ಕೊಡಗಿನ 167 ಹಾಡಿಗಳ ಆದಿವಾಸಿಗಳಿಗೆ ಆಧಾರ್‌ ಭಾಗ್ಯ


Team Udayavani, Jul 17, 2019, 5:46 AM IST

kodagina-167

ಮಡಿಕೇರಿ: ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಹಾಡಿಯ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಆಧಾರ್‌ ಗುರುತಿನ ಚೀಟಿ ಕಡ್ಡಾಯವಾಗಿ ಅಗತ್ಯವಿರುವ ಹಿನ್ನೆಲೆ ಪ್ರತಿಯೊಬ್ಬ ಗಿರಿಜನ ಕುಟುಂಬದವರಿಗೆ ಆಧಾರ್‌ ಗುರುತಿನ ಚೀಟಿ ನೋಂದಾಯಿಸಲು 15 ದಿನಗಳ ಕಾಲ ಮೊಬೈಲ್‌ ಸಂಚಾರಿ ವಾಹನದ ಮೂಲಕ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಹಾಡಿಗಳಿಗೆ ತೆರಳಿ ಆಧಾರ್‌ ನೋಂದಣಿ ಮಾಡುವ ಪ್ರಕ್ರಿಯೆಗೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ಸೋಮವಾರ ಚಾಲನೆ ನೀಡಿದರು.

ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಆಧಾರ್‌ ನೋಂದಣಿ ಅಭಿಯಾನಕ್ಕೆ ಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಪ್ರಥಮ ಬಾರಿಗೆ ಹಾಡಿಗಳಿಗೆ ತೆರಳಿ ಆಧಾರ್‌ ನೋಂದಣಿ ಮಾಡಲಾಗುತ್ತಿದೆ. ಜಿಲ್ಲೆಯ ಮೂರು ತಾಲ್ಲೂಕಿನ ಸುಮಾರು 167 ಹಾಡಿಗಳಿಗೆ ಆಧಾರ್‌ ಕಿಟ್ಟುಗಳನ್ನು ತೆಗೆದುಕೊಂಡು ಹೋಗಿ ನೋಂದಣಿ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು. ದಿನಕ್ಕೆ 60 ಜನರಿಗೆ ಆಧಾರ್‌ ನೋಂದಣಿ ಮಾಡುವ ಗುರಿ ಇದೆ. ಗಿರಿಜನರು ಆಧಾರ್‌ ನೋಂದಣಿ ಮಾಡಿಸಿ ಸೌಲಭ್ಯ ಪಡೆಯಲು ಮುಂದಾಗಬೇಕಿದೆ ಎಂದರು.

ಜಿಲ್ಲೆಯಲ್ಲಿ 15 ದಿನಗಳ ಕಾಲ ತಾಲ್ಲೂಕಿಗೆ ಒಂದರಂತೆ ಮೂರು ಸಂಚಾರಿ ವಾಹನಗಳನ್ನು ನಿಯೋಜಿಸಲಾಗಿದ್ದು, ಸಂಚಾರಿ ವಾಹನದಲ್ಲಿ ಆಧಾರ್‌ ಕಿಟ್‌ ಒಳಗೊಂಡ ಸಲಕರಣೆಗಳು ಇರಲಿದ್ದು, ಆಫ್ಲೈನ್‌ ಮೂಲಕ ಆಧಾರ್‌ ನೋಂದಣಿ ಮಾಡಲಾಗುತ್ತದೆ ಎಂದು ಆಧಾರ್‌ ನೋಂದಣಿ ವಿಭಾಗದ ಪ್ರಶಾಂತ್‌ ಹಾಗೂ ರಾಕೇಶ್‌ ಮಾಹಿತಿ ನೀಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್‌, ಐಟಿಡಿಪಿ ಅಧಿಕಾರಿ ಚಂದ್ರಶೇಖರ್‌, ಸಮಾಜ ಕಲ್ಯಾಣಾಧಿ ಕಾರಿಗಳಾದ ಚಿಕ್ಕಬಸವಯ್ಯ, ಶೇಖರ್‌, ದೇವರಾಜು ಇತರರು ಉಪಸ್ಥಿತರಿದ್ದರು.

ಆಧಾರ್‌ ಕಡ್ಡಾಯ
ವಸತಿ ಸೇರಿದಂತೆ ವೈಯಕ್ತಿಕ ಸೌಲಭ್ಯ ಪಡೆಯುವಂತಾಗಲು ಆಧಾರ್‌ ಕಡ್ಡಾಯವಾಗಿದ್ದು, ಕೆಲವು ಕುಟುಂಬದವರು ಇನ್ನೂ ಆಧಾರ್‌ ನೋಂದಣಿ ಮಾಡಿಸದೆ ಸರ್ಕಾರದ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ಇದನ್ನು ಮನಗಂಡು ಹಾಡಿಗಳಿಗೆ ತೆರಳಿ ಆಧಾರ್‌ ನೋಂದಣಿ ಮಾಡಿಸಲು ಮುಂದಾಗಲಾಗಿದೆ ಎಂದು ಐಟಿಡಿಪಿ ಇಲಾಖೆ ಅಧಿಕಾರಿ ಸಿ.ಶಿವಕುಮಾರ್‌ ಅವರು ತಿಳಿಸಿದರು. ಜಿಲ್ಲೆಯಲ್ಲಿ ಸುಮಾರು 65 ಸಾವಿರ ಆದಿವಾಸಿ ಜನರಿದ್ದು, ಇವರಿಗೆ ಸರ್ಕಾರದ ವೈಯಕ್ತಿಕ ಸೌಲಭ್ಯಗಳು ಮರೀಚಿಕೆ ಯಾಗಿದೆ ಆದರೆ ಬಳಸಿಕೊಳ್ಳಲು ಮುಂದೆ ಬಂದರೂ ಆಧಾರ್‌ ಚೀಟಿ ಇಲ್ಲದಿರುವುದರಿಂದ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದರು.

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.