ಚಿಮ್ಮೇಗಾಂವ ತಾಂಡಾದಲ್ಲಿ ನೀರಿನ ಸಮಸ್ಯೆ


Team Udayavani, May 13, 2019, 3:25 PM IST

13-MAY-23

ಮಲನಗರ: ಚಿಮ್ಮೇಗಾಂವ ತಾಂಡಾದಲ್ಲಿ ನೀರಿನ ಸಮಸ್ಯೆ ಉಲ್ಭಣವಾಗಿರುವುದರಿಂದ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.

ಕಮಲನಗರ: ಸುಮಾರು 400 ಜನಸಂಖ್ಯೆ ಇರುವ ಚಿಮ್ಮೇಗಾಂವ ತಾಂಡಾದಲ್ಲಿ ನೀರಿನ ಸಮಸ್ಯೆ ಉಲ್ಭಣವಾಗಿದ್ದು, ಟ್ಯಾಂಕರ್‌ ಮೂಲಕ ಸರಬರಾಜು ಮಾಡಿದರೂ ಸಮಸ್ಯೆ ನಿವಾರಣೆಯಾಗಿಲ್ಲ. ನೀರಿನ ಸಮಸ್ಯೆಗೆ ತಹಶೀಲ್ದಾರರೇ ಕಾರಣ ಎಂದು ಗ್ರಾಪಂ ಅಧ್ಯಕ್ಷೆ ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಆರೋಪಿಸಿದ್ದಾರೆ.

ತಾಂಡಾದಲ್ಲಿ ಪ್ರತಿ ವರ್ಷ ಬೇಸಿಗೆಯಲ್ಲಿ ನೀರಿನ ಬರ ಬರುವುದು ಸಾಮಾನ್ಯ. ಸಮಸ್ಯೆ ನಿವಾರಣೆಗೆ ಸರಕಾರ ಏನೆಲ್ಲಾ ಹರಸಾಹಸ ಮಾಡಿದರೂ ಪ್ರಯೋಜನವಾಗುತ್ತಿಲ್ಲ. ಅಂರ್ಜಲ ಮಟ್ಟ ಇಳಿಸು ಕೊಳವೆ ಬಾವಿಯಲ್ಲಿ ನೀರು ಬರುತ್ತಿಲ್ಲ. ಕೇವಲ ಒಂದು ಕೊಳವೆ ಬಾವಿಯಲ್ಲಿ ಮಾತ್ರ ಅಲ್ಪ ಪ್ರಮಾಣದ ನೀರು ಬರುತ್ತಿದ್ದು, ಅವರಿಂದ ತಾಂಡಾದ‌ಲ್ಲಿನ ತೆರೆದ ಬಾವಿಗೆ ಆ ನೀರು ಬಿಡಲಾಗಿದೆ.

ತೆರೆದ ಬಾವಿಯಿಂದ ನೀರು ಮೇಲೆತ್ತಿಸಿ ನಲ್ಲಿಗಳಿಂದ ಸರಬರಾಜು ಮಾಡಲಾಗುತ್ತಿದ್ದೆ. ಹಾಗೂ ಜಾನುವಾರುಗಳಿಗಾಗಿ ಪಕ್ಕದಲ್ಲಿ ಒಂದು ದೊಡ್ಡ ಟ್ಯಾಂಕ್‌ ನಿರ್ಮಿಸಲಾಗಿದೆ. ಅಲ್ಲದೇ ಜಲಕ್ಷಾಮ ಭೀಕರವಾಗಿದ್ದಕ್ಕೆ ಪಂಚಾಯತಿ ವತಿಯಿಂದ ಟ್ಯಾಂಕರ್‌ ಮೂಲಕ ಕೂಡ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಗ್ರಾಪಂ ಅಧ್ಯಕ್ಷರು ತಿಳಿಸಿದ್ದಾರೆ.

ಪಂಚಾಯತ ವತಿಯಿಂದ ಟ್ಯಾಂಕರ್‌ ನೀರು ಸರಬರಾಜು ಮಾಡಬೇಡಿ ಎಂದು ನೀರು ಪೂರೈಕೆಯ ಎಡಬ್ಲೂಇ ಹಾಗೂ ತಹಶೀಲ್ದಾರ್‌ ತಿಳಿಸಿದ್ದರಿಂದ ಟ್ಯಾಂಕರ್‌ ನೀರು ಪೂರೈಕೆ ಸ್ಥಗಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ತಾಂಡಾದಲ್ಲಿ ನೀರಿಗೆ ಹಾಹಾಕಾರ ಇನ್ನೂ ಹೆಚ್ಚಾಗಿತ್ತು. ಕಾರಣ, ಟೆಂಡರ್‌ ಕರೆಯದೆ ಪಂಚಾಯತನಿಂದ ಟ್ಯಾಂಕರ್‌ ನೀರು ಸರಬರಾಜು ಮಾಡಲು ಬರುವುದಿಲ್ಲ ಎಂದು ಹೇಳಲಾಗಿತ್ತು. ಇದರಿಂದ ನಾಲ್ಕು ದಿನಗಳ ಕಾಲ ಜನರಿಗೆ ನೀರು ಸಿಕ್ಕಿರಲಿಲ್ಲ. ಈ ಕುರಿತು ಪತ್ರಿಕೆಗಳಲ್ಲಿ ವರದಿ ಪ್ರಕಟವಾದಾಗ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗ್ರಾಮಕ್ಕೆ ಭೇಟಿ ನೀಡಿ, ಪಂಚಾಯತನವರು ಬಾಡಿಗೆಯಿಂದ ಪಡೆದ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಬೇಕು ಎಂದು ತಿಳಿಸಿದ್ದಾರು. ಇದರಿಂದಾಗಿ ಈ ಗ ಮತ್ತೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.

ಚಿಮ್ಮೇಗಾಂವ ತಾಂಡಾಕ್ಕೆ ಶಾಶ್ವತ ಕುಡಿಯುವ ನೀರಿನ ಸೌಲಭ್ಯಕ್ಕೆ 1ಕಿ.ಮೀ. ಅಂತರದಲ್ಲಿರುವ ಭೋಪಾಳಗಡ ಕೆರೆಯ ನೀರನ್ನು ಪೈಪ್‌ಲೈನ್‌ ಮೂಲ ತಾಂಡಾದ ಬಾವಿಗೆ ತುಂಬಿಸಲು ಮುಂದಾಗಬೇಕು. ಈ ಕುರಿತು ಮೇಲಾಧಿಕಾರಿಗಳಿಗೆ ಲಿಖೀತ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಅಧ್ಯಕ್ಷರು ಆರೋಪಿಸಿದ್ದಾರೆ.

ಕಾಲು ಮುರಿದುಕೊಂಡ ಯುವಕ: ತೆರೆದ ಬಾವಿಯಿಂದ ನೀರು ತರಲು ಹೋಗಿದ್ದ ಯುವಕ ಬಬನ ಏಕನಾಥ ಕಾಲುಮುರಿದುಕೊಂಡಿದ್ದು, ಜಿಲ್ಲಾಡಳಿತ ಇವನ ನೆರವಿಗೆ ಮುಂದಾಗಬೇಕು. ಉದಗೀರದ ಕಲ್ಯಾಣೆ ಆಸ್ಪತ್ರೆಯಲ್ಲಿ ಈಗಾಗಲೇ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದಾನೆ. ಇದರಿಂದ ಬದುಕು ನಡೆಸುವುದು ಕಷ್ಟವಾಗಿದೆ ಎಂದು ಯುವಕನ ಪೋಷಕರು ಅಳಲು ತೊಡಿಕೊಂಡಿದ್ದಾರೆ.

ಪಂಚಾಯತ ಅಭಿವೃದ್ಧಿ ಅಧಿಕಾರಿ ಈ ಪ್ರಕರಣದಲ್ಲಿ ತನ್ನದಲ್ಲದ ತಪ್ಪಿಗೆ ಹರಕೆಯ ಕುರಿಯಾಗಿ ಅಮಾನತ್ತುಗೊಂಡಿದ್ದಾರೆ. ಅಲ್ಲದೇ ಪಂಚಾಯಿತಿಗೆ ಕೆಟ್ಟ ಹೆಸರು ಬಂದಿದೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷೆ ಶೀತಲ್ ಅನೀಲಕುಮಾರ ಆಡಳಿತ ವ್ಯವಸ್ಥೆಗೆ ಹಿಡಿಶಾಪ ಹಾಕಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.