ಸುಗ್ಗಿ ಉತ್ಸವದ ಹಿನ್ನೆಲೆ : ಕೋವಿಗಳಿಗೆ ವಿಶೇಷ ಪೂಜೆ


Team Udayavani, Apr 23, 2019, 6:00 AM IST

suggi-utsava

ಮಡಿಕೇರಿ: ಸೋಮವಾರಪೇಟೆ ಸಮೀಪದ ಕೂತಿನಾಡು ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಎಂದೇ ಖ್ಯಾತಿಯಾಗಿರುವ ನಗರಳ್ಳಿ ಸುಗ್ಗಿ ಉತ್ಸವವು ಎ.29ರಂದು ನಡೆಯಲಿದ್ದು, ಸುಗ್ಗಿ ಆಚರಣೆಯ ವಿಧಿ ವಿಧಾನದಂತೆ ದೇವಿಯ ತವರು ಎಂದೇ ಕರೆಯಲ್ಪಡುವ ಕೂತಿ ಗ್ರಾಮದ ಚಾವಡಿ ಕಟ್ಟೆಯಲ್ಲಿ ರವಿವಾರ ವಿಶೇಷ ಪೂಜೆ ನಡೆಯಿತು.

ಅನಾದಿ ಕಾಲದಿಂದಲೂ ನಡೆದು ಕೊಂಡು ಬಂದಿರುವ ಸಂಪ್ರದಾ ಯದಂತೆ ಚಾವಡಿ ಕಟ್ಟೆಯಲ್ಲಿ ಗ್ರಾಮದ ಮನೆಗಳಲ್ಲಿರುವ ಬಂದುಕುಗಳನ್ನು ತಂದಿಟ್ಟು ಸಾಮೂಹಿಕವಾಗಿ ಪೂಜೆ ಮಾಡಲಾಯಿತು. ದೇವರ ಕಟ್ಟೆಗೆ ಗ್ರಾಮಸ್ಥರು ಬಂದೂಕು ಹಿಡಿದು ಪ್ರದಕ್ಷಿಣೆ ಬಂದು ತೆಂಗಿನ ಕಾಯಿಗೆ ಗುಂಡು ಹೊಡೆಯುವ ಮೂಲಕ ಸುಗ್ಗಿ ಹಬ್ಬಕ್ಕೆ ಚಾಲನೆ ನೀಡಿದರು.

ಪ್ರಮುಖ ಸುಗ್ಗಿ ಉತ್ಸವವು ಎಪ್ರಿಲ್‌ ಅಥವಾ ಮೇ ತಿಂಗಳಿನಲ್ಲಿ ನಗರಳ್ಳಿ ಗ್ರಾಮದ ಸುಗ್ಗಿಕಟ್ಟೆ ಹಾಗೂ 12 ದೇವರ ಬನದಲ್ಲಿ ವಿವಿಧ ಆಚರಣೆಗಳೊಂದಿಗೆ ನಡೆಯುವುದು ವಾಡಿಕೆ.

ಈ ಆಚರಣೆಯಲ್ಲಿ ಕೂತಿನಾಡು ವ್ಯಾಪ್ತಿಗೆ ಒಳಪಡುವ ಕೂತಿ ಗ್ರಾಮ, ಯಡದಂಟೆ, ಕುಂದಳ್ಳಿ, ನಗರಳ್ಳಿ, ಹೆಮ್ಮನಗದ್ದೆ, ಕನ್ನಳ್ಳಿ, ಬೇಕನಳ್ಳಿ, ಬೆಟ್ಟದಳ್ಳಿ, ಜಕ್ಕನಳ್ಳಿ, ಬೆಟ್ಟಡಕೊಪ್ಪ, ಹಳ್ಳಿಯೂರು, ಕೊತ್ತನಳ್ಳಿ, ಇನಕನಳ್ಳಿ, ಬಿಕಳ್ಳಿ, ಬೆಂಕಳ್ಳಿ, ಕುಡಿಗಾಣ, ನಾಡ್ನಳ್ಳಿ, ತಡ್ಡಿಕೊಪ್ಪ ಹಾಗೂ ಸಕಲೇಶಪುರ ತಾಲೂಕಿನ ಒಡಳ್ಳಿ ಗ್ರಾಮದ ಎಲ್ಲ ವರ್ಗದ ಜನರು ಒಗ್ಗೂಡಿ ಶ್ರದ್ಧಾಭಕ್ತಿಯಿಂದ ಪಾಲ್ಗೊಳ್ಳುತ್ತಾರೆ.

ಸುಗ್ಗಿ ಆಚರಣೆಯಲ್ಲಿ 12 ಬನ-ರಂಗಗಳಿದ್ದು ಸುಗ್ಗಿಯ ಕೊನೆಯ ಮೂರು ರಂಗಗಳಾದ ಕಂಬತಳೆ ರಂಗ, ಸುಗ್ಗಿ ರಂಗ, ಬಿಲ್ಲು ರಂಗ ಎಂಬಲ್ಲಿ ಸುಗ್ಗಿಯ ವಿಶೇಷತೆಗಳನ್ನು ಸಾರುವ ಆಚರಣೆಗಳು ನಡೆಯುತ್ತವೆ.
ಪ್ರತಿವರ್ಷದ ಸುಗ್ಗಿಯಲ್ಲಿ 9 ಮಂದಿ ದೇವರ ಒಡೆಕಾರರನ್ನು ನೇಮಿಸಲಾಗುತ್ತದೆ.

ಕೂತಿನಾಡು ಶ್ರೀ ಸಬ್ಬಮ್ಮ ದೇವಿ ಸಮಿತಿಯ ಅಧ್ಯಕ್ಷ ಕೆ.ಟಿ. ಜೋಯಪ್ಪ, ಕೂತಿ ಗ್ರಾಮದ ಅಧ್ಯಕ್ಷ ಡಿ.ಎ. ಪರಮೇಶ್‌, ಉಪಾಧ್ಯಕ್ಷ ಯು.ಕೆ. ಶಿವರಾಜ್‌ ಅರ್ಚಕ ಅನಂತ ರಾಮ್‌, ಬಿ.ಪಿ. ಪ್ರದೀಪ್‌ ಕುಮಾರ್‌, ಎಚ್‌.ಎಸ್‌. ದಿವಾಕರ್‌, ಉಮೇಶ್‌, ದಯಾನಂದ, ಧರ್ಮಪಾಲ, ರೇವಣ್ಣ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.