಂ. ವಂದಿಸಿದರು.

ಬದಲಾವಣೆ ಎನ್ನುವುದು ನಮ್ಮಿಂದಲೇ ಆರಂಭವಾಗಬೇಕು ಅದನ್ನು ಬೇರೆ ಯಾರೋ ಬಂದು ಮಾಡುತ್ತಾರೆ ಎನ್ನುವುದು ಮೂರ್ಖತನ. ಜೀವನ ಸಂಘರ್ಷದಿಂದ ಕೂಡಿರದಿದ್ದರೆ ಅದಕ್ಕೆ ಬೆಲೆ ಇಲ್ಲ. ಸವಾಲುಗಳನ್ನು ಮೆಟ್ಟಿ ನಿಂತಾಗಲೇ ನಮ್ಮ ಆತ್ಮಶಕ್ತಿಯ ಅರಿವು ಗೊತ್ತಾಗುತ್ತದೆ. ಶೇ. 99 ಜನರು ಒಳ್ಳೆಯವರಿದ್ದು, ಕೇವಲ ಶೇ. 1ರಷ್ಟು ಜನ ಮಾತ್ರ ಕೆಟ್ಟವರಿರುತ್ತಾರೆ. ಆದರೆ, ನಾವು ಆ ಶೇ. 1ರಷ್ಟು ಜನರಿಗೆ ಮಾತ್ರ ಮಹತ್ವ ನೀಡಿ, ಜೀವನದ ಅಮೂಲ್ಯ ಕ್ಷಣಗಳನ್ನು ಹಾಳು ಮಾಡಿಕೊಳ್ಳುತ್ತಿದ್ದೇವೆ.
  ಮೀರಾ ಪಂಡಿತ, ವಾಣಿಜ್ಯ ತೆರಿಗೆ ಇಲಾಖೆ ಉಪ ಆಯುಕೆ

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.