ಕೊಡಗಿನ ಸಂಪಾಜೆ ಬಳಿ ಮೂವರು ನಕ್ಸಲರು ಪ್ರತ್ಯಕ್ಷ !
Team Udayavani, Feb 3, 2018, 8:30 AM IST
ಮಡಿಕೇರಿ:ಇಲ್ಲಿನ ಸಂಪಾಜೆಯ ಗುಡ್ಡೆಗದ್ದೆ ಬಳಿ ಮೂವರು ನಕ್ಸಲರು ಮನೆಯೊಂದಕ್ಕೆ ನುಗ್ಗಿ ಬೆದರಿಸಿ ಅಡುಗೆ ಸಾಮಗ್ರಿಗಳನ್ನು ಪಡೆದಿರುವ ಆತಂಕಕಾರಿ ಘಟನೆ ಶುಕ್ರವಾರ ಸಂಜೆ ನಡೆದಿರುವ ಬಗ್ಗೆ ವರದಿಯಾಗಿದೆ.
ಗಣೇಶ ಎನ್ನುವವರ ಮನೆಗೆ ಆಗಮಿಸಿದ ಮೂವರು ಶಸ್ತ್ರಧಾರಿ ನಕ್ಸಲರು ಬೆದರಿಸಿ ಅಕ್ಕಿ, ಖಾರದಪುಡಿ ಸೇರಿದಂತೆ ಅಡುಗೆ ಸಾಮಗ್ರಿಗಳನ್ನು ಅಂಗಡಿಯಿಂದ ತರಿಸಿಕೊಂಡು ಕಾಡಿನಲ್ಲಿ ಮರೆಯಾಗಿದ್ದಾರೆ ಎಂದು ಹೇಳಲಾಗಿದೆ.
ವಿಚಾರ ತಿಳಿದ ಮಡಿಕೇರಿ ಗ್ರಾಮಾಂತರ ಪೊಲೀಸರು ಎಫ್ಐಆರ್ ದಾಖಲಿಸಿ ಸ್ಥಳಕ್ಕೆ ದೌಡಾಯಿಸಿದ್ದಾರೆ.
ನಕ್ಸಲ್ ನಿಗ್ರಹ ಪಡೆ ಸ್ಥಳಕ್ಕೆ ತೆರಳುತ್ತಿದ್ದು ಕೂಂಬಿಂಗ್ ಕಾರ್ಯಾಚರಣೆ ನಡೆಸಲಿದೆ ಎಂದು ತಿಳಿದು ಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಕ್ಕೆ ಹೊಂದಿಕೊಂಡಂತಿರುವ ಗ್ರಾಮ ಇದಾಗಿದ್ದು ಕೆಲ ದಿನಗಳ ಹಿಂದೆ ಶಿರಾಡಿಯಲ್ಲಿ ಕಾಣಿಸಿಕೊಂಡಿದ್ದ ಮೂವರು ನಕ್ಸಲರೇ ಇವರು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ