ಅಗತ್ಯವಿದ್ದೆಡೆ ಸಿಆರ್‌ಜೆಡ್‌ ನಿಯಮ ಸರಳೀಕರಣ: ಡಿಸಿ

ಪರಿಸರ ಸ್ನೇಹಿ ಕಡಲತೀರ ಬ್ಲೂಫ್ಲಾಗ್‌ ಯೋಜನೆಗೆ ನಿಯಂತ್ರಣದ ತೊಡಕು ನಿವಾರಣೆ

Team Udayavani, Jul 18, 2019, 1:42 PM IST

18-July-31

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾಸರಕೋಡ್‌ ಪರಿಸರ ಸ್ನೇಹಿ ಕಡಲತೀರ ಬ್ಲೂಫ್ಲಾಗ್‌ ಯೋಜನೆಗೆ ಆಯ್ಕೆಯಾಗಿ ಅಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ನಡೆಯುತ್ತಿರುವ ಬೆನ್ನೆಲ್ಲೆ ಕರಾವಳಿ ನಿಯಂತ್ರಣ ವಲಯ 2019ರ ಅಧಿಸೂಚನೆ ಜಾರಿಯಾಗಿದ್ದು ಉತ್ತರ ಕನ್ನಡ ಜಿಲ್ಲೆಯ ಕರಾವಳಿಯುದ್ದಕ್ಕೂ ಪ್ರವಾಸೋದ್ಯಮ ಅಭಿವೃದ್ಧಿಗೆ ಇದ್ದ ನಿಯಂತ್ರಣದ ತೊಡಕುಗಳು ನಿವಾರಣೆಯಾದಂತಾಗಿವೆ.

2011ರ ಅಧಿಸೂಚನೆಯಂತೆ ಕರಾವಳಿ ನಿಯಂತ್ರಣ ವಲಯದ ನಿಯಮಗಳು ಸಿಆರ್‌ಜಡ್‌-3ರ ಗ್ರಾಮೀಣ ಪ್ರದೇಶದ ಕರಾವಳಿ ಸಮುದ್ರದ ಏರಲೆಯಿಂದ 200 ಮೀಟರ್‌ ಹಾಗೂ ಸಮುದ್ರ ಸೇರುವ ನದಿ ಉದ್ದಕ್ಕೂ ದಡದಿಂದ 100 ಮೀಟರ್‌ವರೆಗಿನ ನಿಬಂಧನೆಗೆ ಸಡಿಲ, ಸೇರಿದಂತೆ 2019ರ ಅಧಿಸೂಚನೆಯಲ್ಲಿ ಹಲವಾರು ಉಪಯುಕ್ತ ಹಾಗೂ ಈ ಹಿಂದೆ ಇದ್ದ ಕಠಿಣ ನಿಯಮಗಳನ್ನು ಸರಳಗೊಳಿಸಲಾಗಿದೆ. ಇದರಿಂದಾಗಿ ಕರಾವಳಿ ಭಾಗದಲ್ಲಿ ಕೈಗೊಳ್ಳಬಹುದಾದ ಪ್ರವಾಸೋದ್ಯಮ ಯೋಜನೆಗಳಿಗೆ ಪರಿಷ್ಕೃತ ಅಧಿಸೂಚನೆ ವರದಾನವಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಹರೀಶ್‌ಕುಮಾರ್‌ ಕೆ. ತಿಳಿಸಿದ್ದಾರೆ.

ಬ್ಲ್ಯೂಫ್ಲಾಗ್‌ ಜಾಗತಿಕ ಮನ್ನಣೆಗಾಗಿ ಅಭಿವೃದ್ಧಿಗೊಳಿಸಲು ಕೇಂದ್ರ ಸರ್ಕಾರದಿಂದ ಆಯ್ಕೆಯಾದ ದೇಶದ 12 ಬೀಚ್‌ಗಳ ಪೈಕಿ ಹೊನ್ನಾವರ ತಾಲೂಕು ಕಾಸರಕೋಡ್‌ ಪರಿಸರ ಸ್ನೇಹಿ ಕಡಲತೀರವೂ ಆಯ್ಕೆಯಾಗಿ ಈಗಾಗಲೇ ಅಲ್ಲಿ ಜಾಗತಿಕ ಮನ್ನಣೆಗೆ ಬೇಕಾದ ಮಾನದಂಡದಂತೆ ಕಾಮಗಾರಿಗಳು ನಡೆಯುತ್ತಿವೆ. ಇನ್ನೊಂದೆಡೆ ಬಹು ನಿರೀಕ್ಷಿತ ಕರಾವಳಿ ನಿಯಂತ್ರಣ ವಲಯದ 2011ರ ಅಧಿಸೂಚನೆ ನಿಯಮಗಳು ಪರಿಷ್ಕೃತಗೊಂಡು 2019ರ ಹೊಸ ಅಧಿಸೂಚನೆ ಬಿಡುಗಡೆಯಾಗಿದೆ. ಇದೀಗ ಈ ಹಿಂದೆ ಇದ್ದ ಹಲವು ಕಠಿಣ ನಿಯಮಗಳು ಸರಳಗೊಂಡಿವೆ ಎಂದು ಅವರು ತಿಳಿಸಿದರು.

ಹೊಸ ನಿಯಮದ ಪ್ರಕಾರ ಸಿಆರ್‌ಜಡ್‌-ವಲಯ 3ರಲ್ಲಿ ಗ್ರಾಮೀಣ ಪ್ರದೇಶದ ಕರಾವಳಿಯಲ್ಲಿ 2151ಕ್ಕಿಂತ ಹೆಚ್ಚಿನ ಜನಸಾಂದ್ರತೆ ಇರುವ ಪ್ರದೇಶದಲ್ಲಿ ಸಮುದ್ರದ ಏರಲೆಯಿಂದ 200 ಮೀಟರ್‌ ಬದಲಾಗಿ ಕೇವಲ 50 ಮೀಟರ್‌ನಲ್ಲಿ ಅಭಿವೃದ್ಧಿಗೆ ಅವಕಾಶವಿದೆ. ಉತ್ತರ ಕನ್ನಡ ಜಿಲ್ಲೆಯ ಸ್ವಲ್ಪ ಪ್ರದೇಶದಲ್ಲಿ ಇದರ ಲಾಭ ಪಡೆಯಬಹುದಾಗಿದೆ ಎಂದರು.

ಸಮುದ್ರ ಸೇರುವ ನದಿಯ ಉದ್ದಕ್ಕೂ ಪ್ರವಾಸೋದ್ಯಮ ಅಭಿವೃದ್ಧಿ ಚಟುವಟಿಕೆಗಳಿಗೆ ಸಾಕಷ್ಟು ಅವಕಾಶಗಳಿವೆ. ಈ ಹಿಂದಿನ ನಿಯಮದ ಪ್ರಕಾರ ನದಿ ದಡದಿಂದ 100 ಮೀ.ಒಳಗೆ ಯಾವುದೇ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವಂತಿರಲಿಲ್ಲ. ಆದರೀಗ ಅದನ್ನು ಕೇವಲ 10 ಮೀಟರ್‌ವರೆಗೆ ಇಳಿಸಲಾಗಿದೆ. ಇದರಿಂದ ನದಿಗುಂಟ ಅಭಿವೃದ್ಧಿಗೂ ಅವಕಾಶ ಕಲ್ಪಿಸಲಾಗಿದೆ.

1991ರ ನಂತರ ಸಮುದ್ರ ದಡದಲ್ಲಿ ಈಗಾಗಲೇ ಇರುವ ಪ್ರವಾಸೋದ್ಯಮ ಪೂರಕ ಕಟ್ಟಡಗಳ ವಿಸ್ತರಣೆ ಅಥವಾ ನವೀಕರಣಕ್ಕೆ ಅವಕಾಶವಿರಲಿಲ್ಲ. ಆದರೀಗ ಶೇ.25ರಷ್ಟು ವಿಸ್ತರಣೆ ಅಥವಾ ನವೀಕರಣಕ್ಕೆ ನಿಯಮಗಳಲ್ಲಿ ಅವಕಾಶ ಕಲ್ಪಿಸಲಾಗಿದೆ.

ಕರಾವಳಿ ನಿಯಂತ್ರಣ ವಲಯದ ಅಧಿಕಾರಿ ಪ್ರಸನ್ನ ಪಟಗಾರ್‌, 2011ರ ಅಧಿಸೂಚನೆ ನಿಯಮಗಳು 2019ರ ಜನೆವರಿಯಲ್ಲಿ ಪರಿಷ್ಕೃತಗೊಂಡಿದ್ದು ಶೀಘ್ರವೇ ಕರಾವಳಿ ವಲಯ ನಿರ್ವಹಣಾ ಯೋಜನೆ (ಕೆಜಡ್‌ಎಂಪಿ)ಯಲ್ಲಿ ಅಳವಡಿಸಲಾಗುವುದು. ಇದರಿಂದ ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ವಿಶೇಷವಾಗಿ ಸಮುದ್ರದಂಚಿನ ಮೀನುಗಾರರು ಹೋಮ್‌ಸ್ಟೆ, ರೆಸಾರ್ಟ್‌ಗಳನ್ನು ನಿಯಮಾನುಸಾರ ಮಾಡುವುದಾದರೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ಸಿಆರ್‌ಜಡ್‌ ವಲಯ 1ರಲ್ಲಿ ಬರುವ ಕಾಂಡ್ಲಾ ಮತ್ತಿತರ ಪರಿಸರ ಸ್ನೇಹಿ ಪ್ರವಾಸೋದ್ಯಮಕ್ಕೂ ನಿಯಮಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. ಹೊಸ ನಿಯಮಾವಳಿಗಳು ಬಹುಪಾಲು ಪ್ರವಾಸೋದ್ಯಮಕ್ಕೆ ಪೂರಕವಾಗಿದ್ದು ಜಿಲ್ಲೆಯ ಪ್ರವಾಸೋದ್ಯಮಕ್ಕೆ ಮತ್ತಷ್ಟು ವೇಗ ಕೊಡಲಾಗುವುದು.
ಡಾ| ಹರೀಶಕುಮಾರ್‌, ಡಿಸಿ

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.