ರಾಜ್ಯಾದ್ಯಂತ ಜಾಗೃತಿ ಆಂದೋಲನ
ಸಂವಿಧಾನದ 370-35ಎ ವಿಧಿ ಬಗ್ಗೆ ಜನರಿಗೆ ಬಿಜೆಪಿ ಒಬಿಸಿ ಮೋರ್ಚಾದಿಂದ ಮಾಹಿತಿ
Team Udayavani, Sep 16, 2019, 3:46 PM IST
ಕಂಪ್ಲಿ: ಪಟ್ಟಣದಲ್ಲಿ ಭಾಜಪ ಒಬಿಸಿ ಮೋರ್ಚಾದಿಂದ ಸಂವಿಧಾನದ 370 ಹಾಗೂ 35 ಎ ವಿಧಿಯನ್ನು ರದ್ದುಪಡಿಸಿದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಜಾಗೃತಿ ಆಂದೋಲನಕ್ಕೆ ರಾಜ್ಯ ಉಪಾಧ್ಯಕ್ಷ ವೈ. ಯಮುನೇಶ್ ಚಾಲನೆ ನೀಡಿದರು.
ಕಂಪ್ಲಿ: ದೇಶಕ್ಕೆ ಒಂದೇ ಸಂವಿಧಾನ, ರಾಷ್ಟ್ರ ಧ್ವಜ ಹಾಗೂ ಒಬ್ಬರೇ ಪ್ರಧಾನಮಂತ್ರಿ ಎನ್ನುವುದನ್ನು ಇಡೀ ದೇಶವೇ ಒಪ್ಪತ್ತದೆ. ಇದರ ಬಗ್ಗೆ ಎಲ್ಲೆಡೆಯೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ರಾಜ್ಯಾದ್ಯಂತ ಜಾಗೃತಿ ಆಂದೋಲನವನ್ನು ಭಾಜಪ ಒಬಿಸಿ ಮೋರ್ಚಾ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಭಾಜಪ ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ವೈ. ಯಮುನೇಶ್ ತಿಳಿಸಿದರು.
ಅವರು ಭಾನುವಾರ ಪಟ್ಟಣದಲ್ಲಿ ಕೇಂದ್ರ ಸರ್ಕಾರ ಇತ್ತೀಚೆಗೆ ರದ್ದುಪಡಿಸಿರುವ ಸಂವಿಧಾನದ 370ನೇ 35ಎ ವಿಧಿ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಜಾಗೃತಿ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು. ದೇಶಾದ್ಯಂತ ಸೆ. 1ರಿಂದ ಸೆ. 30ರವರೆಗೆ 370ನೇ ಹಾಗೂ 35 ಎ ಸಂವಿಧಾನ ವಿಧಿಯ ರದ್ದತಿ ಕುರಿತು ಮತ್ತು ಅದರಿಂದಾಗುವ ಅನುಕೂಲಗಳನ್ನು ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ.
1949ರಲ್ಲಿ ಜಮ್ಮು ಕಾಶ್ಮೀರದ ರಾಜ ಹರಿಸಿಂಗ್ ಮತ್ತು ಶೇಖ್ಅಬ್ದುಲ್ಲ ಅವರಿಂದಾಗಿ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಲಾಗಿತ್ತು. ಆದರೆ ಇದರಿಂದ ಯಾವುದೇ ಲಾಭ ಆ ರಾಜ್ಯಕ್ಕೆ ದೊರಕದೇ ಕೇವಲ ಕೆಲವೇ ಕುಟುಂಬಗಳಿಗೆ ಅನುಕೂಲವಾಗಿತ್ತು. ವಿಶೇಷ ಸ್ಥಾನಮಾನದಿಂದ ಇಡೀ ರಾಜ್ಯವೇ ಹಿಂದುಳಿದಿತ್ತು. ಇದೀಗ ಭಾಜಪ ನೇತೃತ್ವದ ಎನ್ಡಿಎ ಸರ್ಕಾರದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವರಾದ ಅಮಿತ್ಷಾ ಅವರ ದಿಟ್ಟ ನಿರ್ಧಾರದಿಂದಾಗಿ ಜಮ್ಮು ಕಾಶ್ಮಿರಕ್ಕೆ ಇದ್ದ ಆರ್ಟಿಕಲ್ 370 ಹಾಗೂ 35 ಎ ಅನ್ನು ತೆಗೆದು ಹಾಕಲಾಗಿದ್ದು, ದೇಶದ ಎಲ್ಲ ರಾಜ್ಯಗಳಿಗೂ ಇದ್ದಂತೆಯೇ ಅಲ್ಲಿಯೂ ಸಮಸ್ತರಿಗೆ ಸಮಾನ ಅವಕಾಶಗಳು ಸಿಗುವಂತಾಗಿದೆ. ಜೊತೆಗೆ ಮೀಸಲಾತಿಯೇ ಇಲ್ಲದ, ಪಜಾ, ಪಪಂ ಮತ್ತು ಒಬಿಸಿ ವರ್ಗಗಳಿಗೆ ಮೀಸಲಾತಿ ದೊರಕಲಿದೆ. ಕಣಿವೆ ರಾಜ್ಯದಲ್ಲಿ ಉದ್ಯೋಗ ಸೃಷ್ಟಿ ಜೊತೆಗೆ ಕೈಗಾರಿಕೆಗಳು ತಲೆ ಎತ್ತಲಿವೆ ಎಂದು ತಿಳಿಸಿದರು.
ಈ ಹಿನ್ನೆಲೆಯಲ್ಲಿ ರಾಜ್ಯ ಹಾಗೂ ದೇಶಾದ್ಯಂತ ಸಂವಿಧಾನದ 370 ಹಾಗೂ 35ಎ ಅನ್ನು ರದ್ದುಪಡಿಸಿರುವ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಜಾಗೃತಿ ಆಂದೋಲನಗಳನ್ನು ಏರ್ಪಡಿಸಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಒಬಿಸಿ ಕೊಪ್ಪಳ ಜಿಲ್ಲಾಧ್ಯಕ್ಷ ಬಾರಕೇರ ವಿರೂಪಾಕ್ಷ, ಪುರಸಭೆ ಮಾಜಿ ಅಧ್ಯಕ್ಷ ಪಿ. ಬ್ರಹ್ಮಯ್ಯ, ಜಿ.ಸುಧಾಕರ್, ಕೊಡದಲ್ ರಾಜು, ಪುರಸಭೆ ಸದಸ್ಯರಾದ ಸಣ್ಣ ಹುಲುಗಪ್ಪ, ಸಪ್ಪರದ ರಾಘವೇಂದ್ರ, ರಘುನಾಯಕ್, ಸಜ್ಜದ ಸಿದ್ದಲಿಂಗಪ್ಪ, ಜಿ. ರಾಮಣ್ಣ, ಬಿ. ನಾಗೇಂದ್ರ, ಬಿ.ದೇವೇಂದ್ರ, ಶಿವಪ್ಪನಾಯ್ಕ, ಬಿ.ಕೆ. ವಿರೂಪಾಕ್ಷಿ. ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ