ಸಂವಿಧಾನದ ಮಾರ್ಗಸೂಚಿಯಂತೆ ಕಾರ್ಯ ನಿರ್ವಹಿಸಿ


Team Udayavani, Aug 10, 2018, 10:02 AM IST

gul-1.jpg

ಕಲಬುರಗಿ: ಪೊಲೀಸರು ತಮ್ಮ ಜೀವನದಲ್ಲಿ ಸಂವಿಧಾನದ ಅಂಶಗಳನ್ನು ಅಳವಡಿಸಿಕೊಂಡು ಯಾವುದೇ ತರಹದ ಜಾತಿ, ಧರ್ಮ, ಆಸೆ-ಆಮಿಷಗಳಿಗೆ ಒಳಗಾಗದೇ ದೈರ್ಯದಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಎಸ್‌ಪಿ. ಎನ್‌. ಶಶಿಕುಮಾರ ಸಲಹೆ ನೀಡಿದರು.

ಜಿಲ್ಲಾ ಪೊಲೀಸ್‌ ಕವಾಯತು ಮೈದಾನದಲ್ಲಿ ಏರ್ಪಡಿಸಲಾಗಿದ್ದ ಕಲಬುರಗಿ ತಾತ್ಕಾಲಿಕ ಪೊಲೀಸ್‌ ತರಬೇತಿ ಶಾಲೆಯ 17ನೇ ತಂಡದ ಸಶಸ್ತ್ರ ಪೊಲೀಸ್‌ ಕಾನ್‌ಸ್ಟೆಬಲ್‌ಗ‌ಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಪೊಲೀಸ್‌ ಪ್ರಶಿಕ್ಷಣಾರ್ಥಿಗಳಿಗೆ ತರಬೇತಿ ಸಮಯದಲ್ಲಿ ಸಂವಿಧಾನದ ಎಲ್ಲ ಅಂಶಗಳು ಮತ್ತು ಕಾನೂನುಗಳನ್ನು ಬೋಧಿಸಲಾಗಿದೆ. ಅವುಗಳ ರೀತ್ಯ ಕರ್ತವ್ಯ ನಿರ್ವಹಿಸಿ ಸಾರ್ವಜನಿಕರಲ್ಲಿ ಪೊಲೀಸ್‌ ಇಲಾಖೆ ಬಗ್ಗೆ ವಿಶ್ವಾಸ ಮೂಡಿಸಬೇಕು ಎಂದು ಹೇಳಿದರು.

ಪೊಲೀಸ್‌ ಇಲಾಖೆ ಶಿಸ್ತಿಗೆ ಹೆಸರಾಗಿದೆ. ಪೊಲೀಸರು ಸಾರ್ವಜನಿಕರ ನಿರೀಕ್ಷೆಗಳನ್ನು ತಲುಪಿ ಅವರಲ್ಲಿ ಭರವಸೆ ಮೂಡಿಸಬೇಕು. ಸಾರ್ವಜನಿಕರ ಹಿತದೃಷ್ಟಿಯಿಂದ ಕಾನೂನು ಪಾಲನೆ ಮಾಡಿ ರಕ್ಷಣೆ ನೀಡಬೇಕು. ಸಶಸ್ತ್ರ ಪೊಲೀಸ್‌ ಪ್ರಶಿಕ್ಷಣಾರ್ಥಿಗಳಿಗೆ ಮುಖ್ಯಮಂತ್ರಿ, ಪ್ರಧಾನಮಂತ್ರಿ, ಗಣೇಶ ಹಬ್ಬ, ರಂಜಾನ್‌ ಹಬ್ಬಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನಿಯೋಜಿಸಿ ಪ್ರಾಯೋಗಿಕ ತರಬೇತಿ ನೀಡಲಾಗಿದೆ. ಪೊಲೀಸ್‌ ಇಲಾಖೆ ಒಬ್ಬ ಸಿಬ್ಬಂದಿ ತನ್ನ
ನಿವೃತ್ತಿ ಕಾಲದವರೆಗೆ ಕೈಗೊಳ್ಳುವ ಎಲ್ಲ ಕರ್ತವ್ಯಗಳನ್ನು ಪ್ರಶಿಕ್ಷಣಾರ್ಥಿಗಳಿಗೆ ಪ್ರಾಯೋಗಿಕವಾಗಿ ತಿಳಿ ಹೇಳಲಾಗಿದೆ. ಇದರ ಪ್ರಯೋಜನವನ್ನು ತಮ್ಮ ಕರ್ತವ್ಯದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಹೆಚ್ಚುವರಿ ಎಸ್‌ಪಿ ಹಾಗೂ ತಾತ್ಕಾಲಿಕ ಪೊಲೀಸ್‌ ತರಬೇತಿ ಶಾಲೆ ಪ್ರಾಂಶುಪಾಲ ಜಯಪ್ರಕಾಶ ವರದಿ ವಾಚನ ಮಾಡಿ, ಕಲಬುರಗಿಯ ತಾತ್ಕಾಲಿಕ ಪೊಲೀಸ್‌ ತರಬೇತಿ ಶಾಲೆಯಿಂದ ಈವರೆಗೆ 9 ಸಿವಿಲ್‌, 6 ಸಶಸ್ತ್ರ ಮೀಸಲು ಹಾಗೂ 1 ಮಹಿಳಾ ಪೊಲೀಸ್‌ ಪೇದೆ ತಂಡದ ಪ್ರಶಿಕ್ಷಣಾರ್ಥಿಗಳು ಸೇರಿದಂತೆ ಒಟ್ಟು 16 ತಂಡಗಳಿಗೆ ಮೂಲ ತರಬೇತಿ ನೀಡಲಾಗಿದೆ. ಒಟ್ಟು 2563 ಪ್ರಶಿಕ್ಷಣಾರ್ಥಿಗಳಿಗೆ ತರಬೇತಿ ನೀಡಲಾಗಿದ್ದು, ಇಂದು ಪಥಸಂಚಲನದಲ್ಲಿ ಭಾಗಿಯಾಗಿರುವ 17ನೇ ತಂಡದ 146 ಪ್ರಶಿಕ್ಷಣಾರ್ಥಿಗಳಿಗೆ ಮೂಲ ತರಬೇತಿ ನೀಡಲಾಗಿದೆ. ಪ್ರಶಿಕ್ಷಣಾರ್ಥಿಗಳಿಗೆ ಒಳಾಂಗಣ, ಹೊರಾಂಗಣ ತರಬೇತಿಗಳಲ್ಲದೇ ವಿಶೇಷ ತರಬೇತಿಗಳನ್ನು ಸಹ ನುರಿತ ತಜ್ಞರಿಂದ ನೀಡಲಾಗಿದೆ ಎಂದು ವಿವರಿಸಿದರು.

ಸರ್ವೋತ್ತಮ ಪ್ರಶಿಕ್ಷಣಾರ್ಥಿ ಮಹೇಶ ಆರ್‌. ಬಿದರಮಳಿ, ಒಳಾಂಗಣ ಪರೀಕ್ಷೆಯಲ್ಲಿ ಪ್ರಥಮ ಬಹುಮಾನ ಪಡೆದ ಜಿ. ಖಲೀಪ್‌ ಪೀರ್‌, ದ್ವಿತೀಯ ಬಹುಮಾನ ನಾಗರಾಜ, ತೃತೀಯ ಬಹುಮಾನ ಅನೀಲ ಟಿ.ವೈ., ಹೊರಾಂಗಣ ಪರೀಕ್ಷೆಯಲ್ಲಿ ಪ್ರಥಮ ಬಹುಮಾನ ಮಹೇಶ ಆರ್‌. ಬಿದರಮಳಿ, ದ್ವಿತೀಯ ಬಹುಮಾನ ಹನುಮಂತ ದಳವಾಯಿ,
ತೃತೀಯ ಬಹುಮಾನ ಹಸನಸಾಬ್‌ ಜಕಾತಿ, ಫೈರಿಂಗ್‌ ಪರೀಕ್ಷೆಯಲ್ಲಿ ಪ್ರಥಮ ಬಹುಮಾನ ಶಿವಾ ಎಸ್‌.ಆರ್‌., ದ್ವಿತೀಯ ಬಹುಮಾನ ಹನುಮಂತ ದಳವಾಯಿ, ತೃತೀಯ ಬಹುಮಾನ ಮಹೇಶ ಆರ್‌. ಬಿದರಮಳಿ ಅವರಿಗೆ ವಿತರಿಸಲಾಯಿತು.

ಹೆಚ್ಚುವರಿ ಎಸ್‌ಪಿ ಜಯಪ್ರಕಾಶ ಪ್ರತಿಜ್ಞಾ ವಿಧಿ ಬೋಧಿಸಿದರು. ಕಲಬುರಗಿ ಎ ವಿಭಾಗದ ಡಿವೈಎಸ್‌ಪಿ ಲೋಕೇಶ, ನಾಗನಹಳ್ಳಿ ಪೊಲೀಸ್‌ ತರಬೇತಿ ಕಾಲೇಜಿನ ಪ್ರಾಂಶುಪಾಲ ಸವಿತಾ ಹೂಗಾರ, ಕೆಎಸ್‌ಆರ್‌ಪಿ 6ನೇ ಪಡೆ ಕಮಾಂಡಂಟ್‌ ಬಸವರಾಜ ಜಿಳ್ಳೆ, ಹಿರಿಯ ಪೊಲೀಸ್‌ ಅಧಿಕಾರಿಗಳು, ನಿವೃತ್ತ ಪೊಲೀಸ್‌ ಅಧಿಕಾರಿಗಳು, ಪ್ರಶಿಕ್ಷಣಾರ್ಥಿಗಳ ಪೋಷಕರು ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.