ಹತಾಶರಾಗಿದ್ದಾರೆ ಯಡಿಯೂರಪ್ಪ


Team Udayavani, Feb 4, 2019, 7:56 AM IST

gul-9.jpg

ಚಿತ್ತಾಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಹತಾಶರಾಗಿದ್ದಾರೆ. ಸಮ್ಮಿಶ್ರ ಸರ್ಕಾರ ಬೀಳಿಸುವ ವಿಫಲ ಯತ್ನ ಮಾಡುತ್ತಲೇ ಇದ್ದಾರೆ. ಆದರೆ ಅವರು ಅಂದುಕೊಂಡಂತೆ ಏನು ಆಗಲ್ಲ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ತಾಲೂಕಿನ ಡೋಣಗಾಂವ, ಭಂಕಲಗಾ, ಭೀಮನಳ್ಳಿ, ದಂಡಗುಂಡ ಮತ್ತು ಕರದಳ್ಳಿ ಗ್ರಾಮದಲ್ಲಿ 4.51 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು. ಸಮ್ಮಿಶ್ರ ಸರ್ಕಾರ ಬೀಳುತ್ತದೆ ಎಂದು ಬಿಜೆಪಿಯವರು ಕೊಟ್ಟಿರುವ ಎಲ್ಲ ಡೆಡ್‌ಲೈನ್‌ಗಳು ಈಗಾಗಲೇ ಮುಗಿದು ಹೋಗಿವೆ. ಇದೀಗ ಸರ್ಕಾರ ಬೀಳಿಸಲು ಅವರ ಬಳಿ ಮತ್ತೇ ಯಾವ ಡೆಡ್‌ಲೈನ್‌ ಇದೆ ಎಂದು ಪ್ರಶ್ನಿಸಿದರು.

ಬಿಜೆಪಿ ನಾಯಕರು ರಾಜ್ಯದಲ್ಲಿ ಹಮ್ಮಿಕೊಂಡಿರುವ ಬರ ಅಧ್ಯಯನ ಬರೀ ನಾಟಕವಾಗಿದೆ. ಶಾಸಕ ಶ್ರೀರಾಮಲು ನನ್ನ ಕ್ಷೇತ್ರಕ್ಕೆ ಬಂದ್ದು ಬರ ಅಧ್ಯಯನ ಮಾಡುವುದು, ಕ್ಷೇತ್ರದ ಜನರ ಜತೆ ಚರ್ಚಿಸುವುದು ಬಿಟ್ಟು ಕಾಟಾಚಾರದ ಭೇಟಿ ನೀಡಿ ಯಾರ ಜತೆಗೂ ಚರ್ಚಿಸದೇ ಹೋಗಿದ್ದಾರೆ. ಅವರು ಒಂದು ಕ್ವಿಂಟಲ್‌ ತೊಗರಿಗೆ ಎಷ್ಟು ಮೌಲ್ಯ ಎಂದು ಹೇಳಿಬಿಡಲಿ ನೋಡೋಣ ಎಂದು ಸವಾಲು ಹಾಕಿದರು.

ಮೋದಿ ಕೇವಲ ಘೋಷಣೆ ಮಾಡಿದ್ದಾರೆ ಹೊರತು ಯಾವ ಕಾರ್ಯಕ್ರಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದಿಲ್ಲ. ಅವರು ಜಾರಿಗೆ ತಂದಿದ್ದು ಅದಾನಿ, ಅಂಬಾನಿ ದುಡ್ಡು ಬಳಸಿ ರಾಜ್ಯದಲ್ಲಿ ಆಪರೇಷನ್‌ ಕಮಲ ಮಾಡುತ್ತಿರುವುದು. ಇದನ್ನು ಜನರು ಗಮನಹರಿಸುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ಸಾಲಿ, ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ, ತಾಪಂ ಅಧ್ಯಕ್ಷ ಜಗದೇವರೆಡ್ಡಿ ಪಾಟೀಲ ಮಾತನಾಡಿದರು.

ಜಿಪಂ ಸದಸ್ಯರಾದ ಶಿವರುದ್ರ ಭೀಣಿ, ಶಿವಾನಂದ ಪಾಟೀಲ, ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಅಧ್ಯಕ್ಷ ಸಾಬಣ್ಣ ವೈ. ಕಾಶಿ, ಪುರಸಭೆ ಸದಸ್ಯರಾದ ಚಂದ್ರಶೇಖರ ಕಾಶಿ, ಪಾಶಾಮಿಯ್ನಾ ಖುರೇಶಿ, ಮುಖಂಡರಾದ ರಮೇಶ ಮರಗೋಳ, ನಿಂಗಣ್ಣ ಹೇಗಲೇರಿ, ಶರಣು ಡೋಣಗಾಂವ, ಶಾಂತಪ್ಪ ಚಾಳಿಕಾರ, ಭೀಮು ಹೋತಿನಮಡಿ, ಬಸವರಾಜ ಚಿನ್ನಮಳ್ಳಿ, ಈರಪ್ಪ ಭೋವಿ, ಮಲ್ಲಿಕಾರ್ಜುನ ಮುಡಬೂಳಕರ್‌, ನಾಗರಾಜ ಸಜ್ಜನ, ಮಲ್ಲಿಕಾರ್ಜುನ ಬಮ್ಮನಳ್ಳಿ, ಶೇಖ ಬಬ್ಲು, ಶಿವಾಜಿ ಕಾಶಿ, ನಜೀರ್‌ ಆಡಕಿ, ಕಲೀಂ ಇದ್ದರು.

ಚಿಂಚೋಳಿ ಶಾಸಕ ಡಾ| ಉಮೇಶ ಜಾಧವ ಅವರ ಕಾರ್ಯಗಳಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದೆ. ನಾನು ಯಾರ ಕೆಲಸ ಕಾರ್ಯಗಳಲ್ಲಿ ಹಸ್ತಕ್ಷೇಪ ಮತ್ತು ಅಡ್ಡಿಪಡಿಸಿಲ್ಲ. ಚಿತ್ತಾಪುರ ಜನರ ಪ್ರೀತಿ, ವಿಶ್ವಾಸ ಹಾಗೂ ಆಶೀರ್ವಾದದಿಂದ ನಾನು ಎರಡು ಬಾರಿ ಶಾಸಕನಾಗಿ ಎರಡು ಬಾರಿ ಸಚಿವನಾಗಿ ಕ್ಷೇತ್ರಕ್ಕೆ ಬೇಕಾದ ಎಲ್ಲ ರೀತಿಯ ಸೌಲಭ್ಯವನ್ನು ಪ್ರಾಮಾಣಿಕವಾಗಿ ಅವರ ಮನೆ ಬಾಗಿಲಿಗೆ ಮುಟ್ಟಿಸುತ್ತಿದ್ದೇನೆ. ನನಗೆ ಕ್ಷೇತ್ರ, ಜಿಲ್ಲೆಯ ಜನರ ಅಭಿವೃದ್ಧಿ ಮುಖ್ಯ. ಅದು ಬಿಟ್ಟು ಬೇರೆಯವರ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದಲ್ಲ. ಅಷ್ಟಕ್ಕೂ ಜಾಧವ ಅವರು ನಮ್ಮ ಪಕ್ಷದವರು, ವಿದ್ಯಾವಂತರಿದ್ದಾರೆ. ಆ ತರಹದ ಯಾವುದೇ ಸಮಸ್ಯೆಗಳು ಇದ್ದರೇ ಕೂಡಲೇ ಪಕ್ಷದ ಹಿರಿಯ ನಾಯಕರೊಂದಿಗೆ ಮಾತನಾಡಿ ಬಗೆಹರಿಸಿಕೊಳ್ಳಲಿ.
•ಪ್ರಿಯಾಂಕ್‌ ಖರ್ಗೆ, ಸಮಾಜ ಕಲ್ಯಾಣ ಖಾತೆ ಸಚಿವ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.