ಅವೈಜ್ಞಾನಿಕ ಯೋಜನೆಗಳಿಂದ ಆತಂಕಕಾರಿ ಬೆಳವಣಿಗೆ


Team Udayavani, Nov 15, 2019, 5:08 AM IST

Z-CAVERI-2

ಮಡಿಕೇರಿ: ನವಪೀಳಿಗೆಗೆ ಪರಿಸರ ಸಂರಕ್ಷಣೆಯ ಪ್ರಜ್ಞೆ ಮೂಡಿಸುವ ಕೆಲಸವಾಗಬೇಕಿದೆ ಎಂದು ಅರೆಮಾದನಹಳ್ಳಿಯ ಶ್ರೀಶಿವಸುಜ್ಞಾನತೀರ್ಥ ಮಹಾಸ್ವಾಮಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಾವೇರಿ ಮಹಾ ಆರತಿ ಬಳಗ, ಕಾವೇರಿ ರಿವರ್‌ ಸೇವಾ ಟ್ರಸ್ಟ್‌, ಕಾವೇರಿ ನದಿ ಸ್ವಚ್ಚತಾ ಆಂದೋಲನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ಕಾವೇರಿ ನದಿಗೆ ನಡೆದ 100ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ‌ ಸುನಿಲ್‌ ಸುಬ್ರಮಣಿ, ನದಿ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ. ನದಿ ಸಂರಕ್ಷಣೆ ನಿಟ್ಟಿನಲ್ಲಿ ಕಾರ್ಯ ಯೋಜನೆ ರೂಪಿಸಲು ಸರಕಾರದ ಮಟ್ಟದಲ್ಲಿ ಕಾರ್ಯ ಯೋಜನೆ ರೂಪಿಸಲು ಪ್ರಸ್ತಾಪಿಸುವುದಾಗಿ ಭರವಸೆ ವ್ಯಕ್ತಪಡಿಸಿದರು. ನದಿ ಸ್ವಚ್ಚತೆ, ಸಂರಕ್ಷಣೆ ಬಗ್ಗೆ ನಡೆಯುತ್ತಿರುವ ಕಾರ್ಯಕ್ರಮಗಳಿಗೆ ಪ್ರತಿಯೊಬ್ಬರೂ ಬೆಂಬಲ ಸೂಚಿಸುವಂತೆ ಅವರು ಕರೆ ನೀಡಿದರು.

ನದಿ ಸ್ವಚ್ಚತಾ ಆಂದೋಲನದ ರಾಜ್ಯ ಸಂಚಾಲಕ ಎಂ.ಎನ್‌.ಚಂದ್ರಮೋಹನ್‌ ಪ್ರಾಸ್ತಾವಿಕ ನುಡಿಗಳಾಡಿದರು.

ಕಾರ್ಯಕ್ರಮದಲ್ಲಿ 100 ತಿಂಗಳುಗಳ ಕಾಲ ನಿರಂತರವಾಗಿ ಆರತಿ ಪೂಜೆ ಸಲ್ಲಿಸಿದ ಅರ್ಚಕ ಕೃಷ್ಣಮೂರ್ತಿ ಭಟ್‌ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮಕ್ಕೂ ಮುನ್ನ ಕುಶಾಲನಗರ ಮಹಿಳಾ ಭಜನಾ ಮಂಡಳಿ ಸದಸ್ಯರು ನದಿ ತಟದಲ್ಲಿ ಗಿಡ ನೆಟ್ಟು ನಂತರ ಭಜನೆ, ಕೀರ್ತನೆಗಳನ್ನು ಹಾಡಿದರು.
ರಾಜು ತಂಡದಿಂದ ಬೀದಿ ನಾಟಕ ನಡೆಯಿತು. ಸಾಮೂಹಿಕವಾಗಿ ನದಿಗೆ 100 ನೇ ಮಹಾ ಆರತಿ ಬೆಳಗಲಾಯಿತು. ಕುಶಾಲನಗರ ಪಪಂ ಮುಖ್ಯಾಧಿಕಾರಿ ಸುಜಯ್‌ ಕುಮಾರ್‌, ಗೌಡ ಸಮಾಜ ಅಧ್ಯಕ್ಷ ಕೂರನ ಪ್ರಕಾಶ್‌, ಆರತಿ ಬಳಗದ ಪ್ರಮುಖರಾದ ವನಿತಾ ಚಂದ್ರಮೋಹನ್‌, ಡಿ.ಆರ್‌.ಸೋಮಶೇಖರ್‌, ಕೆ.ಆರ್‌.ಶಿವಾನಂದನ್‌, ಮಂಡೇಪಂಡ ಬೋಸ್‌ ಪಾಲ್ಗೊಂಡಿದ್ದರು.

ಪ್ರಕೃತಿ ಆರಾಧಿಸೋಣೆ
ಸಾನಿಧ್ಯ ವಹಿಸಿ ಮಾತನಾಡಿದ ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶ ಸದಾಶಿವ ಸ್ವಾಮೀಜಿ, ಅವೈಜ್ಞಾನಿಕ ಕಾರ್ಯ ಯೋಜನೆಗಳಿಂದ ಪ್ರಕೃತಿಯಲ್ಲಿ ಆತಂಕಕಾರಿ ಬೆಳವಣಿಗೆಗಳು ಕಂಡುಬರುತ್ತಿದೆ. ಪ್ರಕೃತಿಯ ಆರಾಧನೆ ಮಾಡುವ ಮೂಲಕ ನದಿ ಪರಿಸರಗಳ ಉಳಿವು ಸಾಧ್ಯ ಎಂದರು.

9 ವರ್ಷಗಳಿಂದ ಸಂರಕ್ಷಣೆ, ಪಾವಿತ್ರ್ಯ ಬಗ್ಗೆ ಅರಿವು ಮೂಡಿಸುತ್ತಿರುವ ಬಳಗದ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಗಣಪತಿ ದೇವಾಲಯ ಸೇವಾ ಸಮಿತಿ ಅಧ್ಯಕ್ಷ ವಸಂತಕುಮಾರ್‌, ಆರ್ಯವೈಶ್ಯ ಮಂಡಳಿ ಅಧ್ಯಕ್ಷ ವಿ.ಪಿ.ನಾಗೇಶ್‌, ಆಂದೋಲನದ ಜಿಲ್ಲಾಧ್ಯಕ್ಷೆ ರೀನಾ ಪ್ರಕಾಶ್‌ ಮಾತನಾಡಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.