ಬಿದ್ದಾಟಂಡ ಕಪ್‌ ಹಾಕಿ ಉತ್ಸವ: ಟೈಸ್‌ ಬಿಡುಗಡೆ


Team Udayavani, Apr 13, 2017, 4:59 PM IST

Z-HOCKEY.jpg

ಮಡಿಕೇರಿ: ಕೊಡವ ಕುಟುಂಬಗಳ ನಡುವಣ 21ನೇ ವರ್ಷದ ಬಿದ್ದಾಟಂಡ ಕಪ್‌ ಹಾಕಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಯಾವೆಲ್ಲ ತಂಡಗಳ ನಡುವೆ ಪಂದ್ಯಗಳು ನಡೆಯಲಿವೆ ಎನ್ನುವುದನ್ನು ನಿರ್ಧರಿಸುವ ಟೈಸ್‌ ಕಾರ್ಡ್‌ನ್ನು ಬಿಡುಗಡೆ ಮಾಡಲಾಯಿತು.

ನಗರದ ಪತ್ರಿಕಾ ಭವನದಲ್ಲಿ ನಡೆದ‌ ಸರಳ ಕಾರ್ಯಕ್ರಮದಲ್ಲಿ ಪಂದ್ಯಾವಳಿಗೆ ನೋಂದಣಿಯಾಗಿರುವ 306 ಕೊಡವ ಕುಟುಂಬ ತಂಡಗಳ ನಡುವಿನ ಪಂದ್ಯಗಳ ಮಾಹಿತಿಯ ಟೈಸ್‌ ಕಾರ್ಡ್‌ನ್ನು ಮೈದಾನ ಸಮಿತಿಯ ಅಧ್ಯಕ್ಷರಾದ ಬಿದ್ದಾಟಂಡ ಬೆಳ್ಯಪ್ಪ, ಆಯೋಜನಾ ಸಮಿತಿಯ ನಿರ್ದೇಶಕರಾದ ಬಿದ್ದಾಟಂಡ ಎಸ್‌.ತಮ್ಮಯ್ಯ ಹಾಗೂ ತಾಂತ್ರಿಕ ಸಮಿತಿಯ ಸಂಪತ್‌ ಬಿಡುಗಡೆ ಮಾಡಿದರು.

ಕಳೆದ ಎರಡು ದಶಕಗಳಿಂದ ಅತ್ಯಂತ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿರುವ ಹಾಕಿ ಉತ್ಸವದ ಈ ಆವೃತ್ತಿಯಲ್ಲಿ ದಾಖಲೆಯ 306 ತಂಡಗಳ ನೋಂದಣಿಯಾಗಿವೆೆ. ಏಪ್ರಿಲ್‌ 17 ರಿಂದ ಮೇ14 ರವರೆಗೆ ಹಾಕಿ ಪಂದ್ಯಾವಳಿ ನಡೆಯಲಿದೆ ಎಂದು ಬಿ.ಎಸ್‌. ತಮ್ಮಯ್ಯ ತಿಳಿಸಿದರು.

ಮೂರು ಮೈದಾನಗಳಲ್ಲಿ ಪಂದ್ಯಾವಳಿ 
ನಾಪೋಕ್ಲುವಿನಲ್ಲಿ ಮೂರು ಮೈದಾನಗಳನ್ನು ಸಜ್ಜುಗೊಳಿಸಲಾಗಿದೆ. ಪ್ರತಿ ಮೈದಾನದಲ್ಲಿ ಸರಾಸರಿ 6 ರಿಂದ 7 ಪಂದ್ಯಗಳಂತೆ ಒಟ್ಟಾಗಿ 18 ರಿಂದ 21 ಪಂದ್ಯಗಳು ನಡೆಯಲಿದೆ. ಜರೂರಿ ಸಂದರ್ಭಗಳಲ್ಲಿ ಮುಂದೂಡಲ್ಪಡುವ ಪಂದ್ಯಗಳನ್ನು ಜೂನಿಯರ್‌ ಕಾಲೇಜಿನ ಮೈದಾನದಲ್ಲಿ ನಡೆಸಲಾಗುವುದೆಂದು ಮಾಹಿತಿ ನೀಡಿದರು.

ಪಂದ್ಯಾವಳಿಯ ಆರಂಭಿಕ ದಿನವಾದ ಏ.17 ರಂದು ಬೆಳಗ್ಗೆ 11 ಗಂಟೆಯಿಂದ 12.30 ಗಂಟೆಯವರೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಸಭಾ ಕಾರ್ಯಕ್ರಮವನ್ನು ಅರ್ಜುನ ಪ್ರಶಸ್ತಿ ಪುರಸ್ಕೃತರಾದ ಮಾಜಿ ಒಲಂಪಿಯನ್‌ ಡಾ| ಎ.ಬಿ. ಸುಬ್ಬಯ್ಯ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 2.30 ರಿಂದ 5.30 ರವರೆಗೆ ಪಂದ್ಯಗಳು ನಡೆಯಲಿದೆ ಎಂದು ಮಾಹಿತಿ ನೀಡಿದರು.

ಪ್ರದರ್ಶನ ಪಂದ್ಯ 
 ಉದ್ಘಾಟನಾ ಸಮಾರಂಭದ ಬಳಿಕ ಅಂತಾರಾಷ್ಟ್ರೀಯ ಹಾಕಿ ಪಟು ರಘುನಾಥ್‌ ನೇತೃತ್ವದ ಶೇಷ ಭಾರತ ತಂಡ ಮತ್ತು ಬೊಳ್ಳೆಪಂಡ ಕಾರ್ಯಪ್ಪ ನೇತೃತ್ವದ ಕೂರ್ಗ್‌ ರೆಜಿಮೆಂಟ್‌ ತಂಡಗಳ ನಡುವೆ ಪ್ರದರ್ಶನ ಹಾಕಿ ಪಂದ್ಯ ನಡೆಯಲಿದೆ. ಎಂಇಜಿ ಬ್ಯಾಂಡ್‌, ಕೊಡವ ನಾಟಕ, ಕೊಡವ ಸಂಗೀತ ಕಾರ್ಯಕ್ರಮಗಳು ಸಮಾರಂಭದ ಕಳೆ ಹೆಚ್ಚಿಸಲಿವೆ ಎಂದು ಬಿ.ಎಸ್‌. ತಮ್ಮಯ್ಯ ತಿಳಿಸಿದರು.

ಎರಡು ದಿನ ಪಂದ್ಯಗಳಿಲ್ಲ
ಮಕ್ಕಿ ದೇವರ ಉತ್ಸವದ ಹಿನ್ನೆಲೆಯಲ್ಲಿ ಮೇ 3 ಮತ್ತು ಅಂತಿಮ ಪಂದ್ಯದ ಹಿಂದಿನ ದಿನವಾದ ಮೇ 13ರಂದು ಪಂದ್ಯಗಳು ಇರುವುದಿಲ್ಲವೆಂದರು.  ಈ ಸಂದರ್ಭ ಪಂದ್ಯಾವಳಿಯ ತಾಂತ್ರಿಕ ಸಮಿತಿಯ ಪ್ರಮುಖರಾದ ಸಂಪತ್‌ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.