“ಪಾಕಿಸ್ಥಾನದೊಂದಿಗಿನ ಎಲ್ಲ ಸಂಬಂಧಗಳನ್ನು ಕಡಿದುಕೊಳ್ಳಬೇಕು’


Team Udayavani, Feb 17, 2019, 1:30 AM IST

z-gonikoppa.jpg

ಮಡಿಕೇರಿ: ಭಾರತವು ಪಾಕ್‌ನೊಂದಿಗೆ ಎಲ್ಲಾ ವ್ಯಾಪಾರ ಒಪ್ಪಂದ, ಕ್ರೀಡೆ, ಸಿನಿಮಾ, ಮನೋರಂಜನೆಗಳನ್ನು ಕಡಿತಗೊಳಿಸಬೇಕು ಎಂದು ಅಭಿಪ್ರಾಯಪಟ್ಟ ಬ್ರಿಗೇಡಿಯರ್‌ ಮಾಳೇಟೀರ ದೇವಯ್ಯ ಅವರು,ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಯೋಧರ ಕುಟುಂಬಕ್ಕೆ ನೆರವಾಗುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ತಲಾ 10 ರೂ. ದೇಣಿಗೆ ನೀಡುವಂತಾಗಬೇಕು ಎಂದು ಹೇಳಿದರು.

ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಭಯೋತ್ಪಾದಕರ ದಾಳಿಗೆ ತುತ್ತಾಗಿ ಹುತಾತ್ಮರಾದ ಯೋಧರಿಗೆ ಗೋಣಿಕೊಪ್ಪದ ಫೀ.ಮಾ. ಕಾರ್ಯಪ್ಪ ಮತ್ತು ಜ.ತಿಮ್ಮಯ್ಯ ಪ್ರತಿಮೆ ಎದುರು ಯುಕೊ ಸಂಘಟನೆ ಆಶ್ರಯದಲ್ಲಿ ಆಯೋಜಿಸಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತ ನಾಡಿದ ಅವರು, ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ನಮ್ಮ ಯೋಧರ ತಂದೆ-ತಾಯಿ, ಸಹೋದರ-ಸಹೋದರಿಯರು, ಮಕ್ಕಳು, ಪತ್ನಿ ಅವರ ನೋವು ದುಃಖದ ಸ್ಥಿತಿಯನ್ನು ಊಹಿಸಲು ಸಾದ್ಯವಿಲ್ಲ. ಅಲ್ಲದೆ ವಾರ್ಷಿಕ ಎರಡು ತಿಂಗಳ ಅವಧಿಯಲ್ಲಿ ರಜೆಯಲ್ಲಿ ಊರಿಗೆ ಬರುವ ಯೋಧರಿಗೆ ಅವರ ಎಲ್ಲಾ ಸೌಲಭ್ಯ, ಸರಕಾರಿ ದಾಖಲೆ ಕೆಲಸ ಕಾರ್ಯಗಳನ್ನು ವಿಶೇಷ ಪ್ರಾಮುಖ್ಯತೆ ನೀಡಿ ಮಾಡಿಕೊಡುವಂತಾಗಬೇಕು. ಇದ ರಿಂದ ಅವರು ದೇಶಕ್ಕಾಗಿ ಗಡಿಯಲ್ಲಿ ನೆಮ್ಮದಿಯಿಂದ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು. 

ಉಗ್ರವಾದವನ್ನು ಸಂಪೂರ್ಣವಾಗಿ ದಮನ ಮಾಡುವ ಸರಕಾರದ ಕಾರ್ಯಕ್ಕೆ ಬೆಂಬಲ ನೀಡಬೇಕಾಗಿದೆ. ನಮ್ಮ ರಕ್ಷಣೆಗೆ ಪ್ರಾಣ ತ್ಯಾಗ ಮಾಡಿದ ಯೋಧರನ್ನು ಗೌರವದಿಂದ ನೆನೆಯುವುದು ನಮ್ಮ ಕರ್ತವ್ಯ ಎಂದು ಯುಕೊ ಸಂಘಟನೆಯ ಸಂಚಾಲಕ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ನುಡಿದರು.

ಭಯೊತ್ಪಾದನೆಗೆ ನಿರಂತರ ಬೆಂಬಲ ನೀಡುತ್ತಾ ಅದಕ್ಕೆ ಆಶ್ರಯ ನೀಡುತ್ತಿರುವ ಪಾಕಿಸ್ಥಾನದೊಂದಿಗೆ ಭಾರತ ಎಲ್ಲಾ ವ್ಯವಹಾರವನ್ನು ಕಡಿತಗೊಳಿಸಬೇಕು. ಭಯೋತ್ಪಾದನೆಯ ಹುಟ್ಟಡಗಿಸಲು ಕಠಿಣ ವಾದ ಕ್ರಮವನ್ನು ಕೈಗೊಳ್ಳಬೇಕು ಎಂದು ಫೀ|ಮಾ| ಕಾರ್ಯಪ್ಪ ಮತ್ತು ಜ. ತಿಮ್ಮಯ್ಯ ಫೋರಂನ ಅಧ್ಯಕ್ಷ ಕರ್ನಲ್‌ ಕಂಡ್ರಂತಂಡ ಸುಬ್ಬಯ್ಯ ಹೇಳಿದರು.ಕಾರ್ಯಕ್ರಮದಲ್ಲಿ ಕರ್ನಲ್‌ ಮುಕ್ಕಾಟಿರ ಅಯ್ಯಣ್ಣ , ಆರ್‌.ಎಸ್‌.ಎಸ್‌ ಮುಖ್ಯಸ್ಥ ಚೆಕ್ಕೆರ ಮನು ಸೋಮಯ್ಯ, ಯುಕೊ ಸಂಘಟನೆಯ ಮಚ್ಚಮಾಡ ಅನೀಶ್‌ ಮಾದಪ್ಪ, ಜಮ್ಮಡ ಗಣೇಶ್‌ ಅಯ್ಯಣ್ಣ, ಕಳ್ಳಿಚಂಡ ರಾಬಿನ್‌ ಸುಬ್ಬಯ್ಯ, ಚೆಪ್ಪುಡಿರ ಸುಜು ಕರುಂಬಯ್ಯ, ನೆಲ್ಲಮಕ್ಕಡ ಮಾದಯ್ಯ, ಕಾಂಡೇರ ಕುಮಾರ್‌, ಉಳುವಂಗಡ ಲೋಹಿತ್‌ಜಿ.ಪಂ. ಸದಸ್ಯ ಸಿ.ಕೆ. ಬೋಪಣ್ಣ, ಗೋಣಿಕೊಪ್ಪ ಕೊಡವ ಸಮಾಜದ ಸಿ.ಡಿ. ಮಾದಪ್ಪ, ಕುಣಿಯಂಡ ಭೋಜಮ್ಮ, ಗ್ರಾ.ಪಂ. ಸದಸ್ಯ ನೂರೇರ ರತಿ, ಹಿಂದು ಮಲಯಾಳಿ ಸಮಾಜದ ಶರತ್‌ಕಾಂತ್‌, ಮಾರ್ಚಂಡ ಗಣೇಶ್‌ ಪೊನ್ನಪ್ಪ, ಕೊಳ್ಳಿಮಾಡ ಅಜಿತ್‌ ಅಯ್ಯಪ್ಪ, ಚೆಪ್ಪುಡಿರ ಮಾಚು, ಕಾಡ್ಯಮಾಡ ನಿವಿನ್‌, ಪವಿತ್ರ ನಿವಿನ್‌, ಡಾ| ಕೊಂಗೇಟಿ ಪೊನ್ನಪ್ಪ, ಕಾವೇರಿ ಕಾಲೇಜು ಆಡಳಿತ ಮಂಡಳಿ ಕಾರ್ಯದರ್ಶಿ ಕುಟ್ಟಂಡ ವಿಜು ಉತ್ತಪ್ಪ, ಕುಳ್ಳಚಂಡ ಚಿಣ್ಣಪ್ಪ, ರಜತ್‌ ತಿಮ್ಮಯ್ಯ, ಚೇನಿರ ನಾಜ್‌ ಚಂಗಪ್ಪ, ಕಾಂಡೇರ ಕುಮಾರ್‌, ಬೊಳಿಯಂಗಡ ಬೋಪಣ್ಣ, ಗುಡಿಯಂಗಡ ಲಿಖೀನ್‌, ಮಾಣಿರ ಪ್ರತಿಮಾ, ಕೊಕ್ಕಲೆಮಾಡ ಪೊನ್ನಪ್ಪ, 

5ನೇ ಬಲಾಡ್ಯ ಸೇನೆ
ಕೊಡಗು ವನ್ಯಜೀವಿ ಸಂಘದ ಮಾಜಿ ಅಧ್ಯಕ್ಷ ಕರ್ನಲ್‌ ಸಿ.ಪಿ. ಮುತ್ತಣ್ಣ ಮಾತಾನಾಡಿ, ಕಾಶ್ಮೀರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಅಗತ್ಯತೆ ಇದೆ. ಜಮ್ಮು ಮತ್ತು ಕಾಶ್ಮೀರಕ್ಕೆ ಸೀಮಿತವಾಗಿದ್ದ ಭಯೋತ್ಪಾದನೆ ಇಂದು ದೇಶಾದ್ಯಂತ ವ್ಯಾಪಿಸಿದೆ. ಭಾರತವನ್ನು ನೇರವಾಗಿ ಎದುರಿಸಲು ಪಾಕಿಸ್ಥಾನಕ್ಕೆ ಸಾಧ್ಯವಾಗದೆ ಪ್ರಪಂಚದ 5ನೇ ಬಲಾಡ್ಯ ಸೇನೆಯನ್ನು ಹೊಂದಿರುವ ಭಾರತದ ಎದುರು ಭಯೋತ್ಪಾದನೆ ಮೂಲಕ ಯುದ್ಧ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗೋಣಿಕೊಪ್ಪ ಕಾವೇರಿ ಕಾಲೇಜು ಮತ್ತು ಪೊನ್ನಂಪೇಟೆ ಸಾಯಿಶಂಕರ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪಾಲ್ಗೊಂ ಡಿದ್ದರು.ಕಾರ್ಯಕ್ರಮದ ಆರಂಭದಲ್ಲಿ ಹುತಾತ್ಮ ಯೋಧರಿಗೆ 2 ನಿಮಿಷ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.