ನಾಯಿ ಕಡಿತಕ್ಕಿಲ್ಲ ಇಲ್ಲಿ ಲಸಿಕೆ

ಟೆಂಡರ್‌ ಮುಗಿದಿದ್ದಕ್ಕೆ ಪೂರೈಕೆಯಲ್ಲಿ ವ್ಯತ್ಯಯ •ನಾಯಿ ಕಡಿದವರಿಗೆ ದೇವರೇ ಗತಿ

Team Udayavani, Jun 9, 2019, 9:35 AM IST

09-June-1

ಕಲಬುರಗಿ: ಗುಲ್ಬರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಾಯಿ ಕಡಿತದ ಚಿಕಿತ್ಸಾ ಲಸಿಕೆ ಸಿಗದಿದ್ದಕ್ಕೆ ಪಾಲಕರೊಬ್ಬರು ಮಗುವಿನೊಂದಿಗೆ ಆಸ್ಪತ್ರೆಯಿಂದ ನಿರಾಸೆಯಿಂದ ಹೊರಬಂದರು.

ಹಣಮಂತರಾವ ಭೈರಾಮಡಗಿ
ಕಲಬುರಗಿ:
ನಾಯಿ ಕಡಿದವರಿಗೆ ಗುಲ್ಬರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಜಿಲ್ಲಾಸ್ಪತ್ರೆಯಲ್ಲಿ ಆ್ಯಂಟಿ ರೇಬಿಸ್‌ ವ್ಯಾಕ್ಸಿನ್‌ ಚಿಕಿತ್ಸಾ ಲಸಿಕೆ ಸಿಕ್ಕುತ್ತಿಲ್ಲ. ಹೀಗಾಗಿ ನಾಯಿ ಕಡಿದವರಿಗೆ ಸೂಕ್ತ ಚಿಕಿತ್ಸೆ ದೊರಕುತ್ತಿಲ್ಲ.

ಕಳೆದೆರಡು ತಿಂಗಳಿನಿಂದ ನಾಯಿ ಕಡಿತದ ಚಿಕಿತ್ಸಾ ಲಸಿಕೆ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದರಿಂದ ಚಿಕಿತ್ಸೆಗೆ

ಅನುಸಾರವಾಗಿ ಲಸಿಕೆ ದೊರೆಯುತ್ತಿಲ್ಲ. ಖಾಸಗಿಯಾಗಿ ಲಸಿಕೆ ಖರೀದಿಸಿ ಚಿಕಿತ್ಸಾ ಸೌಲಭ್ಯ ಕಲ್ಪಿಸಿ ಎಂದು ಆರೋಗ್ಯಾಧಿಕಾರಿಗಳ ನಿರ್ದೇಶನವಿದೆಯಾದರೂ ಖಾಸಗಿಯಲ್ಲೂ ಸೂಕ್ತವಾಗಿ ಲಸಿಕೆ ದೊರೆಯದ ಕಾರಣ ನಾಯಿ ಕಡಿತಕ್ಕೊಳಗಾದವರಿಗೆ ದೇವರೇ ಗತಿ ಎನ್ನುವಂತಾಗಿದೆ.

ಜಿಲ್ಲೆಯ ಅಫ‌ಜಲಪುರ ತಾಲೂಕಿನ ಬಡದಾಳದ ಗಿರೀಶ ಊಡಗಿಯ ಪುತ್ರಿ ರಕ್ಷಿತಾಗೆ ಕಳೆದ ಜೂ.5ರಂದು ನಾಯಿ ಕಡಿದಿತ್ತು. ಅದೇ ದಿನ ಜಿಲ್ಲಾಸ್ಪತ್ರೆಯಲ್ಲಿ ಮೊಲದ ಹಂತದ ಚಿಕಿತ್ಸೆ ದೊರಕಿದೆ. ಶನಿವಾರ ಎರಡನೇ ಹಂತದ ಚಿಕಿತ್ಸೆ ದೊರಕಬೇಕಾಗಿತ್ತು. ಆದರೆ ಲಸಿಕೆ ಇಲ್ಲದ ಕಾರಣ ನಿರಾಸೆಯಿಂದ ಮರಳಿದರು.

ರಾಜ್ಯದಾದ್ಯಂತ ನಾಯಿ ಕಡಿತದ ಹಾವಳಿ ಜೋರಾಗಿದೆ. ಚಿಕಿತ್ಸೆಗೆ ಜಿಲ್ಲಾಸ್ಪತ್ರೆಯೇ ಅನಿವಾರ್ಯ. ಖಾಸಗಿ ಆಸ್ಪತ್ರೆಗಳಲ್ಲಿ ನಾಯಿ ಕಡಿತದಕ್ಕೆ ಚಿಕಿತ್ಸಾ ಲಸಿಕೆ ಸಿಗುವುದು ಅಷ್ಟಕಷ್ಟೆ. ಅಲ್ಲದೇ ಚಿಕಿತ್ಸೆ ಬಲು ದುಬಾರಿ ಆಗಿರುತ್ತದೆ. ಹೀಗಾಗಿ ಜಿಲ್ಲಾಸ್ಪತ್ರೆಯೇ ಸೂಕ್ತವಾಗಿದೆ. ನಾಯಿ ಕಡಿತಕ್ಕೊಳಗಾದ ಶೇ. 90ಕ್ಕಿಂತಲೂ ಹೆಚ್ಚು ಜನ ಸರ್ಕಾರಿ ಆಸ್ಪತ್ರೆಗಳನ್ನೇ ನೆಚ್ಚಿಕೊಂಡಿದ್ದಾರೆ.

ನಾಯಿ ಕಡಿತಕ್ಕೆ ನೀಡುವ ಲಸಿಕೆ ಪೂರೈಕೆ ಟೆಂಡರ್‌ ಮುಗಿದಿದ್ದರಿಂದ ಲಸಿಕೆ ಪೂರೈಕೆ ಸಂಪೂರ್ಣ ಸ್ಥಗಿತವಾಗಿದೆ. ನಾಯಿ ಕಡಿತಕ್ಕೆ ಒಮ್ಮೆ ಲಸಿಕೆ ನೀಡದೇ ನಾಲ್ಕೈದು ಸಲವಾದರೂ ಚಿಕಿತ್ಸೆ ನೀಡಬೇಕು. ಜಿಲ್ಲಾಸ್ಪತ್ರೆಗೆ ದಿನಾಲು ಕನಿಷ್ಟ 80ರಿಂದ ನೂರು ಲಸಿಕೆ ಬೇಕು. ಪ್ರತಿನಿತ್ಯ ಸುಮಾರು 40ರಿಂದ 50 ಜನರು ನಾಯಿ ಕಡಿತಕ್ಕೆ ಒಳಗಾಗಿ ಆಸ್ಪತ್ರೆಗೆ ಬರುತ್ತಿರುತ್ತಾರೆ.

ಕಲಬುರಗಿಯ ಜಿಲ್ಲಾಸ್ಪತ್ರೆಯಲ್ಲದೇ ರಾಜ್ಯದ ಇತರ ಜಿಲ್ಲಾಸ್ಪತ್ರೆಗಳಲ್ಲೂ ನಾಯಿ ಕಡಿತದ ಆ್ಯಂಟಿ ರೇಬಿಸ್‌ ವ್ಯಾಕ್ಸಿನ್‌ ಚಿಕಿತ್ಸಾ ಲಸಿಕೆ ಕೊರತೆ ಕಂಡು ಬಂದಿದೆ. ಸಮಸ್ಯೆ ನಿವಾರಣೆಗೆ ಹೊಸ ಟೆಂಡರ್‌ವಾಗಿ ಸಮರ್ಪಕವಾಗಿ ಪೂರೈಕೆಯಾದಲ್ಲಿ ಮಾತ್ರ ನಾಯಿ ಕಡಿತಕ್ಕೆ ಸೂಕ್ತ ಚಿಕಿತ್ಸೆ ದೊರೆಯಲಿದೆ.

ಟೆಂಡರ್‌ದಲ್ಲಿ ಪಾಲ್ಗೊಳ್ಳಲು ಹಿಂದೇಟು: ನಾಯಿ ಕಡಿತದ ಚಿಕಿತ್ಸಾದ ಲಸಿಕೆಗೆ ಈಗಾಗಲೇ ಎರಡು ಸಲ ಟೆಂಡರ್‌ ಕರೆದರೂ ಯಾರೂ ಪಾಲ್ಗೊಳ್ಳದ ಕಾರಣ ಮುಂದೂಡಿಕೆಯಾಗುತ್ತಿದೆ. ಅಭಾವ ಸೃಷ್ಟಿಸಿ ದರ ಹೆಚ್ಚಳ ಮಾಡುವ ಉದ್ದೇಶ ಟೆಂಡರ್‌ದಾರರು ಹೊಂದಿದ್ದಾರೆನ್ನಲಾಗಿದೆ.

ನಾಯಿ ಕಡಿತದ ಚಿಕಿತ್ಸೆ ಲಸಿಕೆ ಪೂರೈಕೆ ಟೆಂಡರ್‌ ಮುಗಿದಿದ್ದರಿಂದ ಸ್ಥಳೀಯವಾಗಿ ಖಾಸಗಿಯಾಗಿ ಖರೀದಿ ಮಾಡುವಂತೆ ಎಲ್ಲ ಆಸ್ಪತ್ರೆಗಳಿಗೆ ನಿರ್ದೇಶನ ನೀಡಲಾಗಿದೆ. ಒಂದೆರಡು ಕಡೆ ಸ್ವಲ್ಪ ತೊಂದರೆ ಆಗಿರಬಹುದು. ಲಸಿಕೆಯನ್ನು ಮುಂಗಡವಾಗಿ ಖಾಸಗಿಯಾಗಿ ಖರೀದಿಸಿ ದಾಸ್ತಾನು ಇಡಲಾಗಿದೆ. ಒಟ್ಟಾರೆ ಮುಂದಿನ ಕೆಲವೇ ದಿನಗಳಲ್ಲಿ ಎಲ್ಲವೂ ಸರಿ ಹೋಗಲಿದೆ.
ಶಿವಾನಂದ ಪಾಟೀಲ,
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ

ಕಳೆದ ಒಂದೂವರೆ ತಿಂಗಳಿನಿಂದ ನಾಡಿ ಕಡಿತದ ಆ್ಯಂಟಿ ರೇಬಿಸ್‌ ವ್ಯಾಕ್ಸಿನ್‌ ಚಿಕಿತ್ಸಾ ಲಸಿಕೆ ಪೂರೈಕೆ ಸ್ಥಗಿತವಾಗಿದೆ. ಆದರೆ ಖಾಸಗಿಯಾಗಿ ಸ್ಥಳೀಯವಾಗಿ ಖರೀದಿ ಮಾಡುವಂತೆ ಇಲಾಖೆ ನಿರ್ದೇಶನ ನೀಡಿದೆ. ಖಾಸಗಿ ಬೇಡಿಕೆಗೆ ಅನುಸಾರವಾಗಿ ಹಾಗೂ ಸಮಯಕ್ಕೆ ಸರಿಯಾಗಿ ಸಿಗುತ್ತಿಲ್ಲ. ಹೀಗಾಗಿ ತೊಂದರೆಯಾಗುತ್ತಿದೆ. ಇದಕ್ಕೆಲ್ಲ ಹೊಸದಾಗಿ ಟೆಂಡರ್‌ ಆಗದಿರುವುದು ಕಾರಣವಾಗಿದೆ.
•ಡಾ| ಶಿವಕುಮಾರ,
ವೈದ್ಯಕೀಯ ಅಧೀಕ್ಷಕ, ಜಿಮ್ಸ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.