ಯುವಕರೇ ಟಿಪ್ಪು ಧೈರ್ಯ ಕಲಿಯಿರಿ


Team Udayavani, Nov 11, 2017, 9:57 AM IST

gul-2.jpg

ಕಲಬುರಗಿ: ಬ್ರಿಟಿಷರ ವಿರುದ್ಧ ಹೋರಾಟ ಮಾಡಿ ಅವರ ನಿದ್ದೆಗೆಡಿಸಿದ್ದ ಧೈರ್ಯಶಾಲಿ ಹಾಗೂ ಕುಶಾಗ್ರಮತಿ ಟಿಪ್ಪು ಸುಲ್ತಾನ್‌ನ ಧೈರ್ಯ ಮತ್ತು ಸ್ವಾಭಿಮಾನವನ್ನುಯುವಕರು ಕಲಿಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಹೇಳಿದರು.

ಎಸ್‌.ಎಂ.ಪಂಡಿತ ರಂಗಮಂದಿರದಲ್ಲಿ ಶುಕ್ರವಾರ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಹಜರತ್‌ ಟಿಪ್ಪು ಸುಲ್ತಾನ್‌ ಜಯಂತಿ ಕಾರ್ಯಕ್ರಮವನ್ನು ಟಿಪ್ಪು ಸುಲ್ತಾನ್‌ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. 

ಟಿಪ್ಪು ನಿಲುವು, ಸ್ವಾಭಿಮಾನ ಹಾಗೂ ಆಡಳಿತ ಸುಧಾರಣಾ ಕ್ರಮ ಹಾಗೂ ಸಹೋದರತ್ವವನ್ನು ಮನಗಂಡು ರಾಜ್ಯ ಸರಕಾರ ಇವತ್ತು ಟಿಪ್ಪು ಜಯಂತಿ ಮಾಡಲು ಹೊರಟಿದೆ. ಆದರೆ, ಕೆಲವರು ಇದನ್ನು ವಿರೋಧಿಸಿದ್ದಾರೆ. ಅದೆಲ್ಲವೂ ಅವರವರ ಮನೋಭಾವ. ತನ್ನ ಇಡೀ ಜೀವನವನ್ನೇ ನಾಡಿನ ಏಳಿಗೆಗಾಗಿ ಮುಡಿಪಾಗಿಟ್ಟು ಶೌರ್ಯ, ಸಾಹಸಕ್ಕೆ ಹೆಸರಾಗಿ ಸಹಿಷ್ಣತೆ ರುವಾರಿಯಾಗಿದ್ದ ಟಿಪ್ಪು ಸುಲ್ತಾನ್‌ ಸ್ವಾತಂತ್ರ್ಯಪೂರ್ವ ದೇಶ ಕಂಡ ಅಪ್ರತಿಮ ಹೋರಾಟಗಾರ ಎಂದರು.

ಟಿಪ್ಪು ಸುಲ್ತಾನ್‌ ಬ್ರಿಟಿಷ್‌ ಈಸ್ಟ್‌ ಇಂಡಿಯಾ ಕಂಪನಿಯ ಆಡಳಿತದಲ್ಲಿ ನಲುಗುತ್ತಿದ್ದ ಭಾರತವನ್ನು ಅವರ ಕಪಿಮುಷ್ಟಿಯಿಂದ ಬಿಡಿಸಲು ಕನಸು ಕಂಡ ಕಾರಣ ಪುರುಷ, ಬ್ರಿಟಿಷರೊಂದಿಗೆ ನಿರಂತರ ಸೆಣಸಿದ ಛಲಗಾರ, ಹಗಲಿರುಳು ಬ್ರಿಟಿಷರನ್ನು ದುಃಸ್ವಪ್ನದಂತೆ ನಿರಂತರ ಕಾಡಿದ ವೀರ ಯೋಧ, ಅಪ್ಪಟ ದೇಶಪ್ರೇಮಿಯಾಗಿದ್ದರು ಎಂದರು. ಆಡಳಿತ, ಪ್ರಜಾಪ್ರಭುತ್ವ ಮತ್ತು ಜನಪರ ಕಾಳಜಿ ಇಂದಿನ ಯುಕವರು ಅಳವಡಿಸಿಕೊಳ್ಳಬೇಕಾದಂತಹ ವ್ಯಕ್ತಿತ್ವವನ್ನು ಟಿಪ್ಪು ಹೊಂದಿದ್ದರು. ಆದ್ದರಿಂದ ಅವರೊಬ್ಬ ಮೇರು ವ್ಯಕ್ತಿತ್ವ ಹೊಂದಿದ್ದರು ಎಂದರು.

ಉಪನ್ಯಾಸ ನೀಡಿದ ನಿವೃತ್ತ ಪ್ರಾಂಶುಪಾಲ ಮೊಹ್ಮದ್‌ ಅಮಜದ್‌ ಜಾವೀಧ್‌ ಮಾತನಾಡಿ ಟಿಪ್ಪು ಸುಲ್ತಾನ್‌ ಹಿಂದೂ ಧರ್ಮವನ್ನು, ಹಿಂದೂಗಳನ್ನು ಎಷ್ಟೊಂದು ಗೌರವ ಮತ್ತು ಭಕ್ತಿಯಿಂದ ಕಾಣುತ್ತಿದ್ದ ಎಂಬುದಕ್ಕೆ ಅವರು ಒಟ್ಟು 156 ದೇವಸ್ಥಾನಗಳಿಗೆ ಆರ್ಥಿಕ ನೆರವು ನೀಡಿರುವುದೇ ಸಾಕ್ಷಿಯಾಗಿದೆ ಎಂದರು.

ಟಿಪ್ಪು ಸುಲ್ತಾನ್‌ ರ ಹಲವಾರು ಕ್ರಾಂತಿಕಾರಿ ಆಲೋಚನೆಗಳು ಮತ್ತು ಕಾರ್ಯಗಳು ನಮಗೆ ಇಂದಿಗೂ ಮಾದರಿ. ಟಿಪ್ಪು ಸುಲ್ತಾನ್‌ ಸದಾ ಹೊಸ ತಂತ್ರಜ್ಞಾನಕ್ಕೆ ತುಡಿಯುತ್ತಿದ್ದ. ಅವನು ಭಾರತದಲ್ಲಿ ಮೊದಲ ಬಾರಿಗೆ ಸೇನೆಯಲ್ಲಿ ಫ್ರೆಂಚ್‌
ರ ಸಹಾಯದಿಂದ ಕ್ಷಿಪಣಿ ಮತ್ತು ರಾಕೇಟ್‌ಗಳನ್ನು ಬಳಸುವುದರ ಮೂಲಕ ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿದ್ದ ಎಂದರು.

ಹಜರತ್‌ ಖಾಜಾ ಬಂದೇ ನವಾಜ್‌ ದರ್ಗಾದ ಸಜ್ಜಾದ್‌ ನಶೀನ್‌ ಡಾ| ಸೈಯದ ಶಹಾ ಖುಸ್ರೋ ಹುಸೇನಿ ಮಾತನಾಡಿ, ಟಿಪ್ಪು ಸುಲ್ತಾನ್‌ ನೇರವಾಗಿ ಹುಲಿಯೊಂದಿಗೆ ಹೋರಾಡಿ ಜಯಶಾಲಿಯಾಗಿ ಮೈಸೂರು ಹುಲಿ ಎಂದು ಪ್ರಖ್ಯಾತರಾಗಿದ್ದು, ಹುಲಿಯನ್ನೇ ತನ್ನ ಲಾಂಛನವನ್ನಾಗಿ ಮಾಡಿಕೊಂಡಿದ್ದರು. ತನ್ನ ರಾಜ್ಯದ ಎಲ್ಲ ಜನತೆಯೊಂದಿಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುತ್ತ ಸಂಯಮದಿಂದ ವರ್ತಿಸುತ್ತಿದ್ದ ಸರಳ ವ್ಯಕ್ತಿ ಎಂದರು.

ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಇಲಿಯಾಸ್‌ ಬಾಗವಾನ್‌, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಹ್ಮದ ಅಜಗರ ಚುಲಬುಲ್‌, ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ, ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌. ಶಶಿಕುಮಾರ, ಶಿಷ್ಠಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ, ಫರಾಜ್‌ ಉಲ್‌ ಇಸ್ಲಾಂ ಹಾಗೂ ಮತ್ತಿತರರು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ವಂದಿಸಿದರು.

ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಹೊರತಂದಿರುವ ಮೈಸೂರು ಹುಲಿ ಟಿಪ್ಪು ಸುಲ್ತಾನ್‌ ಕುರಿತ ಕಿರು ಹೊತ್ತಿಗೆಯನ್ನು ಪುಸ್ತಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಬಿಡುಗಡೆ
ಮಾಡಿದರು. 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.