ಕಾವೇರಿ ನದಿ ಹೂಳೆತ್ತಲು 130 ಕೋಟಿ ರೂ.: ಅಪ್ಪಚ್ಚುರಂಜನ್‌


Team Udayavani, Jan 23, 2020, 1:55 AM IST

kaveri-nadi

ಮಡಿಕೇರಿ: ಕಾವೇರಿ ನದಿ ಜಲಾನಯನ ಪ್ರದೇಶಗಳ ಹೂಳೆತ್ತಲು ಸರಕಾರದಿಂದ ಘೋಷಣೆಯಾಗಿರುವ ರೂ.130 ಕೋಟಿ ರೂ.ಗಳನ್ನು ತತ್‌ಕ್ಷಣವೇ ಬಿಡುಗಡೆಗೊಳಿಸಲು ಮುಖ್ಯಮಂತ್ರಿಗಳ ಬಳಿ ಚರ್ಚಿಸಲಾಗುವುದು ಎಂದು ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್‌ ಭರವಸೆ ನೀಡಿದ್ದಾರೆ.

ಕುಶಾಲನಗರದಲ್ಲಿ ನೂತನವಾಗಿ ಅಸ್ವಿತ್ವಕ್ಕೆ ಬಂದ ಕಾವೇರಿ ನದಿ ಪ್ರವಾಹ ಪೀಡಿತರ ರಕ್ಷಣಾ ವೇದಿಕೆ ಪ್ರತಿನಿಧಿಗಳು ಶಾಸಕರನ್ನು ಭೇಟಿ ಮಾಡಿ ಮುಂದಿನ ಸಾಲಿನಲ್ಲಿ ನೆರೆ ಮತ್ತೆ ಮರುಕಳಿಸದಂತೆ ಯೋಜನೆ ರೂಪಿಸಲು ಮನವಿ ಸಲ್ಲಿಸಿದ ಸಂದರ್ಭ ಅವರು ಪ್ರತಿಕ್ರಿಯಿಸಿದ್ದು, ಈಗಾಗಲೆ ಹಾರಂಗಿ-ಕಾವೇರಿ ನದಿಯ ಹೂಳೆತ್ತಲು ಸರಕಾರ ಯೋಜನೆ ರೂಪಿಸಿದೆ. ಕಳೆದ ಎರಡು ವರ್ಷಗಳಿಂದ ಕುಶಾಲನಗರ ಪಟ್ಟಣ ಮತ್ತು ಸುತ್ತಮುತ್ತಲ ವ್ಯಾಪ್ತಿಯಲ್ಲಿ ನದಿ ಉಕ್ಕಿ ಹರಿದು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದ್ದು ಮತ್ತೆ ಮರುಕಳಿಸದಂತೆ ತಕ್ಷಣವೇ ಯೋಜನೆ ಕೈಗೆತ್ತಿಕೊಳ್ಳಲು ಕ್ರಮಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ವೇದಿಕೆ ಪ್ರತಿನಿಧಿಗಳೊಂದಿಗೆ ಫೆಬ್ರವರಿ ಪ್ರಥಮ ವಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲು ನಿಯೋಗಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಪ್ರವಾಹಕ್ಕೆ ಕಾರಣ ಪತ್ತೆಹಚ್ಚಲು ತಜ್ಞರ ಸಮಿತಿ ನೇಮಿಸಿ ನದಿಯ ಹೂಳೆತ್ತಲು ಕಾರ್ಯಯೋಜನೆ ರೂಪಿಸುವುದು, ಕಾವೇರಿ ನದಿಯ ಮೂಲಸ್ವರೂಪಕ್ಕೆ ಧಕ್ಕೆಯಾಗದಂತೆ ನದಿಯ ಅಭಿವೃದ್ಧಿಗೆ ಯೋಜನೆ ರೂಪಿಸುವುದು. ಈ ಮೂಲಕ ಪಟ್ಟಣದ ಮತ್ತು ಗ್ರಾಮಗಳ ನದಿ ತಟಗಳ ಮನೆಗಳಿಗೆ ಮತ್ತೆ ಪ್ರವಾಹ ಮರುಕಳಿಸದಂತೆ ಎಚ್ಚರವಹಿಸಲು ಶಾಶ್ವತ ಕ್ರಿಯಾಯೋಜನೆ ರೂಪಿಸುವಂತೆ ವೇದಿಕೆ ಪ್ರಮುಖರು ಶಾಸಕರಿಗೆ ಮನವಿ ಪತ್ರದಲ್ಲಿ ಕೋರಿದ್ದಾರೆ.

ಮಳೆಗಾಲ ಸಂದರ್ಭ ಕುಶಾಲನಗರದ ಸರಕಾರಿ ಪಾಲಿಟೆಕ್ನಿಕ್‌ ಬಳಿಯಿಂದ ಕೊಪ್ಪ ಭಾರತಮಾತ ಶಾಲೆ ತನಕ ರಾಷ್ಟ್ರೀಯ ಹೆದ್ದಾರಿ ಪ್ರವಾಹದಿಂದ ಜಲಾವೃತಗೊಂಡು ಸಂಚಾರ ಕೆಲವು ದಿನಗಳ ಕಾಲ ಸಂಪೂರ್ಣ ಅಡ್ಡಿಯಾಗು ತ್ತಿರುವ ಬಗ್ಗೆಯೂ ಸರಕಾರದ ಗಮನಕ್ಕೆ ತರಲಾಗುವುದು. ಕೆಲವೆಡೆ ರಸ್ತೆಯ ಎತ್ತರ ಹೆಚ್ಚಿಸುವುದರೊಂದಿಗೆ ಅಭಿವೃದ್ಧಿ ಗೊಳಿಸುವ ಯೋಜನೆ ಸಂಬಂಧ ಸಚಿವರ ಗಮನ ಸೆಳೆಯಲಾಗುವುದು ಎಂದು ಶಾಸಕ ಅಪ್ಪಚ್ಚುರಂಜನ್‌ ತಿಳಿಸಿದ್ದಾರೆ.

ಈ ಸಂದರ್ಭ ಮಾತನಾಡಿದ ವೇದಿಕೆಯ ಕಾರ್ಯಾಧ್ಯಕ್ಷ ಎಂ.ಎಂ.ಚರಣ್‌, ಕುಶಾಲನಗರ ಪಟ್ಟಣ ಸೇರಿದಂತೆ ಕಾವೇರಿ ನದಿ ತಟದ ಮನೆಗಳಿಗೆ ಮತ್ತೆ ಪ್ರವಾಹ ಬಂದು ಜನಜೀವನ ಏರುಪೇರಾಗದಂತೆ ಶಾಶ್ವತ ಯೋಜನೆ ರೂಪಿಸಲು ಶಾಸಕರಿಗೆ ಮನವಿ ಸಲ್ಲಿಸಲಾಗಿದೆ. ಈ ಸಂಬಂಧ ಸದ‌Âದಲ್ಲಿಯೇ ಪಟ್ಟಣದ ವಿವಿಧ ಬಡಾವಣೆಗಳು ಮತ್ತು ಗ್ರಾಮಗಳ ನಿವಾಸಿಗಳನ್ನು ಒಳಗೊಂಡಂತೆ ಮುಖ್ಯಮಂತ್ರಿ ಬಳಿ ತೆರಳಲಾಗುವುದು ಎಂದು ತಿಳಿಸಿದರು.

ವೇದಿಕೆಯ ಅಧ್ಯಕ್ಷ ಎಂ.ಎನ್‌. ಚಂದ್ರಮೋಹನ್‌, ಉಪಾಧ್ಯಕ್ಷ ತೋರೆರ ಉದಯಕುಮಾರ್‌, ಪ್ರಧಾನ ಕಾರ್ಯದರ್ಶಿ ವರದ, ಖಜಾಂಚಿ ಕೊಡಗನ ಹರ್ಷ, ಬಿಜೆಪಿ ನಗರಾಧ್ಯಕ್ಷ ಕೆ.ಜಿ. ಮನು ಮತ್ತು ಕುಶಾಲನಗರದ ಶೈಲಜಾ ಬಡಾವಣೆ, ಕುವೆಂಪು ಬಡಾವಣೆ, ದಂಡಿನಪೇಟೆ, ಇಂದಿರಾ ಬಡಾವಣೆ, ಬಸಪ್ಪ ಬಡಾವಣೆ, ಯೋಗಾನಂದ ಬಡಾವಣೆ ಸೇರಿದಂತೆ ವಿವಿಧ ಬಡಾವಣೆಗಳ ನಿವಾಸಿಗಳ 50ಕ್ಕೂ ಅಧಿಕ ಪ್ರತಿನಿಧಿಗಳು ಹಾಜರಿದ್ದರು.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.