ಕೈಗಾರಿಕೆ ಅಭಿವೃದ್ಧಿಗೆ ಹೆಚ್ಚು ಒತ್ತು: ಶೆಟ್ಟರ
ಕಂದಾಯ ವಸೂಲಿಯಲ್ಲಿ ಹೊಸ ನಿಯಮ ಜಾರಿ ಹಿಂದುಳಿದ ಪ್ರದೇಶಗಳಲ್ಲಿ ಕೈಗಾರಿಕೆ ಸ್ಥಾಪನೆ
Team Udayavani, Nov 23, 2019, 11:14 AM IST
ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶವು ಹಿಂದುಳಿದ ಭಾಗವಾಗಿದ್ದು, ಈ ಭಾಗದ ಆರ್ಥಿಕ ಪ್ರಗತಿಗೆ ಆಹಾರ ಮತ್ತು ಕೃಷಿ, ಕೃಗಾರಿಕೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ಹೇಳಿದರು.
ನಗರದ ಎಚ್ಕೆಸಿಸಿಐ ಸಭಾಂಗಣದಲ್ಲಿ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ, ಹೈದರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಗುಲಬರ್ಗಾ ದಾಲ್ ಮಿಲ್ಲರ್ಸ್ ಅಸೋಷಿಯೇಸನ್ ಮತ್ತು ಗುಲಬರ್ಗಾ ಕೈಗಾರಿಕಾ ಪ್ರದೇಶ ಉತ್ಪಾದಕರ ಸಂಘ, ಗುಲಬರ್ಗಾ ಕೈಗಾರಿಕಾ ಮ್ಯಾನುಫ್ಯಾಕ್ಚರ್ ಅಸೋಷಿಯೇಷನ್ಸ್ ಸಂಯುಕ್ತಾಶ್ರಯದಲ್ಲಿ ನಡೆದ ರಫ್ತು, ವಿದೇಶ ವ್ಯಾಪಾರ ನೀತಿ ಮತ್ತು ಕಾರ್ಯವಿಧಾನಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದ ಸಂವಾದ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಕೈಗಾರಿಕೆ ಅಭಿವೃದ್ಧಿಗಾಗಿ ಹಾಗೂ ಕಂದಾಯ ವಸೂಲಿಯಲ್ಲಿ ಹೊಸ ನಿಯಮ ಜಾರಿಗೊಳಿಸುವ ಮೂಲಕ ಕೈಗಾರಿಗಳ ಉನ್ನತಿಗೆ ಹೆಚ್ಚಿನ ಸೌಲಭ್ಯ ನೀಡುವ ನಿಟ್ಟಿನಲ್ಲಿ ಈಗಾಗಲೇ ಅಧಿ ಕಾರಿಗಳ ಜೊತೆ ಸಭೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಅವುಗಳನ್ನು ಜಾರಿಗೊಳಿಸಲಾಗುತ್ತದೆ ಎಂದು ಭರವಸೆ ನೀಡಿದರು. ಕೈಗಾರಿಕೆ ಕಟ್ಟಡಗಳ ಬಾಡಿಗೆ, ಮಾರಾಟಕ್ಕೆ ಮತ್ತು ಕಂದಾಯ ವಸೂಲಿಗೆ ಸಂಬಂ ಧಿಸಿದಂತೆ ವೈಜ್ಞಾನಿಕ ದರ ನಿಗದಿ ಮಾಡುವ ಮೂಲಕ ಹಾಗೂ ಎಲ್ಲ ಕೈಗಾರಿಗಳ ಉನ್ನತಿಗೆ ಮೂಲಭೂತ ಸೌಲಭ್ಯಗಳನ್ನು ನೀಡಲು ಶ್ರಮಿಸುವುದಾಗಿ ತಿಳಿಸಿದರು.
ಬೆಂಗಳೂರನ್ನು ಹೊರತುಪಡಿಸಿ ಆರ್ಥಿಕವಾಗಿ ಹಿಂದುಳಿದಿರುವ ಪ್ರದೇಶಗಳನ್ನು ಗುರುತಿಸಿ ಅಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಹೊಸ ಕೈಗಾರಿಕಾ ನೀತಿಯಲ್ಲಿ ಸೇರಿಸಲಾಗುವುದು. ಕೈಗಾರಿಕಾ ಸಂಸ್ಥೆಯವರು ಸಲ್ಲಿಸಿರುವ ಮನವಿ ಪತ್ರಗಳನ್ನು ಪರಿಶೀಲಿಸಿ, ಅವುಗಳನ್ನು ಪ್ರಾಮಾಣಿಕವಾಗಿ ಈಡೇರಿಸಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.
ಕಲಬುರಗಿಯಲ್ಲಿ ವಿಮಾನ ನಿಲ್ದಾಣ ಉದ್ಘಾಟನೆಯಾಗಿದ್ದು, ಮುಂದಿನ ದಿನಗಳಲ್ಲಿ ಕಲಬುರಗಿ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳು ಆರ್ಥಿಕವಾಗಿ ಸದೃಢವಾಗಲಿದೆ. ಇಲ್ಲಿನ ಕಪನೂರು ಕೈಗಾರಿಕಾ ಪ್ರದೇಶಕ್ಕೆ ತಾವು ಭೇಟಿ ನೀಡಿದ್ದು, ಅಲ್ಲಿನ ಕೈಗಾರಿಕೆಗಳ ಅಭಿವೃದ್ಧಿಗೆ ಮಾರಕವಾಗಿರುವ ರಸ್ತೆಗಳನ್ನು ಕೂಡಲೇ ಸರಿಪಡಿಸುವಂತೆ ಅಧಿ ಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಕೆಐಎಡಿಬಿ ಮುಖ್ಯ ಕಾರ್ಯನಿರ್ವಾಹಣಾ ಅಧಿ ಕಾರಿ ಹಾಗೂ ಕಾರ್ಯನಿರ್ವಾಹಕ ಸದಸ್ಯ ಎಚ್. ಬಸವರಾಜೇಂದ್ರ, ಕೆಎಸ್ ಎಸ್ಐಡಿಸಿ ವ್ಯವಸ್ಥಾಪಕ ನಿರ್ದೇಶಕ ಮಹೇಶ ಬಿ. ಶಿರೂರ್, ಎಚ್ಕೆಸಿಸಿಐ ಅಧ್ಯಕ್ಷ ಅಮರನಾಥ ಪಾಟೀಲ, ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಮಾಣಿಕ ವಿ. ರಘೋಜಿ, ಕೆಎಎಸ್ ಎಸ್ಐಎ ಅಧ್ಯಕ್ಷ ರಾಜು ಆರ್. ಹಾಗೂ ಕೈಗಾರಿಕೆ ಇಲಾಖೆ ಹಿರಿಯ ಅ ಧಿಕಾರಿಗಳು, ಕೈಗಾರಿಕಾ ಸಂಸ್ಥೆಯ ಮಾಲೀಕರು ಹಾಗೂ ಉದ್ದಿಮೆದಾರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…