ಕೃಷಿಪತ್ತಿನ ಸಹಕಾರ ಸಂಘ ಮೂಲಕ 2,917 ರೈತರ ಸಾಲ ಮನ್ನಾ


Team Udayavani, Jul 21, 2019, 5:10 AM IST

19-GKL-01

ಗೋಣಿಕೊಪ್ಪಲು: ವಿರಾಜ ಪೇಟೆ ತಾಲ್ಲೂಕಿನ 28 ಕೃಷಿಪತ್ತಿನ ಸಹಕಾರ ಸಂಘದ ಮೂಲಕ ಸುಮಾರು 2,917 ರೈತರ ಒಟ್ಟು 20 ಕೋಟಿ 86 ಲಕ್ಷದ 53 ಸಾವಿರ ರೂಪಾಯಿಗಳು ಸಾಲ ಮನ್ನಾ ಗೊಂಡಿದೆ ಎಂದು ತಾಲ್ಲೂಕು ಸಹಕಾರ ಸಂಘದ ಅಧಿಕಾರಿ ಮೋಹನ್‌ ಮಾಹಿತಿ ನೀಡಿದ್ದಾರೆ. ಪೊನ್ನಂಪೇಟೆ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ತಾ.ಪಂ. ಅಧ್ಯಕ್ಷ ಬೊಳ್ಳಚಂಡ ಸ್ಮಿತಾ ಪ್ರಕಾಶ್‌ ಅಧ್ಯಕ್ಷತೆಯಲ್ಲಿ ನಡೆದ ತಾಲ್ಲೂಕು ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ವಿಚಾರ ಮಂಡಿಸಿದರು. 9,989 ರೈತ ಫ‌ಲಾನುಭವಿಗಳು ಸಾಲ ಮನ್ನಾಕ್ಕೆ ಅರ್ಹರಾಗಿದ್ದು, ಒಟ್ಟು 85 ಕೋಟಿ 46 ಲಕ್ಷದ 77 ಸಾವಿರ ರೂಪಾಯಿಗಳು ಅನುಧಾನ ಸರ್ಕಾರದಿಂದ ಬರಬೇಕು. ಆದರೆ ಮೊದಲ ಹಂತದಲ್ಲಿ 2,917 ರೈತ ಫ‌ಲಾನುಭವಿಗಳ ಸಾಲ ಮನ್ನಾಕ್ಕೆ ಅರ್ಹರಾಗಿದ್ದಾರೆ. ಈ ಪ್ರಕಾರ 20 ಕೋಟಿ 86 ಲಕ್ಷದ 53 ಸಾವಿರ ರೂಪಾಯಿಗಳು ಸಾಲ ಮನ್ನಾವಾಗಿದೆ ಎಂದು ತಿಳಿಸಿದರು.

ಇದರಂತೆ ಒಂದು ಲಕ್ಷ ಒಳಗಿನ ಸಾಲ ಹೊಂದಿದ ರೈತ ಫ‌ಲಾನುಭವಿಗಳು 3,650 ಅರ್ಜಿದಾರರಾಗಿದ್ದು, ಈ ಪ್ರಕಾರ ಸಾಲದ ಮೊತ್ತ 22 ಕೋಟಿ 34 ಲಕ್ಷದ 77 ಸಾವಿರವಾಗಿದೆ. 6,339 ರೈತ ಸದಸ್ಯರು ಒಂದು ಲಕ್ಷ ಮೇಲ್ಪಟ್ಟ ಸಾಲ ಹೊಂದಿರುವ ರೈತರು 63 ಕೋಟಿ 39 ಲಕ್ಷ ಸಾಲ ಮನ್ನಾಕ್ಕೆ ಒಳಪಟ್ಟಿದ್ದಾರೆ ಎಂದು ಹೇಳಿದರು. ಕುಟ್ಟ ಬಾಲಕಿಯರ ವಸತಿ ನಿಲಯದಲ್ಲಿ ಅವ್ಯವಸ್ಥೆ ಎದ್ದು ಕಾಣುತ್ತಿದೆ. ವಿದ್ಯುತ್‌ ಬೆಳಕು, ಬಿಸಿ ನೀರಿನ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆ ಕಾಡುತ್ತಿದೆ. ಮಕ್ಕಳಿಗೆ ಸ್ನಾನಕ್ಕೆ ಬಿಸಿ ನೀರಿನ ವ್ಯವಸ್ಥೆ ಇಲ್ಲದೇ ಇರುವುದರಿಂದ ವಾರದ ಒಂದು ದಿನ ತಮ್ಮ ಮನೆಗಳಿಗೆ ತೆರಳಿ ಸ್ನಾನ ಮಾಡಿ ಬರುವ ಸ್ಥಿತಿ ಎದುರಾಗಿದೆ. ಈ ಬಗ್ಗೆ ಕ್ರಮ ಕೈಗೊಂಡು ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು ತಾ.ಪಂ. ಅಧ್ಯಕ್ಷೆ ಬೊಳ್ಳಚಂಡ ಸ್ಮಿತಾ ಪ್ರಕಾಶ ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆಯ ಅಧಿಕಾರಿ ದೇವರಾಜ್‌ ಅವರಿಗೆ ಸೂಚಿಸಿದರು.

ಕೃಷಿ ಇಲಾಖೆಯಲ್ಲಿ ಬ್ಯಾಟರಿ ಚಾಲಿತ ಯಂತ್ರದ ಸ್ಪರ್ಶ ಕಂಪೆನಿ ಬಹಳ ಕಳಪೆ ಮಟ್ಟದಾಗಿದೆ. ಈ ಬಗ್ಗೆ ಗಮನ ಹರಿಸಿ ಉತ್ತಮ ಯಂತ್ರಗಳನ್ನು ವಿತರಿಸಲು ಮುಂದಾಗಬೇಕೆಂದು ಸಲಹೆ ನೀಡಿದರು. ಕಂದಾಯ ಇಲಾಖೆಯಲ್ಲಿರುವ ಸಮಸ್ಯೆಗಳನ್ನು ಶೀಘ್ರದಲ್ಲಿ ಬಗೆಹರಿಸಿ ಕಡತಗಳ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗುವುದು ಮತ್ತು ವಸತಿ ರಹಿತರಿಗೆ ಮೀಸಲಿರಿಸಿದ ಸ್ಥಳಗಳು ಒತ್ತುವರಿಯಾಗಿದ್ದರೆ ಅಂತಹ ಸ್ಥಳಗಳನ್ನು ತೆರವುಗೊಳಿಸಿ ನಿವೇಶನರಹಿತರಿಗೆ ಹಂಚಿಕೆ ಮಾಡಲಾಗುವುದು ಎಂದು ತಹಶೀಲ್ದಾರ್‌ ಪುರಂದರ ಸಭೆ ಮಾಹಿತಿ ನೀಡಿದರು. ಮೀನುಗಾರಿಕೆ ಇಲಾಖೆಯಲ್ಲಿ ಫ‌ಲಾನುಭವಿಗಳು ಮೀನು ಮರಿಗಳಿಗೆ ಅರ್ಜಿ ಸಲ್ಲಿಸುವಂತೆ ಸಭೆಗೆ ಅಧಿಕಾರಿ ಪ್ರಿಯ ಮಾಹಿತಿ ನೀಡಿದರು. ತಾಲ್ಲೂಕಿನ ಅಬಕಾರಿ ಇಲಾಖೆಯ ವತಿಯಿಂದ ಕಳೆದ ತಿಂಗಳಿನಲ್ಲಿ ಮೂರು ಕೋಟಿ ಹನ್ನೊಂದು ಲಕ್ಷ ಆದಾಯ ಸರ್ಕಾರಕ್ಕೆ ಸಲ್ಲಿಸಿದೆ ಎಂದು ತಾಲ್ಲೂಕು ಶ್ರೀನಿವಾಸ್‌ ಸಭೆಗೆ ತಿಳಿಸಿದರು. ಇಲಾಖೆಯ ವತಿಯಿಂದ ಅಕ್ರಮ ಮಧ್ಯ ಮಾರಟ ಮಾಡುವವರ ಮೇಲೆ ದಾಳಿ ನಡೆಸಿ 99 ಪ್ರಕರಣಗಳು ದಾಖಲಾಗಿದೆ. 58 ಸೇಂದಿ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದರು. ಅಧಿಕಾರಿಗಳು ತಮ್ಮ ಇಲಾಖೆಗಳ ಪ್ರಗತಿಯ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದರು.

ಸಭೆಯಲ್ಲಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಜನಿತ್‌, ತಹಶೀಲ್ದಾರ್‌ ಪುರಂದರ, ಕಾರ್ಯ ನಿರ್ವಹಣಾಧಿಕಾರಿ ಹೆಚ್. ಷಣ್ಮುಗಂ ಉಪಸ್ಥಿತರಿದ್ದು ತಾಲ್ಲೂಕು ಮಟ್ಟದ ಅಧಿಕಾರಿಗಳುಉಪಸ್ಥಿತರಿದ್ದರು.‌

ಕೃಷಿ ಅಧಿಕಾರಿಗಳ ವಿರುದ್ದ ತಾ.ಪಂ. ಉಪಾಧ್ಯಕ್ಷ ಕಿಡಿ
ಕೃಷಿ ಇಲಾಖೆಯಲ್ಲಿ ಕಾಟಾಚಾರಕ್ಕೆ ಬೀಜೋಪಚಾರ ಕಾರ್ಯಕ್ರಮವನ್ನು ಹೋಬಳಿ ಮಟ್ಟದಲ್ಲಿ ನಡೆಸಲಾಗುತ್ತಿದೆ. ಜೂನ್‌ ತಿಂಗಳಿನಲ್ಲಿ ಮಾಡಬೇಕಾದ ಈ ಕಾರ್ಯ ಜುಲೈ ಅಂತ್ಯದಲ್ಲಿ ನಡೆಸುತ್ತಿರುವುದು ಯಾವ ಸಾಧನೆಗೆ. ಅಧಿಕಾರಿಗಳಿಗೆ ಈ ಬಗ್ಗೆ ಅಲ್ಪ ಜ್ಞಾನವಾದರೂ ಇರಬಾರದೇ ಎಂದು ತಾ.ಪಂ. ಉಪಾಧ್ಯಕ್ಷ ನೆಲ್ಲೀರ ಚಲನ್‌ ಕುಮಾರ್‌ ಕೃಷಿ ಅಧಿಕಾರಿಗಳ ವಿರುದ್ದ ಕಿಡಿಕಾರಿದರು. ತಾಲ್ಲೂಕಿನ ಬಹುತೇಕ ಶಾಲೆಗಳಿಗೆ ಅಂಚೆಯ ಮೂಲಕ ಧರ್ಮ ಗ್ರಂಥಗಳನ್ನು ವಿತರಿಸಲಾಗುತ್ತಿದೆ. ಈ ಬಗ್ಗೆ ಯಾವ ಕ್ರಮ ಕೈಗೊಂಡಿದೀರಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲಾ ಬೆಳಗಿಯವರನ್ನು ಉಪಾಧ್ಯಕ್ಷ ನೆಲ್ಲೀರ ಚಲನ್‌ ಕುಮಾರ್‌ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಅಧಿಕಾರಿ ತಾಲ್ಲೂಕಿನ ಸುಮಾರು 26 ಶಾಲೆಯಿಂದ ಈ ಕೃತಿಗಳನ್ನು ಹಿಂಪಡೆದುಕೊಂಡು ಅಂಚೆಯ ಮೂಲಕ ಕಳುಹಿಸಿದ ಅನಾಮಿಕರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ತನಿಖೆ ನಡೆಸಬೇಕೆಂದು ಪೊಲೀಸ್‌ ಇಲಾಖೆಗೆ ದೂರು ನೀಡಿದ್ದೇವೆ ಎಂದು ತಿಳಿಸಿದರು.

ಟಾಪ್ ನ್ಯೂಸ್

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.