ಕ್ವಾರಂಟೈನ್‌ಗೆ ಕಟ್ಟಡ ಕೊರತೆ

ಖಾಸಗಿ ಕಟ್ಟಡ ಮಾಲೀಕರ ಅಸಹಕಾರ |ತಾಲೂಕಾಡಳಿತಕ್ಕೆ ದೊಡ್ಡ ತಲೆ ನೋವು

Team Udayavani, May 21, 2020, 3:43 PM IST

21-May-17

ಸಾಂದರ್ಭಿಕ ಚಿತ್ರ

ಯಡ್ರಾಮಿ: ಕೋವಿಡ್ ಲಾಕ್‌ಡೌನ್‌ ಸಡಿಲಿಕೆ ಆದ ಬೆನ್ನಲ್ಲೆ ಬೇರೆ-ಬೇರೆ ಕಡೆಗಳಿಂದ ತಮ್ಮ ತವರುಗಳಿಗೆ ಮರಳಿದ ಜನರಿಗಾಗಿ ಪಟ್ಟಣ ಸೇರಿದಂತೆ ಇಡೀ ತಾಲೂಕಿನ ಹಲವು ಗ್ರಾಮಗಳಲ್ಲಿ ಕ್ವಾರಂಟೈನ್‌ ಕೇಂದ್ರಗಳನ್ನು ತೆರೆಯಲಾಗಿದೆ.

ಪಟ್ಟಣ ಸೇರಿದಂತೆ ಮಳ್ಳಿ, ಕುರುಳಗೇರಾ, ಕೊಂಡಗೂಳಿ, ಯಾಳವಾರ, ಇಜೇರಿ ಗ್ರಾಮಗಳಲ್ಲಿ ಸಾವಿರಾರು ಜನರನ್ನು ಕ್ವಾರಂಟೈನ್‌ ಮಾಡಲಾಗಿದೆ. ಪಟ್ಟಣವೊಂದರಲ್ಲಿ ಇಂದಿರಾಗಾಂಧಿ ವಸತಿ ಶಾಲೆ, ಡಾ| ಅಂಬೇಡ್ಕರ್‌ ಭವನ, ಅಲ್ಪಸಂಖ್ಯಾತ ವಸತಿ ನಿಲಯ, ಯುಕೆಪಿ ಕ್ಯಾಂಪ್‌ ಸೇರಿದಂತೆ ಒಟ್ಟು 4 ಕೇಂದ್ರಗಳಲ್ಲಿ 250 ಜನರನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಸ್ಥಳೀಯ ಗ್ರಾಪಂ ವತಿಯಿಂದ ಕ್ವಾರಂಟೈನ್‌ ಆದ ಜನರ ನಿತ್ಯ ಜೀವನದ ನಿರ್ವಹಣೆ ವ್ಯವಸ್ಥಿತವಾಗಿ ಸಾಗುತ್ತಿದ್ದರೂ ಕ್ವಾರಂಟೈನ್‌ನಲ್ಲಿದ್ದ ಕೆಲವರು ಪಂಚಾಯಿತಿ ಹಾಗೂ ತಾಲೂಕಾಡಳಿತ ಸಿಬ್ಬಂದಿ ಜೊತೆಗೆ ಅಸಹಕಾರ ನೀಡುತ್ತಿರುವುದು ಸಿಬ್ಬಂದಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ.

ಇದು ಒಂದು ಸಮಸ್ಯೆಯಾದರೆ, ನಾಲ್ಕನೇ ಹಂತದ ಲಾಕ್‌ಡೌನ್‌ ಇನ್ನಷ್ಟು ಸಡಿಲಿಕೆ ಆದ ಕಾರಣ ವಲಸೆ ಹೋದ ಜನ ಮರಳಿ ಬರುತ್ತಿರುವುದರಿಂದ ಕ್ವಾರಂಟೈನ್‌ ಮಾಡಲು ಪಟ್ಟಣದ ಹೊರವಲಯದಲ್ಲಿ ಕಟ್ಟಡಗಳ ಕೊರತೆ ಕಂಡುಬರುತ್ತಿದೆ. ಪಟ್ಟಣದ ಹೊರವಲಯದ ಅಲ್ಲೊಂದು ಇಲ್ಲೊಂದು ಇರುವ ಕಟ್ಟಡ ಕೇಳಿದರೆ ಖಾಸಗಿ ವ್ಯಕ್ತಿಗಳು ಸಹಕಾರ ನೀಡದಿರುವುದು ತಾಲೂಕಾಡಳಿತಕ್ಕೆ ಇನ್ನೊಂದು ಸಮಸ್ಯೆಯಾಗಿದೆ. ಸಾಮಾಜಿಕ ಕಳಕಳಿಯ ಉದ್ದೇಶಕ್ಕಾಗಿ ನಿರ್ಮಾಣಗೊಂಡ ಬಹುತೇಕ ಕಟ್ಟಡಗಳು ಕ್ವಾರಂಟೈನ್‌ ಹೊಂದುವ ಜನತೆಗೆ ಕೆಲಕಾಲ ಆಶ್ರಯ ನೀಡಿದರೆ, ಕೋವಿಡ್ ತಂದೊಡ್ಡಿದ ಬಿಕ್ಕಟ್ಟಿಗೆ ಪರಿಹಾರವಾಗಿ ನಿಂತಂತಾಗುತ್ತದೆ. ಜೊತೆಗೆ ನಮಗೆ ಸಹಕಾರ ನೀಡುವುದು ಅಷ್ಟೇ ಅಗತ್ಯವಾಗಿದೆ ಎಂಬುದು ತಾಲೂಕಾಡಳಿತ ಸಿಬ್ಬಂದಿ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಒಕ್ಕೊರಲಿನ ಕೂಗಾಗಿದೆ.

ಕ್ವಾರಂಟೈನ್‌ ಆದ ಜನರಿಗೆ ಪಂಚಾಯಿತಿ ಇಂದಲೇ ಉತ್ತಮ ಉಪಹಾರದ ವ್ಯವಸ್ಥೆ ಮಾಡಲಾಗುತ್ತಿದೆ. ಆದರೂ ಅಲ್ಲಿದ್ದ ಕೆಲವರು ತಮಗಿಷ್ಟವಾದ ಆಹಾರ ತರುವಂತೆ ಸಿಬ್ಬಂದಿ ಜೊತೆ ಕಿರಿಕಿರಿ ಮಾಡುವುದು ಸರಿಯಲ್ಲ. ಕ್ವಾರಂಟೈನ್‌ ಆದ ಜನರು ಕೆಲ ದಿನಗಳ ಮಟ್ಟಿಗೆ ಸಹಕಾರ ನೀಡುವುದು ಮುಖ್ಯವಾಗಿದೆ. ಬಾಬುಗೌಡ,
ಯಡ್ರಾಮಿ ಗ್ರಾಪಂ ಪಿಡಿಒ

ವಲಸೆ ಹೋದ ಜನರ ಆಗಮನ ದಿನದಿಂದ-ದಿನಕ್ಕೆ ಹೆಚ್ಚುತ್ತಿರುವುದರಿಂದ ಲಭ್ಯವಿದ್ದ ಸರ್ಕಾರಿ ಕಟ್ಟಡಗಳು ಭರ್ತಿಯಾಗಿವೆ. ಇನ್ನು ಮುಂದೆ ಆಗಮಿಸುವ ಜನರನ್ನು ಕ್ವಾರಂಟೈನ್‌ ಮಾಡಲು ಖಾಸಗಿ ಕಟ್ಟಡಗಳ ಮಾಲೀಕರ ಸಹಕಾರ ತುಂಬಾ ಅಗತ್ಯವಾಗಿದೆ.
ಬಸಲಿಂಗಪ್ಪ ನೈಕೋಡಿ,
ತಹಶೀಲ್ದಾರ್‌ ಯಡ್ರಾಮಿ

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.