ಕಾರವಾರ : ಹೊರಗಿನವರಿಗೆ ನೆಗಟಿವ್‌ ವರದಿ ಕಡ್ಡಾಯ

ಧಾರ್ಮಿಕ, ಪ್ರವಾಸಿ ಸ್ಥಳಗಳಲ್ಲಿ ಕೋವಿಡ್‌ ಮಾರ್ಗಸೂಚಿ ಪಾಲನೆ ಪರಿಶೀಲನೆಗೆ ಜಿಲ್ಲಾಧಿಕಾರಿ ಸೂಚನೆ

Team Udayavani, Aug 5, 2021, 6:48 PM IST

uyg

ಕಾರವಾರ: ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇವಸ್ಥಾನ ಹಾಗೂ ಧಾರ್ಮಿಕ ಸ್ಥಳ, ಮದುವೆ ಕಾರ್ಯಕ್ರಮ, ಪ್ರವಾಸಿ ತಾಣ ಹಾಗೂ ಬೀಚ್‌ಗಳು ಸೇರಿದಂತೆ ಜನ ದಟ್ಟಣೆಯಿರುವ ಪ್ರದೇಶಗಳಲ್ಲಿ ಕೋವಿಡ್‌-19 ಮಾರ್ಗಸೂಚಿ ಪಾಲನೆಯಾಗುತ್ತಿರುವ ಬಗ್ಗೆ ತಹಶೀಲ್ದಾರರು, ಇಒ ಹಾಗೂ ಪಿಡಿಒ ಸೇರಿದಂತೆ ಪೊಲೀಸರು ಸೂಕ್ತವಾಗಿ ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಸೂಚನೆ ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಬುಧವಾರ ನಡೆಸಿದ ಗೂಗಲ್‌ ಮೀಟ್‌ನಲ್ಲಿ ಮಾತನಾಡಿದ ಅವರು, ಕೋವಿಡ್‌ ಸೋಂಕಿನ ಪರಿಣಾಮಕಾರಿ ನಿಯಂತ್ರಣಕ್ಕಾಗಿ ಕೆಲವು ಕಠಿಣ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯ ದೇವಸ್ಥಾನ ಹಾಗೂ ಇತರೆ ಧಾರ್ಮಿಕ ಸ್ಥಳಗಳಲ್ಲಿ ಸೇವಾ ಕಾರ್ಯಗಳಿಗೆ ಅವಕಾಶವಿರುವುದಿಲ್ಲ. ಇಂತಹ ಸ್ಥಳಗಳಲ್ಲಿ ಕೋವಿಡ್‌ ಮಾರ್ಗಸೂಚಿ ಪಾಲನೆ ಕಡ್ಡಾಯವಾಗಿದ್ದು, ಅದರ ನಿರ್ವಹಣೆ ಆಯಾ ಆಡಳಿತ ಮಂಡಳಿಗಳ ಜವಾಬ್ದಾರಿಯಾಗಿದೆ. ಜೊತೆಗೆ ದೇವಸ್ಥಾನ, ಧಾರ್ಮಿಕ ಸ್ಥಳಗಳಲ್ಲಿ ದಿನಕ್ಕೆ ಒಂದು ಬಾರಿ ಕಡ್ಡಾಯವಾಗಿ ಸ್ಯಾನಿಟೈಜೇಷನ್‌ ಮಾಡಬೇಕು. ಜಿಲ್ಲೆಯಲ್ಲಿ ಮದುವೆ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಕೇವಲ 50 ಜನರಿಗೆ ಮಾತ್ರ ಅವಕಾಶವಿದೆ. ಕಡ್ಡಾಯವಾಗಿ ಆಯಾ ತಹಶೀಲ್ದಾರರಿಂದ ಪೂರ್ವಾನುಮತಿ ಪಡೆಯಬೇಕು. ಮದುವೆ ಕಾರ್ಯಕ್ರಮಗಳಲ್ಲಿ ಕೋವಿಡ್‌ ಮಾರ್ಗಸೂಚಿ ಪಾಲನೆ ಬಗ್ಗೆ ಆಯಾ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ, ಪಿಡಿಓ ಹಾಗೂ ಸ್ಥಳೀಯ ಸಂಸ್ಥೆ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ಸಾರ್ವಜನಿಕರ ಹಿತದೃಷ್ಟಿಯಿಂದ ಮದುವೆ ಕಾರ್ಯಕ್ರಮದಲ್ಲಿ ಹಾಜರಿದ್ದವರ ವಿವರಗಳನ್ನು ಮೊಬೈಲ್‌ ಸಂಖ್ಯೆಯೊಂದಿಗೆ ಸಂಗ್ರಹಿಸಬೇಕು. ಒಂದುವೇಳೆ ಮದುವೆಯಲ್ಲಿ ಹಾಜರಿದ್ದವರು ಇದೇ ಜಿಲ್ಲೆಯವರಾಗಿದ್ದಲ್ಲಿ ಎರಡು ದಿನಗಳ ಒಳಗಾಗಿ ಅವರನ್ನು ಕೋವಿಡ್‌ ಪರೀಕ್ಷೆ ಒಳಪಡಿಸಬೇಕು ಎಂದರು.

72 ತಾಸಿನ ನೆಗಟಿವ್‌ ವರದಿ ಕಡ್ಡಾಯ: ಜಿಲ್ಲೆಯ ಗಡಿಭಾಗಗಳಲ್ಲಿ, ರೈಲ್ವೆ ಸ್ಟೇಷನ್‌ಗಳಲ್ಲಿ ಹೊರರಾಜ್ಯದಿಂದ ಬಂದಂತಹ ಜನರ ಮೇಲೆ ಹೆಚ್ಚು ನಿಗಾವಹಿಸುವುದರ ಜೊತೆಗೆ ರಜಿಸ್ಟರ್‌ಗಳನ್ನು ನಿರ್ವಹಿಸಬೇಕು. ವಿಶೇಷವಾಗಿ ಕೇರಳಾ ಹಾಗೂ ಮಹಾರಾಷ್ಟ್ರದಿಂದ ಬರುವ ಜನರು ಕೋವಿಡ್‌ ಲಸಿಕೆ ಪಡೆದರೂ, ಪಡೆಯದಿದ್ದರೂ 72 ಗಂಟೆಯೊಳಗಿನ ಆರ್‌ಟಿಪಿಸಿಆರ್‌ ಪರೀಕ್ಷೆಯ ನೆಗಟಿವ್‌ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ಜಿಲ್ಲೆಯ ಪ್ರವಾಸಿ ತಾಣಗಳು, ಬೀಚ್‌ಗಳಲ್ಲಿ ಕೋವಿಡ್‌ ಮಾರ್ಗಸೂಚಿ ಪಾಲನೆ ಖಚಿತತೆಗೆ ಪ್ರತಿ ಪ್ರವಾಸಿ ತಾಣಕ್ಕೆ ಇಬ್ಬರು ಪೊಲೀಸ್‌ ಸಿಬ್ಬಂದಿ ನಿಯೋಜಿಸಲಾಗಿದೆ. ಇದರೊಂದಿಗೆ ಕೋವಿಡ್‌ ಮಾರ್ಗಸೂಚಿಯ ಕಟ್ಟುನಿಟ್ಟಿನ ಪಾಲನೆ ಜವಾಬ್ದಾರಿಯನ್ನು ಆಯಾ ಪೊಲೀಸ್‌ ವೃತ್ತ ನಿರೀಕ್ಷಕರಿಗೆ ವಹಿಸಲಾಗಿದೆ ಎಂದರು.

ಮಾಸ್ಕ ಕಡ್ಡಾಯ: ಜಿಲ್ಲೆಯ ಸಾರ್ವಜನಿಕರು ಕೋವಿಡ್‌ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲಿಸಬೇಕು. ಈ ಮೂಲಕ ಕೋವಿಡ್‌ ನಿಯಂತ್ರಣಕ್ಕೆ ಸಹಕರಿಸಬೇಕು. ಒಂದುವೇಳೆ ಆರೋಗ್ಯದಲ್ಲಿ ಏರುಪೇರು ಕಂಡುಬಂದಲ್ಲಿ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಗಳಿಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳಬೇಕು. ಸರಕಾರ ಹಾಗೂ ಜಿಲ್ಲಾಡಳಿತದಿಂದ ಸೂಚಿಸಿದ ಕೋವಿಡ್‌ ಮಾರ್ಗಸೂಚಿಗಳನ್ನು ಮತ್ತು ಆದೇಶವನ್ನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯನ್ವಯ ಹಾಗೂ ಸಾಂಕ್ರಾಮಿಕ ರೋಗ ಕಾಯ್ದೆಯಂತೆ ಕ್ರಮ ಜರುಗಿಸಲಾಗುತ್ತದೆ ಎಂದರು. ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್‌.ಕೆ. ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.