22 ಮಂದಿಯ ಭವಿಷ್ಯ ಬರೆಯಲಿದ್ದಾರೆ 4,40,730 ಮತದಾರರು


Team Udayavani, Apr 18, 2019, 6:30 AM IST

bavishya

ಮಡಿಕೇರಿ :ಕೊಡಗು- ಮೈಸೂರು ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆ-2019 ರ ಸಂಬಂಧವಾಗಿ ಏಪ್ರಿಲ್‌, 18 ರಂದು ನಡೆಯಲಿರುವ ಮುಕ್ತ ಹಾಗೂ ನ್ಯಾಯಸಮ್ಮತ ಮತದಾನಕ್ಕಾಗಿ ಜಿಲ್ಲಾಡಳಿತವು ಸಜ್ಜುಗೊಂಡಿದೆ ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 269 ಮತಗಟ್ಟೆಗಳು ಅದರಲ್ಲಿ 109,294 ಪುರುಷ ಮತದಾರರು, 1,11,853 ಮಹಿಳಾ ಮತದಾರರು, 10 ಇತರ ಮತದಾರರು ಒಟ್ಟು 2,21,157 ಮತದಾರರಿದ್ದಾರೆ.

ಹಾಗೆಯೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 274 ಮತಗಟ್ಟೆಗಳಿದ್ದು, ಅದರಲ್ಲಿ 1,09,573 ಪುರುಷ ಮತದಾರರು, 1,09,985 ಮಹಿಳಾ ಮತದಾರರು, 15 ಇತರ ಮತದಾರರು ಒಟ್ಟು 2,19,573 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು.

ಜಿಲ್ಲೆಯಲ್ಲಿ ಒಟ್ಟು 543 ಮತಗಟ್ಟೆಗಳಿದ್ದು, 2,18,867 ಪುರುಷ ಮತದಾರರು, 2,21,838 ಮಹಿಳಾ ಮತದಾರರು, 25 ಇತರೆ ಒಟ್ಟು 4,40,730 ಮತದಾರರಿದ್ದಾರೆ ಎಂದು ಅನೀಸ್‌ ಕಣ್ಮಣಿ ಜಾಯ್‌ ಅವರು ವಿವರಿಸಿದರು.

ಮತದಾನ ಸಿಬಂದಿ
ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ 543 ಮತಗಟ್ಟೆಗಳಿಗೆ ಒಟ್ಟು 571 ಮತಗಟ್ಟೆ ಅಧ್ಯûಾಧಿಕಾರಿಗಳು, 571 ಸಹಾಯಕ ಮತಗಟ್ಟೆ ಅಧ್ಯûಾಧಿಕಾರಿ ಹಾಗೂ 1142 ಮತದಾನಾಧಿಕಾರಿಗಳನ್ನು ನೇಮಕ ಮಾಡಲಾಗಿರುತ್ತದೆ. (ಮೀಸಲು ಸೇರಿ) ಎಲ್ಲಾ ಮತಗಟ್ಟೆ ಅಧಿಕಾರಿಗಳಿಗೆ ಎರಡು ಹಂತದಲ್ಲಿ ತರಬೇತಿಯನ್ನು ನೀಡಲಾಗಿದೆ ಎಂದರು. ಪ್ರತಿ ಮತಗಟ್ಟೆಗೆ ಒಬ್ಬರು ಮತಗಟ್ಟೆ ಅಧ್ಯûಾಧಿಕಾರಿ, ಒಬ್ಬರು ಸಹಾಯಕ ಅಧ್ಯûಾಧಿಕಾರಿ ಮತ್ತು ಇಬ್ಬರು ಮತದಾನಾಧಿಕಾರಿಗಳನ್ನು ನೇಮಿಸಲಾಗಿದೆ. ಇವರೊಂದಿಗೆ ಸ್ಥಳೀಯವಾಗಿ ಒಬ್ಬರು ಗ್ರೂಪ್‌ ಡಿ ಮತ್ತು ಮತದಾರರನ್ನು ಗುರುತಿಸಲು ಪ್ರತಿ ಮತಗಟ್ಟೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಪ್ರಜಾಪ್ರಾತಿನಿಧ್ಯ ಅಧಿನಿಯಮ 1951 ರ ಸೆಕ್ಷನ್‌ 128 ಮತ್ತು ಚುನಾವಣೆ ನಡೆಸುವ ನಿಯಮ 39 ರಂತೆ ಮೊಬೈಲ್‌ ಮತ್ತು ಕೆಮರಾಗಳಲಿ ಛಾಯಾಚಿತ್ರಗಳನ್ನು ತೆಗೆಯುವುದು ಮತದಾನದ ರಹಸ್ಯ ಉಲ್ಲಂ ಸಿದಂತಾಗುತ್ತದೆ ಎಂದರು.

ಇಂದು ಮತದಾನ
ಮತದಾನವು ಎ. 18 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಉಪಯೋಗಿಸಲಾಗು ತ್ತಿರುವ ವಾಹನಗಳು: ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳ ಮತಗಟ್ಟೆಗಳ ಮತದಾನಾಧಿ ಕಾರಿಗಳು ಮತಗಟ್ಟೆಗೆ ತಲುಪಲು ಒಟ್ಟು 90 ಕೆಎಸ್‌ಆರ್‌ಟಿಸಿ ಬಸ್ಸುಗಳು, 87 ಜೀಪ್‌ಗ್ಳು ಹಾಗೂ 51 ಮಿನಿ ಬಸ್‌ ಮತ್ತು 13 ಮ್ಯಾಕ್ಸಿಕ್ಯಾಬ್‌ ಉಪಯೋಗಿಸಲಾಗುತ್ತಿದೆ. ವಿಶೇಷಚೇತನ ಮತದಾರರನ್ನು ಅವರ ಮನೆಯಿಂದ ಮತಗಟ್ಟೆಗೆ ಕರೆದು ಕೊಂಡು ಹೋಗಲು ಮತ್ತು ಅವರು ಮತದಾನ ಮಾಡಿದ ನಂತರ ವಾಪಸ್ಸು ಮನೆಗೆ ಬಿಡುವ ಕಾರ್ಯಕ್ಕೆ ಒಟ್ಟು 176 ವಾಹನಗಳನ್ನು ಉಪಯೋಗಿ ಸಲಾಗುತ್ತಿದೆ ಎಂದು ಅನೀಸ್‌ ಕಣ್ಮಣಿ ಜಾಯ್‌ ಅವರು ವಿವರಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.