ಕಾಮಗಾರಿ ಸ್ಥಳಕ್ಕೆ ಸಿಇಒ ಭೇಟಿ
Team Udayavani, Feb 17, 2017, 3:30 PM IST
ಚಿಂಚೋಳಿ: ತಾಲೂಕಿನ ವನ್ಯಜೀವಿ ಧಾಮ ಮೀಸಲು ಅರಣ್ಯಪ್ರದೇಶದಲ್ಲಿ ಸಾಮಾಜಿಕ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಬರುವ ಜಮೀನಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅಡಿ ಕೂಲಿ ಕಾರ್ಮಿಕರು ಕೆಲಸ ಮಾಡುತ್ತಿರುವ ಸ್ಥಳಕ್ಕೆ ಜಿಪಂ ಸಿಇಒ ಅನಿರುದ್ಧ ಶ್ರವಣ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರೊಂದಿಗೆ ಮಾತನಾಡಿದ ಅನಿರುದ್ಧ ಶ್ರವಣ, ಪ್ರತಿಯೊಬ್ಬರು ಗ್ರಾಪಂನಿಂದ ಜಾಬ್ ಕಾರ್ಡ್ ಪಡೆದುಕೊಳ್ಳಬೇಕು. ನಿಮ್ಮ ಗ್ರಾಮಕ್ಕೆ ಬೇಕಾಗುವ ಕೆಲಸಗಳ ಬಗ್ಗೆ ಪಿಡಿಒ ಮತ್ತು ಕಾರ್ಯದರ್ಶಿಗೆ ಮಾಹಿತಿ ನೀಡಬೇಕು. ನಿಮ್ಮ ಗ್ರಾಮದ ಪ್ರತಿಯೊಂದು ಕುಟುಂಬಕ್ಕೆ 100 ದಿನಗಳ ವರೆಗೆ ಕೂಲಿ ಕೆಲಸ ನೀಡಲಾಗುವುದು.
ಯಾರು ತಮ್ಮ ತಾಂಡಾ ಮತ್ತು ಗ್ರಾಮ ಬಿಟ್ಟು ಬೇರೆ ಕಡೆ ಕೆಲಸಕ್ಕೆ ಹೋಗಬಾರದು. ಅಲ್ಲದೇ ಪ್ರತಿಯೊಬ್ಬರು ಆಧಾರ್ ಕಾರ್ಡ್, ಪಡಿತರ ಚೀಟಿ ಮತ್ತು ಬ್ಯಾಂಕ್ ಖಾತೆ ಹೊಂದಿರಬೇಕು ಎಂದು ಹೇಳಿದರು. ಕುಂಚಾವರಂ ಗ್ರಾಪಂಗೆ ಪ್ರಸಕ್ತ ಸಾಲಿನಲ್ಲಿ 1.10 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆ ಇದ್ದರೂ ಜನವರಿ ಅಂತ್ಯಕ್ಕೆ ಕೇವಲ 18 ಲಕ್ಷ ರೂ. ಖರ್ಚು ಮಾಡಲಾಗಿದೆ ಎಂದು ಪಿಡಿಒ ತುಕ್ಕಪ್ಪ ವಿವರಿಸಿದರು.
ಕುಂಚಾವರಂ ಗಡಿಭಾಗದಲ್ಲಿರುವ ಮೊಗದಂಪುರ, ಶಿವರೆಡ್ಡಿಪಳ್ಳಿ, ಪೋಚಾವರಂ, ಲಿಂಗಾನಗರ, ಲಚಮಾಸಾಗರ, ಶಾದೀಪುರ, ಪೆದ್ದಿ ತಾಂಡಾ, ಧರ್ಮಾಸಾಗರ, ವೆಂಕಟಪುರ, ಬೋನಸಪುರ, ಸಂಗಾಪುರ ತಾಂಡಾ, ಅಂತಾವರಂ ಹಾಗೂ ಶಾದೀಪುರ ಗ್ರಾಪಂ ವ್ಯಾಪ್ತಿಯ ತಾಂಡಾಗಳ ಜನರು ಬಹುತೇಕ ಬೇಸಿಗೆ ಮತ್ತು ಮಳೆಗಾಲದಲ್ಲಿ ನಗರ ಪ್ರದೇಶಗಳಿಗೆ ಕೂಲಿ ಕೆಲಸಕ್ಕೆ ಹೋಗುತ್ತಾರೆ ಎಂದು ಕುಂಚಾವರಂ ಗ್ರಾಪಂ ಅಧ್ಯಕ್ಷ ಗೋಪಾಲ ಅವರು ಸಿಇಒ ಅವರ ಗಮನಕ್ಕೆ ತಂದರು.
ತಾಪಂ ಅಧಿಕಾರಿ ಅನೀಲಕುಮಾರ ರಾಠೊಡ, ತಾಪಂ ಅಧ್ಯಕ್ಷೆ ರೇಣುಕಾ ಚವ್ಹಾಣ, ತಹಶೀಲ್ದಾರ ಪ್ರಕಾಶ ಕುದುರೆ, ಉದ್ಯೋಗ ಖಾತ್ರಿ ಯೋಜನೆ ನೋಡಲ್ ಅಧಿಕಾರಿ ಸಂತೋಷಕುಮಾರ ಯಾಚೆ, ತಾಪಂ ಸದಸ್ಯ ಚಿರಂಜೀವಿ, ಶರಣಬಸಪ್ಪ ಮಮಶೆಟ್ಟಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್