

Team Udayavani, Jun 16, 2024, 10:51 PM IST
ಮಡಿಕೇರಿ: ಮೂಲತಃ ಬಾಳೆಲೆ ಗ್ರಾಮದವರಾದ ಈ ಹಿಂದೆ ಕೊಡಗಿನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಕ್ಯಾಪ್ಟನ್ ಮಲಚೀರ ಅಯ್ಯಪ್ಪ ಅವರು ಕೇಂದ್ರ ಸಿವಿಲ್ ಏವಿಯೇಶನ್ ಇಲಾಖೆಯ ಅಧೀನದ ಬ್ಯೂರೋ ಆಫ್ ಸಿವಿಲ್ ಏವಿಯೇಶನ್ ಸೆಕ್ಯೂರಿಟಿಯ ಜಂಟಿ/ವಿಭಾಗೀಯ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ.
ಅಯ್ಯಪ್ಪ ಅವರು (2014ನೇ ಬ್ಯಾಚ್ ಐಪಿಎಸ್) ಕೊಡಗಿನಲ್ಲಿ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ ಬಳಿಕ ಕರ್ನಾಟಕ ಲೋಕಾಯುಕ್ತದ ಎಸ್.ಪಿ. ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಕೇಂದ್ರದ ಸೇವೆಗೆ ಅವರನ್ನು ನಿಯೋಜಿಸಲಾಗಿದೆ.
Ad
You seem to have an Ad Blocker on.
To continue reading, please turn it off or whitelist Udayavani.