ಸಮಸ್ಯೆ ಇರುವಲ್ಲಿ ಟ್ಯಾಂಕರ್ ನೀರು ಪೂರೈಕೆ
Team Udayavani, May 13, 2019, 5:21 PM IST
ಕಮಲನಗರ: ಪಟ್ಟಣದ 8ನೇ ವಾರ್ಡ್ನಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುತ್ತಿರುವುದು.
ಕಮಲನಗರ: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಬರ ಪರಿ ನಿರ್ವಹಣೆ ಯೋಜನೆಯಡಿ ಪಟ್ಟಣದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುವುದು ಎಂದು ಗ್ರಾಮ ಪಂಚಾಯಿತಿ ಸದಸ್ಯ ಪ್ರವೀಣ ಕದಂ ಹೇಳಿದರು.
ಪಟ್ಟಣದ ನಾಗೋಬಾ ಮಂದಿರ, ಪಠಾಣ ಗಲ್ಲಿ, ಗಡಿ ಗಲ್ಲಿಗಳಲ್ಲಿ ನೀರಿನ ಸಮಸ್ಯೆ ಎದುರಾಗಿದ್ದಕ್ಕೆ ಗ್ರಾಮ ಪಂಚಾಯಿತಿ ವತಿಯಿಂದ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಅಲ್ಲದೇ ನೀರಿನ ತೀವ್ರ ಸಮಸ್ಯೆ ಇದ್ದ ಕಡೆ ಬಾಲೂರ್(ಕೆ) ಗ್ರಾಮದಿಂದ ಪೈಪ್ಲೈನ್ ಮೂಲಕ ಕಮಲನಗರದ ಅತಿಥಿ ಗೃಹದ ಎದುರಿನ ಬಾವಿಗೆ ನೀರು ತುಂಬಿಸಿ ಅಲ್ಲಿಂದ ಪುನಃ ನೀರನ್ನು ಮನೆಗಳಿಗೆ ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಮುಖಂಡ ಶಾಂತಕುಮಾರ ಮಾತನಾಡಿ, ಅಂತರ್ಜಲ ಕುಸಿದು ಕೊಳವೆ ಬಾವಿಗಳಲ್ಲಿ ನೀರು ಬರುತ್ತಿಲ್ಲ. ಯುವಕರು ಸೇರಿ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿದ್ದಕ್ಕಾಗಿ ತಾಲೂಕು ಆಡಳಿತದಿಂದ ಟೆಂಡರ್ ಕರೆದು ಪ್ರತಿದಿನ 6 ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸಂತೋಷ ಬಿರಾದಾರ, ಪಿಡಿಒ ಸುಭಾಷ ಫುಲೆ, ಸಂತೋಷ ಕದಂ, ಸುರೇಶ ಚಾಂಗುಣೆ, ವಾರ್ಡ್ನ ನಿವಾಸಿ ಸಂಗೀತಾ, ಸುಜಾತಾ ಹಾಗೂ ಯುವಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
RCB ತನ್ನಿಂದಾಗಿ ಕಪ್ ಕಳೆದುಕೊಂಡಿತು: ವಾಟ್ಸನ್ ಪಶ್ಚಾತ್ತಾಪ
Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್ ಆಡಲಿ: ಪೊವೆಲ್
“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ