ಕರಾವಳಿಯಲ್ಲಿ ಮುಂದುವರಿದ ಮಳೆ
ಜನ-ಜಾನುವಾರುಗಳಿಗೆ ತೊಂದರೆ ಆಗದಂತೆ ಜಲಾಶಯಗಳಿಂದ ನೀರು ಬಿಡುಗಡೆ
Team Udayavani, Oct 24, 2019, 5:30 PM IST
ಕಾರವಾರ: ಉತ್ತರ ಕನ್ನಡ ಕರಾವಳಿಯಲ್ಲಿ ಮಳೆ ಮುಂದುವರಿದಿದೆ. ಕಾರವಾರದಲ್ಲಿ ಬೆಳಗಿನಿಂದ ಮಧ್ಯಾಹ್ನವರೆಗೆ ಧಾರಾಕಾರ ಮಳೆ ಸುರಿಯಿತು. ಮೀನುಗಾರರು ಸಮುದ್ರಕ್ಕೆ ಇಳಿಯಲಿಲ್ಲ. ಕದ್ರಾ, ಅಣಶಿ ಭಾಗದಲ್ಲಿ ಮಳೆ ಜೋರಾಗಿದ್ದು, ಅಣೆಕಟ್ಟುಗಳಿಂದ ಅಲ್ಪ ಪ್ರಮಾಣದ ನೀರನ್ನು ಹೊರಕ್ಕೆ ಬಿಡಲಾಗಿದೆ. ಕದ್ರಾದಿಂದ ಬುಧವಾರ ಮಧ್ಯಾಹ್ನದ ನಂತರ 21 ಸಾವಿರ ಕ್ಯೂಸೆಕ್ ನೀರನ್ನು ಕಾಳಿ ನದಿಗೆ ಬಿಡಲಾಗಿದೆ. ಜನ ಜಾನುವಾರುಗಳಿಗೆ ತೊಂದರೆ ಆಗದಂತೆ ನೀರು ಹೊರಬಿಡಲಾಗುತ್ತಿದ್ದು. ಕದ್ರಾ ಜಲಾಶಯದಲ್ಲಿ ನೀರನ ಮಟ್ಟ 32 ಮೀಟರ್ ಮುಟ್ಟದಂತೆ ನಿರಂತರವಾಗಿ ನೀರನ್ನು ನದಿಗೆ ಹರಿಸಲಾಗುತ್ತಿದೆ. ಕದ್ರಾ ಜಲಾಶಯದ ಗರಿಷ್ಠ ಮಟ್ಟ 34.50 ಮೀಟರ್ ಇದ್ದು,
31.95 ಮೀಟರ್ ತನಕ ಜಲಾಶಯದ ಮಟ್ಟ ತಲುಪಿದೆ.
ನಿರಂತರ ವಿದ್ಯುತ್ ಉತ್ಪಾದನೆ ಜೊತೆಗೆ, ನೀರನ್ನು ನದಿಗೆ ಬಿಡಲಾಗುತ್ತಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 160.2 ಮಿಮೀ ಮಳೆಯಾಗಿದ್ದು, ಸರಾಸರಿ 14.6 ಮಿಮೀ ಮಳೆ ದಾಖಲಾಗಿದೆ. ಅಕ್ಟೋಬರ್ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 152 ಮಿಮೀ ಇದ್ದು, ಇದುವರೆಗೆ ಸರಾಸರಿ ಪ್ರಮಾಣ 277.8 ಮಿಮೀ ಮಳೆ ದಾಖಲಾಗಿದೆ. ಈ ಅವಧಿಯಲ್ಲಿ ಅಂಕೋಲಾದಲ್ಲಿ 13.4 ಮಿಮೀ, ಭಟ್ಕಳ 12.2 ಮಿಮೀ, ಹಳಿಯಾಳ 4.2, ಹೊನ್ನಾವರ 27.1 ಮಿಮೀ, ಕಾರವಾರ 27.2 ಮಿಮೀ, ಕುಮಟಾ 6.6 ಮಿಮೀ, ಮುಂಡಗೋಡ 40.6 ಮಿಮೀ, ಸಿದ್ದಾಪುರ 5.4 ಮಿಮೀ, ಶಿರಸಿ 9.5 ಮಿಮೀ, ಜೊಯಿಡಾ 3 ಮಿಮೀ, ಯಲ್ಲಾಪುರ 11 ಮಿ ಮೀ ಮಳೆ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ
Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?