ಆದಿ ದ್ರಾವಿಡ ಸಮುದಾಯದಲ್ಲಿ ಒಡಕು ಮೂಡಿಸುವ ಯತ್ನ: ಆರೋಪ
Team Udayavani, Mar 31, 2017, 2:25 PM IST
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸುಮಾರು 23 ಸಾವಿರ ಜನಸಂಖ್ಯೆಯನ್ನು ಹೊಂದಿರುವ ಆದಿ ದ್ರಾವಿಡ ಸಮುದಾಯದಲ್ಲಿ ಒಡಕು ಮೂಡಿಸಲು ಕೆಲವರು ಪ್ರಯತ್ನಿಸುತ್ತಿದ್ದು, ಇದಕ್ಕೆ ಸಮಾಜ ಬಾಂಧವರು ಕಿವಿಗೊಡದೆ ನೋಂದಣಿಯಾಗಿರುವ ಕೊಡಗು ಜಿಲ್ಲಾ ಆದಿ ದ್ರಾವಿಡ ಸಮಾಜ ಸೇವಾ ಸಂಘದಲ್ಲಿ ಗುರುತಿಸಿಕೊಳ್ಳುವಂತೆ ಸಂಘದ ಜಿಲ್ಲಾಧ್ಯಕ್ಷರಾದ ಎಸ್. ಜನಾರ್ದನ ಕರೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆದಿದ್ರಾವಿಡ ಸಮುದಾಯವನ್ನು ಒಗ್ಗೂಡಿಸುವ ಉದ್ದೇಶದಿಂದ 2011ರಲ್ಲಿ ಸಂಘವನ್ನು ಸ್ಥಾಪಿಸಲಾಯಿತು. ಆದರೆ ಇತ್ತೀಚೆಗೆ ಸೋಮಪ್ಪ ಎಂಬುವವರು ಇಲ್ಲಸಲ್ಲದ ಆರೋಪಗಳನ್ನು ಮಾಡುವ ಮೂಲಕ ಆದಿ ದ್ರಾವಿಡ ಸಮುದಾಯವನ್ನು ಒಡೆಯಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. ಜನಾಂಗ ಬಂಧುಗಳು ಇವರ ಮಾತಿಗೆ ಮರುಳಾಗಿ ಮೋಸ ಹೋಗ ಬಾರದೆಂದು ಕರೆ ನೀಡಿದರು.
ಸಂಘಟನೆಯು ಸಮುದಾಯದ ಬಂಧುಗಳ ಪರವಾಗಿ ಅನೇಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದ್ದು, ಗ್ರಾಮ ಸಮಿತಿಯನ್ನು ಕೂಡ ರಚಿಸಲಾಗಿದೆ. ಸದ್ಯದಲ್ಲೆ ಜಿಲ್ಲಾಮಟ್ಟದ ಸಭೆ ನಡೆಯಲಿದ್ದು, ಎ. 16ರಂದು ಸಿದ್ದಾಪುರದಲ್ಲಿ ಡಾ| ಅಂಬೆೇಡ್ಕರ್ ಜಯಂತಿ ಆಚರಿಸಲಾಗುವುದು ಎಂದರು. ಮೇ ತಿಂಗಳಿನಲ್ಲಿ ಆದಿ ದ್ರಾವಿಡರಿಗಾಗಿ ಕ್ರೀಡಾಕೂಟವನ್ನು ಆಯೋಜಿಸಲಾಗುವುದೆಂದು ಜನಾರ್ದನ ಮಾಹಿತಿ ನೀಡಿದರು.
ಉಪಾಧ್ಯಕ್ಷ ಜಿ. ಕುಶಾಲಪ್ಪ ಮಾತನಾಡಿ, ಸೋಮಪ್ಪ ಎಂಬುವವರು ಸಮುದಾಯದ ಮಂದಿಯಿಂದ ನೋಂದಣಿ ಶುಲ್ಕವೆಂದು 500 ರೂ. ಸಂಗ್ರಹಿಸುತ್ತಿದ್ದು, ಇದು ನಿಯಮಬಾಹಿರ ಚಟುವಟಿಕೆಯಾಗಿದೆ ಎಂದು ಆರೋಪಿಸಿದರು.
ನೋಂದಾವಣೆ ಗೊಂಡಿರುವ ನಮ್ಮ ಸಂಘಟನೆ ಕೇವಲ 135 ರೂ. ಶುಲ್ಕವನ್ನು ಮಾತ್ರ ಸಂಗ್ರಹಿಸುತ್ತಿದೆ. ಆದ್ದರಿಂದ ಆದಿ ದ್ರಾವಿಡರು ನೋಂದಾಯಿತ ಸಂಘಟನೆಯೊಂದಿಗೆ ಕೈಜೋಡಿಸುವಂತೆ ಕರೆ ನೀಡಿದರು. ಕೊಡಗು ಜಿಲ್ಲೆಯಲ್ಲಿ 23 ಸಾವಿರಕ್ಕು ಅಧಿಕ ಮಂದಿ ಆದಿ ದ್ರಾವಿಡ ರಿದ್ದರೂ ರಾಜಕೀಯವಾಗಿ ಸೂಕ್ತ ಸ್ಥಾನಮಾನ ದೊರಕುತ್ತಿಲ್ಲ. ಅಲ್ಲದೆ, ಸರಕಾರದಿಂದ ಬಿಡುಗಡೆ ಯಾಗುವ ಅನುದಾನ ಕೂಡ ದೊರೆಯುತ್ತಿಲ್ಲ ಎಂದು ಬೆೇಸರ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ