ಶಿಕ್ಷಣದ ಮೂಲಕ ಉನ್ನತ ಹುದ್ದೆಗೇರಲು ಯುವ ಸಮೂಹಕ್ಕೆ ಸಲಹೆ

ಇಗ್ಗುತಪ್ಪ ಕೊಡವಕೇರಿಯಿಂದ ಕೈಲ್‌ ಮುಹೂರ್ತ

Team Udayavani, Sep 12, 2019, 5:48 AM IST

Z-KODAVA-KERI-1

ಮಡಿಕೇರಿ: ಕೊಡವ ಸಮುದಾಯದ ಯುವ ಸಮೂಹ ಉನ್ನತ ಶಿಕ್ಷಣಕ್ಕೆ ಒತ್ತು ನೀಡುವ ಮೂಲಕ ಎತ್ತರದ ಹುದ್ದೆಗಳನ್ನು ಅಲಂಕರಿಸಲು ಮುಂದಾಗಬೇಕು ಎಂದು ಲೀಡ್‌ ಬ್ಯಾಂಕ್‌ ನಿವೃತ್ತ ವ್ಯವಸ್ಥಾಪಕ ಕೆ.ಎ.ದೇವಯ್ಯ ಸಲಹೆ ನೀಡಿದ್ದಾರೆ.

ನಗರದ ಕೊಡವ ಸಮಾಜದಲಿ ಇಗ್ಗುತಪ್ಪ ಕೊಡವ ಕೇರಿ ವತಿಯಿಂದ ನಡೆದ ಕೈಲ್‌ ಮುಹೂರ್ತ ಹಬ್ಬ ಹಾಗೂ ವಾರ್ಷಿಕ ಮಹಾಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸರಕಾರದ ಉನ್ನತ ಹುದ್ದೆ ಹಾಗೂ ಬ್ಯಾಂಕ್‌ಗಳಲ್ಲಿ ಕಾರ್ಯನಿರ್ವಹಿಸಲು ಕೊಡವ ಯುವ ಪೀಳಿಗೆ ಹಿಂದೇಟು ಹಾಕುತ್ತಿದೆ. ಐಪಿಎಸ್‌, ಐಎಎಸ್‌, ಕೆಎಎಸ್‌ ಹಾಗೂ ಬ್ಯಾಂಕ್‌ ಪರೀಕ್ಷೆಗಳನ್ನು ಎದುರಿಸುವಲ್ಲಿ ಕೊಡವರು ಹಿಂದುಳಿದಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಸ್ವಯಂ ಉದ್ಯೋಗಕ್ಕೂ ಉತ್ತಮ ಅವಕಾಶಗಳಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳುವಂತೆ ದೇವಯ್ಯ ಕಿವಿಮಾತು ಹೇಳಿದರು.

ಕೊಡಗು ಕೃಷಿ ಪ್ರಧಾನ ಜಿಲ್ಲೆಯಾಗಿದ್ದು, ಕೃಷಿಯೊಂದಿಗೆ ಸ್ವಯಂ ಉದ್ಯೋಗವನ್ನು ಅಳವಡಿಸಿಕೊಂಡರೆ ಆರ್ಥಿಕವಾಗಿ ಪ್ರಗತಿ ಸಾಧಿಸಬಹುದು. ಯುವ ಸಮೂಹದ ಅಭ್ಯುದಯಕ್ಕಾಗಿಯೇ ಬ್ಯಾಂಕ್‌ಗಳು ಸಾಲದ ಯೋಜನೆಗಳ ಮೂಲಕ ಪೋ›ತ್ಸಾಹ ನೀಡುತ್ತಿದೆ. ಬ್ಯಾಂಕ್‌ ನೀಡುವ ಸಾಲ ಸೌಲಭ್ಯಗಳನ್ನು ಬಳಸಿಕೊಂಡು ಆರ್ಥಿಕವಾಗಿ ಸಬಲರಾಗುವಂತೆ ತಿಳಿಸಿದರು.ಸಂಘಟನೆಯ ಜೊತೆ ಜೊತೆಯಲ್ಲೇ ಕೊಡವ ಭಾಷೆ, ಸಂಸ್ಕೃತಿ, ಆಚಾರ-ವಿಚಾರವನ್ನು ಉಳಿಸಿ ಬೆಳೆಸುವ ಕಾರ್ಯ ಆಗಬೇಕಿದೆ ಎಂದು ದೇವಯ್ಯ ಕರೆ ನೀಡಿದರು.

ಇತ್ತೀಚಿನ ದಿನಗಳಲ್ಲಿ ಕೊಡಗಿನಲ್ಲಿ ಕೊಡವರ ಸಂಖ್ಯೆ ಕ್ಷೀಣಿಸುತ್ತಿದೆ. ಹೊರ ಜಿಲ್ಲೆ, ರಾಜ್ಯ ಅಥವಾ ವಿದೇಶಗಳಲ್ಲಿ ಕೊಡವರು ಹೆಚ್ಚು ನೆಲಸುತ್ತಿದ್ದಾರೆ. ಇವರಲ್ಲಿಯೂ ಕೊಡಗಿನ ಸಂಸ್ಕೃತಿ ಉಳಿಯಬೇಕಾಗಿದ್ದು, ಸಂಘ ಸಂಸ್ಥೆಗಳು ನೆರವಾಗಬೇಕು ಎಂದರು.

ಕೊಡವ ಕೇರಿ ಅಧ್ಯಕ್ಷೆ ಕಾವೇರಿ ಪೂಣಚ್ಚ ಮಾತನಾಡಿ, ಕೊಡವರ ಕೇರಿಯೆಂದರೆ ಒಂದು ಸಂಸಾರವಿದ್ದಂತೆ. ಕೇರಿ ವ್ಯಾಪ್ತಿಯಲ್ಲಿ ಏನೇ ಕಷ್ಟ ನಷ್ಟಗಳು ಸಂಭವಿಸಿದರೆ ಎಲ್ಲರೂ ಸ್ಪಂದಿಸುವಂತಾಗಬೇಕು ಎಂದರು.

ಸಮುದಾಯ ಬಾಂಧವರು ಸದಸ್ಯತ್ವವನ್ನು ಪಡೆದುಕೊಂಡು ಸಂಘದ ಕಾರ್ಯಕ್ರಮಗಳಿಗೆ ಸಹಕಾರ ನೀಡುತ್ತಿರುವುದು ಉತ್ತಮ ಬೆಳವಣಿಗೆ. ಮುಂದೆ ಸಂಘದ ವತಿಯಿಂದ ನಡೆಯುವ ಎಲ್ಲಾ ಕಾರ್ಯಕ್ರಮಗಳಲ್ಲಿ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ಸಂಘಟನೆಯನ್ನು ಬಲಗೊಳಿಸುವಂತೆ ಕರೆ ನೀಡಿದರು.

ಕೇರಿಯ ಖಜಾಂಚಿ ಪಿ.ಹರೀಶ್‌ ಮುತ್ತಪ್ಪ ಲೆಕ್ಕ ಪತ್ರ ಮಂಡಿಸಿದರು. ಕಾರ್ಯದರ್ಶಿ ಬೊಳ್ಳಚಂಡ ಲೀಲಾ ಸುಬ್ಬಯ್ಯ ಅವರು ವಾರ್ಷಿಕ ವರದಿ ಓದಿದರು.

10ನೇ ತರಗತಿ ಸಿಬಿಎಸ್‌ಸಿ ಪರೀಕ್ಷೆಯಲ್ಲಿ ಶೇ. 95 ರಷ್ಟು ಅಂಕಗಳಿಸಿದ ಬಿದೀಶ್‌ ಹಾಗೂ ಅಸಾಧಾರಣ ಪ್ರತಿಭೆಗಾಗಿ ವಿದ್ಯಾರ್ಥಿ ಕಾರ್ತಿಕ್‌ ಕುಟ್ಟಪ್ಪ ಅವರನ್ನು ಸಮ್ಮಾನಿಸಲಾಯಿತು .

ವಿವಿಧ ಸ್ಪರ್ಧೆ
ಸಭಾ ಕಾರ್ಯಕ್ರಮಕ್ಕೂ ಮೊದಲು ಕೈಲ್‌ ಮುಹೂರ್ತ ಹಬ್ಬದ ಪ್ರಯುಕ್ತ ಬೆಳಗ್ಗೆಯಿಂದಲೇ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ತೆಂಗಿನಕಾಯಿಗೆ ಕಲ್ಲು ಹೊಡೆಯುವುದು, ಓಟ, ನಿಂಬೆ ಚಮಚದ ಓಟ, ಮಕ್ಕಳಿಗೆ ಕಾಳು ಹೆಕ್ಕುವ ಸ್ಪರ್ಧೆ, ಮ್ಯೂಸಿಕಲ್‌ ಚೇರ್‌ ಮತ್ತಿತರ ಸ್ಪರ್ಧೆಗಳಲ್ಲಿ ಸಮುದಾಯ ಬಾಂಧವರು ಉತ್ಸಾಹದಿಂದ ಪಾಲ್ಗೊಂಡರು. ವೇದಿಕೆಯಲ್ಲಿ ಇಗ್ಗುತಪ್ಪ ಕೊಡವ ಕೇರಿ ಪದಾಧಿಕಾರಿಗಳಾದ ನಂಜಪ್ಪ, ಕುಮಾರ್‌, ಬಿ. ಪ್ರಕಾಶ್‌ ಹಾಜರಿದ್ದರು. ಕೊಡವರ ಆಹಾರ ಪದ್ಧತಿಯನ್ನು ಪರಿಚಯಿಸುವ ನಿಟ್ಟಿನಲ್ಲಿ ಮೇಳದ ಸಂದರ್ಭ ವಿಶಿಷ್ಟ ಖಾದ್ಯಗಳ ಆಹಾರ ಪ್ರದರ್ಶನವನ್ನು ಆಯೋಜಿಸಲಾಗಿತ್ತು.

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.