ಅತಿವೃಷ್ಟಿ ; ಕೊಡಗಿಗೆ 100 ಕೋ.ರೂ. ಪರಿಹಾರ: ಸಿಎಂ
Team Udayavani, Jul 20, 2018, 11:30 AM IST
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಧಾರಾಕಾರ ಮಳೆಯಿಂದ ಸುಮಾರು 329 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿ ಹಾನಿಯಾಗಿದೆ. ಮೊದಲ ಹಂತದಲ್ಲಿ 100 ಕೋಟಿ ರೂ. ಪರಿಹಾರ ಧನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರು ವಾರ ಮಳೆಹಾನಿ ಮತ್ತು ಪ್ರಗತಿ ಪರಿಶೀಲನ ಸಭೆ ನಡೆಸಿದ ಅವರು ಅಧಿಕಾರಿಗಳಿಂದ ಮಳೆ ಹಾನಿಯ ಸಮಗ್ರ ಮಾಹಿತಿ ಪಡೆದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಡಗನ್ನು ಸರಕಾರ ಎಂದಿಗೂ ಅವಗಣಿಸಿಲ್ಲ. ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದ್ದೇನೆ ಎಂದು ತಿಳಿಸಿದರು. ಗಾಳಿಮಳೆಯಿಂದ ಮನೆ ಕಳೆದುಕೊಂಡವರಿಗೆ ಇಲ್ಲಿಯವರೆಗೆ ಕೇವಲ 5 ಸಾವಿರ ರೂ. ಪರಿಹಾರ ನೀಡಲಾಗುತ್ತಿತ್ತು. ಇನ್ನು ಮುಂದೆ ಮನೆ ಸಂಪೂರ್ಣವಾಗಿ ನಾಶವಾದರೆ 95 ಸಾವಿರ ರೂ. ಪರಿಹಾರಧನ ಮತ್ತು ಆಶ್ರಯ ಮನೆ ನಿರ್ಮಿಸಿಕೊಡಲಾಗುವುದು ಎಂದರು.
ಬಿತ್ತನೆ ಬೀಜ
ಅಗತ್ಯವಿರುವವರಿಗೆ ಉಚಿತ ಬಿತ್ತನೆ ಬೀಜ ವಿತರಿಸಲಾಗುವುದು. ಹಾನಿಗೊಳಗಾಗಿರುವ ರಸ್ತೆ, ವಿದ್ಯುತ್ ಕಂಬಗಳನ್ನು ಕೂಡಲೇ ಸರಿ ಮಾಡಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…