ಯೋಧರ ನಾಡಿನ ಮೇಲಿನ ಅಭಿಮಾನ; ಕೊಡಗಿಗೆ 3 ಬಾರಿ ಬಿಪಿನ್‌ ರಾವತ್‌ ಭೇಟಿ


Team Udayavani, Dec 9, 2021, 5:55 AM IST

ಯೋಧರ ನಾಡಿನ ಮೇಲಿನ ಅಭಿಮಾನ; ಕೊಡಗಿಗೆ 3 ಬಾರಿ ಬಿಪಿನ್‌ ರಾವತ್‌ ಭೇಟಿ

ಮಡಿಕೇರಿ: ದೇಶದ ಸೇನಾಕ್ಷೇತ್ರಕ್ಕೆ ಅತೀ ಹೆಚ್ಚು ಸೈನಿಕರನ್ನು ನೀಡಿರುವ ಹೆಗ್ಗಳಿಕೆಯ ಕೊಡಗು ಜಿಲ್ಲೆಗೆ ಭಾರತದ ಸೇನಾ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ 2016, 2017 ಮತ್ತು 2020ರಲ್ಲಿ ಭೇಟಿ ನೀಡುವ ಮೂಲಕ ಯೋಧರ ನಾಡಿನ ಮೇಲಿನ ಅಭಿಮಾನವನ್ನು ತೋರಿದ್ದರು.

ಫೀಲ್ಡ್‌ ಮಾರ್ಷಲ್‌ ಕೆ.ಎಂ. ಕಾರ್ಯಪ್ಪ ಮತ್ತು ಜನರಲ್‌ ಕೆ.ಎಸ್‌. ತಿಮ್ಮಯ್ಯ ಅವರ ಬಗ್ಗೆ ವಿಶೇಷ ಗೌರವ ಹೊಂದಿದ್ದ ರಾವತ್‌ ಕೊಡಗಿಗೆ ಬರುವ ಯಾವುದೇ ಅವಕಾಶ ತಪ್ಪಿಸಿಕೊಳ್ಳುತ್ತಿರಲಿಲ್ಲ. ಬಿಟ್ಟಂಗಾಲದಲ್ಲಿ 2016ರಲ್ಲಿ ನಡೆದ ಆಮ್ಡ್ ಫೋರ್ಸಸ್‌ ಗಾಲ್ಫ್ ಪಂದ್ಯಾವಳಿ ಉದ್ಘಾಟಿಸಲು ಮತ್ತು ಮಡಿಕೇರಿಯಲ್ಲಿ ನಡೆದ ಸೈನಿಕರ ಸಮಾವೇಶದಲ್ಲಿ ಪಾಲ್ಗೊಳ್ಳಲು ಅಂದು ಲೆಫ್ಟಿನೆಂಟ್‌ ಜನರಲ್‌ ಹುದ್ದೆಯಲ್ಲಿದ್ದ ರಾವತ್‌ ಜಿಲ್ಲೆಗೆ ಪ್ರಥಮ ಭೇಟಿ ನೀಡಿದ್ದರು.

2017ರಲ್ಲಿ ಅಂದಿನ ಸೇನಾ ಮುಖ್ಯಸ್ಥ ಜನರಲ್‌ ದಲ್ಬಿàರ್‌ ಸಿಂಗ್‌ ಜತೆಗೆ ಆಗಮಿಸಿದ್ದರು. ಆಗ ಅವರು ಜ| ತಿಮ್ಮಯ್ಯ ಮ್ಯೂಸಿಯಂ ಸ್ಥಾಪನೆಗೆ ಅಗತ್ಯ ನೆರವನ್ನು ನೀಡುವ ಆಶ್ವಾಸನೆ ನೀಡಿದ್ದಲ್ಲದೆ, ಅದರಂತೆ ನಡೆದುಕೊಂಡಿದ್ದರು.
ಗೋಣಿಕೊಪ್ಪಲಿನ ಕಾವೇರಿ ಕಾಲೇಜು ಆವರಣದಲ್ಲಿ ಸ್ಥಾಪಿಸಲಾಗಿದ್ದ ಫೀ|ಮಾ| ಕೆ.ಎಂ. ಕಾರ್ಯಪ್ಪ ಮತ್ತು ಜ| ತಿಮ್ಮಯ್ಯ ಪ್ರತಿಮೆಗಳ ಅನಾವರಣ ಸಮಾರಂಭಕ್ಕೆ ಜನರಲ್‌ ಬಿಪಿನ್‌ ರಾವತ್‌ ಆಗಮಿಸಿ ಮಹಾನ್‌ ಸೇನಾನಿಗಳ ಪ್ರತಿಮೆಗಳನ್ನು ಅನಾವರಣಗೊಳಿಸಿದ್ದರು.

ಇದನ್ನೂ ಓದಿ:ಪ್ರಧಾನಮಂತ್ರಿ ಆವಾಜ್‌ ಯೋಜನೆ : ಗ್ರಾಮೀಣ 3 ವರ್ಷಗಳಿಗೆ ವಿಸ್ತರಣೆ

ಅನಂತರದ ದಿನಗಳಲ್ಲಿ ಫೀ|ಮಾ| ಕಾರ್ಯಪ್ಪ ಮತ್ತು ಜ| ತಿಮ್ಮಯ್ಯ ಫೋರಂ ಪದಾಧಿಕಾರಿಗಳು ರಾವತ್‌ ಅವರನ್ನು ಸಂಪರ್ಕಿಸಿ ಜ| ತಿಮ್ಮಯ್ಯ ಮ್ಯೂಸಿಯಂ ಉದ್ಘಾಟನೆಗೆ ರಾಷ್ಟ್ರಪತಿಗಳನ್ನು ಕರೆತರುವಂತೆ ಮನವಿ ಮಾಡಿದ್ದರು. ರಾವತ್‌ ಸಹಕಾರದಿಂದ 2021ರಲ್ಲಿ ಮ್ಯೂಸಿಯಂ ಉದ್ಘಾಟನೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಆಗಮಿಸಿದ್ದರು. ರಾವತ್‌ ಜತೆಯಲ್ಲಿದ್ದರು.

ಕೊಡಗಿನ ಪೀಚೆ ಕತ್ತಿ ಕೊಡುಗೆ
ಬಿಪಿನ್‌ ರಾವತ್‌ ಅವರ ತಂದೆ ಲಕ್ಷ್ಮಣ ಸಿಂಗ್‌ ರಾವತ್‌ ಮತ್ತು ಕೊಡಗಿನ ಲೆಫ್ಟಿನೆಂಟ್‌ ಜನರಲ್‌ ಬಿ.ಸಿ. ನಂದ ಸಮಕಾಲೀನರು. ಈ ಹಿನ್ನೆಲೆಯಲ್ಲಿ ರಾವತ್‌ ಕೊಡಗಿಗೆ ಆಗಮಿಸಿದ ಸಂದರ್ಭ ಅವರಿಗೆ ಬಿ.ಸಿ. ನಂದ ಅವರು ಕೊಡವರ ಸಾಂಪ್ರದಾಯಿಕ ಪೀಚೆಕತ್ತಿಯನ್ನು ನೀಡಿ “ಈ ಪೀಚೆ ಕತ್ತಿ ತಂದೆ ಮಗನಿಗೆ ನೀಡುವಂಥದ್ದು. ನಿನ್ನ ತಂದೆ ಮತ್ತು ನಾನು ಸಮಕಾಲೀನರಾಗಿರುವುದರಿಂದ ತಂದೆಯ ಸ್ಥಾನದಲ್ಲಿರುವ ನಾನು ನಿನಗೆ ಪೀಚೆಕತ್ತಿ ನೀಡುತ್ತಿದ್ದೇನೆ’ ಎಂದು ಹೇಳಿರುವ ಹೃದಯ ಸ್ಪರ್ಶಿ ಘಟನೆಯನ್ನು ನಿವೃತ್ತ ಮೇಜರ್‌ ಬಿ.ಎ. ನಂಜಪ್ಪ ನೆನಪಿಸಿಕೊಂಡಿದ್ದಾರೆ.

 

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.