ಮನೆ ಮನೆಗೆ ಬರಲು ಬಹುರೂಪಿ ಗಣೇಶ ಸಿದ್ಧ

ಗಣೇಶ ಮೂರ್ತಿಗಳಿಗೆ ಅಂತಿಮ ರೂಪ•ಭಾದ್ರಪದ ಚವತಿಯಂದು ಪ್ರತಿಷ್ಠಾಪನೆ

Team Udayavani, Sep 1, 2019, 11:38 AM IST

1-September-14

ಜಿ. ಚಂದ್ರಶೇಖರಗೌಡ
ಕಂಪ್ಲಿ:
ಪೌರಾಣಿಕ, ಧಾರ್ಮಿಕ, ಆಧ್ಯಾತ್ಮಿಕ, ಐತಿಹಾಸಿಕ, ಸಾಮಾಜಿಕ ಅದರಲ್ಲೂ ಇಂದಿನ ವೃತ್ತಿಪರತೆಯನ್ನು ಪ್ರತಿನಿಧಿಸುವ ಛದ್ಮ ವೇಷಧಾರಿ ಬೃಹತ್‌ ಗಣಪತಿಗಳು ಚತುರ್ಥಿಯಂದು ಪ್ರತಿಷ್ಠಾಪನೆಗಾಗಿ ಕಾದು ಕುಳಿತಿವೆ.

ನೋಡುಗರು ತನ್ಮಯತೆಗೊಳ್ಳುವಂತೆ ಆಕರ್ಷಿಸುವ ನಾನಾ ಭಂಗಿಯ ವೈವಿಧ್ಯಮಯ ರೂಪದ ಗಣಪತಿ ಮೂರ್ತಿಗಳು ಪಟ್ಟಣದಲ್ಲಿ ರೂಪುಗೊಂಡಿವೆ. ಗಣಪತಿ ಮೂರ್ತಿಗಳು ಮಾರಾಟವಾಗುವ ಮುನ್ನ, ಸದ್ಭಕ್ತರು ಪ್ರತಿಷ್ಠಾಪನೆಗಾಗಿ ಒಯ್ಯುವ ಮುನ್ನ ಕಲಾವಿದನ ಕುಂಚದಲಿ ಅಂತಿಮ ರೂಪ ಪಡೆಯುತ್ತಿವೆ.

ಪಟ್ಟಣದ ಚಿತ್ರಗಾರ ಕುಟುಂಬದ ಸದಸ್ಯರು ಹಾಗೂ ಹವ್ಯಾಸಿ ಕಲಾವಿದರು ವೈವಿಧ್ಯಮಯ ಗಣೇಶ ಮೂರ್ತಿಗಳನ್ನು ಸೃಷ್ಟಿಸುತ್ತಿದ್ದಾರೆ. ಇನ್ನೇನು ಸೋಮವಾರ ಭಾದ್ರಪದ ಚವತಿಯಂದು ಗಣಪತಿ ಪ್ರತಿಷ್ಠಾಪನೆಗೊಳ್ಳಲಿದ್ದಾನೆ.

ಬೇರೆ ಬೇರೆ ಕಲಾವಿದರು, ಪಟ್ಟಣದ ಚಿತ್ರಗಾರ ಕುಟುಂಬದವರು ತುಮಕೂರು ಸಿದ್ಧಗಂಗೆಯ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ, ಹೊಯ್ಸಳ ರಾಜಮುದ್ರಿಕೆ, ತಿರುಪತಿ ವೆಂಕಟರಮಣ, ಮಾರ್ಬಲ್ ಗಣೇಶ, ಕನಕದಾಸ ರೂಪ, ಉಗ್ರ ನರಸಿಂಹ, ಬ್ರಹ್ಮನ ರೂಪ, ಡೈನೋಸಾರ್‌, ಶಾಂತಸ್ವಾಭಾವದ ಬುದ್ಧ ಸೇರಿದಂತೆ ವಿವಿಧ ಗಣೇಶ ಮೂರ್ತಿಗಳು ಸೆ. 2ರಂದು ಪ್ರತಿಷ್ಠಾಪನೆಗಾಗಿ ಕಾದು ಕುಳಿತಿವೆ.

ಗಂಗಾ ನದಿ ಮಣ್ಣಿನೊಂದಿಗೆ ಸ್ಥಳೀಯವಾಗಿ ದೊರಕುವ ಮಣ್ಣು, ಬೊಂಬು, ಬಿದಿರು, ಹುಲ್ಲು, ತಟ್ಟುಗಳನ್ನು, ಉರುಕೋನಿ, ಕಟ್ಟಿಗೆ, ಹತ್ತಿ ಬಟ್ಟೆ ಇತ್ಯಾದಿ ಉಪಯೋಗಿಸಿ ಸೃಷ್ಟಿಸಿರುವ 60ಕ್ಕೂ ಹೆಚ್ಚು ಗಣಪತಿ ಪ್ರತಿಮೆಗಳೆಲ್ಲವೂ ಪರಿಸರ ಪ್ರೇಮಿಯಾಗಿವೆ. ಫ್ಲಾಸ್ಟರ್‌ ಆಫ್‌ ಪ್ಯಾರೀಸ್‌ ಸೇರಿ ಜಲ ಮಾಲಿನ್ಯವನ್ನುಂಟು ಮಾಡುವ ಯಾವುದೇ ಬಣ್ಣ, ರಾಸಾಯನಿಕ ವಸ್ತುಗಳನ್ನು ಬಳಸದೆ ನೀರಿನಲ್ಲಿ ಸುಲಭವಾಗಿ ಕರಗುವ ಪರಿಸರ ಸ್ನೇಹಿ ಮಣ್ಣು, ವಾಟರ್‌ ಪೇಂಟ್ ಬಳಸಿ ತಯಾರಿಸಲಾಗಿದೆ. 4000 ರೂಪಾಯಿಗಳಿಂದ 17000 ರೂಪಾಯಿಗಳ ತನಕ ಗಣಪತಿ ಮಾರಾಟವಾಗುತ್ತವೆ.

ಸ್ಥಳೀಯ ಕಲಾವಿದರಾದ ಭೂಸಾರೆ ಕೃಷ್ಣ ಮತ್ತು ಚಿತ್ರಗಾರ ರಾಮು ಅವರು ಮಣ್ಣಿನ ಗಣೇಶ ಮೂರ್ತಿಗಳೇ ಪೂಜೆಗೆ ಶ್ರೇಷ್ಠ ಎನ್ನುವ ಅವರು ಈ ವರ್ಷ ವಿಶೇಷವಾಗಿ ಪ್ರತಿಯೊಬ್ಬರಿಗೆ ಕೈಗೆಟುಕುವ ಬೆಲೆಯಲ್ಲಿ ಮಣ್ಣಿನ ಗಣೇಶ ಮೂರ್ತಿಗಳನ್ನು ತಯಾರಿಸಿ ಮಾರಾಟದಲ್ಲಿ ನಿರತರಾಗಿದ್ದಾರೆ. ಇನ್ನು ಸ್ಥಳೀಯ ಕಲಾವಿದರಾದ ಚಿತ್ರಗಾರ ಕುಟುಂಬದವರು, ಭೂಸಾರೆ ಸಹೋದರರು ವೈವಿಧ್ಯಮಯ ಗಣಪತಿಗಳನ್ನು ತಯಾರಿಸಿದ್ದು, ಭರದಿಂದ ಮಾರಾಟ ಮಾಡುತ್ತಿದ್ದಾರೆ. ಪಟ್ಟಣದ ಪ್ರಮುಖ ಬೀದಿಯಲ್ಲಿ ಅಲ್ಲಲ್ಲಿ ಗಣಪತಿಗಳನ್ನು ಮಾರುತ್ತಿರುವುದು ಕಂಡು ಬಂತು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.