ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಅಸಮಾಧಾನ


Team Udayavani, Jun 10, 2019, 6:10 AM IST

bjp

ಮಡಿಕೇರಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮೈತ್ರಿ ಸರಕಾರ ಕೊಡಗು ಜಿಲ್ಲೆಯ ಸಂತ್ರಸ್ತರ ಪಾಲಿಗೆ ದುಃಸ್ವಪ್ನವಾಗಿ ಕಾಡುತ್ತಿದೆ ಎಂದು ಟೀಕಿಸಿರುವ ಕೊಡಗು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ, ಮಂಡ್ಯ ಜಿಲ್ಲೆಯ ಅಭಿವೃದ್ಧಿಗಾಗಿ 8 ಸಾವಿರ ಕೋಟಿ ರೂ.ಗಳನ್ನು ಬಿಡುಗಡೆ ಮಾಡಿರುವ ಸರಕಾರಕ್ಕೆ ಮಳೆಹಾನಿ ಸಂಭವಿಸಿ 10 ತಿಂಗ‌ಳುಗಳೇ ಕಳೆದರು ಕೊಡಗಿನ ಸಂತ್ರಸ್ತರಿಗೆ ಮನೆಗಳನ್ನು ನಿರ್ಮಿಸಿಕೊಡಲು ಸಾಧ್ಯವಾಗಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಯಮುನಾ ಚಂಗಪ್ಪ ಅವರು, ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಸಂಭವಿಸಿದ ಜಲಪ್ರಳಯಕ್ಕೆ ಸಿಲುಕಿ ಸಂತ್ರಸ್ತರಾದ ಕುಟುಂಬಗಳು ಇಂದಿಗೂ ದಿಕ್ಕು ಕಾಣದ ಕುರುಡರಂತೆ ಜೀವನ ಸಾಗಿಸುವ ಪರಿಸ್ಥಿತಿಯಲ್ಲಿದ್ದು, ಅವರ ನೋವಿಗೆ ಸ್ಪಂದಿಸಬೇಕಾದ ರಾಜ್ಯದ ಮೈತ್ರಿ ಸರಕಾರ ಕೇವಲ ಅಧಿಕಾರ ಉಳಿಸಿಕೊಳ್ಳುವುದಕ್ಕಾಗಿ ಫೆವಿಕಾಲ್‌ ಸರಕಾರವಾಗಿ ಕುರ್ಚಿಗೆ ಅಂಟಿ ಕುಳಿತಿದೆ ಎಂದು ಟೀಕಿಸಿದರು.

ಕಳೆದ ಮಳೆಗಾಲದಲ್ಲಿ ಕೊಡಗಿನ ಸುಮಾರು 32 ಗ್ರಾಮಗಳಲ್ಲಿ ಸಂಭವಿಸಿದ ಜಲಪ್ರಳಯದಿಂದಾಗಿ ಆ ಗ್ರಾಮಗಳಲ್ಲಿ ಹರಿಯುತ್ತಿದ್ದ ನದಿ, ತೊರೆಗಳೇ ಮಾಯವಾಗಿದ್ದು, ಗದ್ದೆಗಳಲ್ಲಿ ಹೂಳು ತುಂಬಿಕೊಂಡಿದೆ. ಹಾರಂಗಿ ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ಸುಮಾರು 30 ಅಡಿಗಳಷ್ಟು ಹೂಳು ನಿಂತಿದೆ. ಈ ಹೂಳುಗಳನ್ನು ತೆಗೆದು ರೈತರ ಜೀವನಕ್ಕೆ ಆಸರೆಯಾಗಬೇಕಿದ್ದ ಸರಕಾರ ಯಾವುದೇ ಕ್ರಮಕೈಗೊಳ್ಳದೆ ನಿದ್ರಾವಸ್ಥೆಗೆ ಜಾರಿಗೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳು ಕೈಗೊಳ್ಳಲು ಉದ್ದೇಶಿಸಿರುವ ಗ್ರಾಮ ವಾಸ್ತವ್ಯದ ಬಗ್ಗೆಯೂ ಕಿಡಿಕಾರಿದ ಯಮುನಾ ಚಂಗಪ್ಪ ಗ್ರಾಮ ವಾಸ್ತವ್ಯ ಎನ್ನುವುದೇ ಹಾಸ್ಯಾಸ್ಪದ. ಮುಖ್ಯಮಂತ್ರಿಯಾದವರಿಗೆ ಎಲ್ಲಾ ಸಮಸ್ಯೆಗಳ ಅರಿವು ಇದ್ದು, ಕುರ್ಚಿಯಲ್ಲಿ ಕುಳಿತುಕೊಂಡೇ ಆ ಸಮಸ್ಯೆಗಳನ್ನು ಪರಿಹರಿಸಬಹುದು. ಅದಕ್ಕಾಗಿ ಗ್ರಾಮ ವಾಸ್ತ$Âವ ಮಾಡುವ ಅಗತ್ಯವಿಲ್ಲ. ಈ ಹಿಂದಿನ ವರ್ಷಗಳಲ್ಲಿ ಮುಖ್ಯಮಂತ್ರಿಗಳು ನಡೆಸಿದ ಗ್ರಾಮ ವಾಸ್ತವ್ಯಗಳಿಂದ ಎಷ್ಟು ಗ್ರಾಮಗಳು ಸುವರ್ಣ ಗ್ರಾಮಗಳಾಗಿವೆ ಎಂದು ಪ್ರಶ್ನಿಸಿದರು.

ಗ್ರಾಮ ವಾಸ್ತವ್ಯ ಊಟ, ತಿಂಡಿ, ನಿದ್ದೆಗಷ್ಟೇ ಸೀಮಿತವಾಗಲಿದೆ ಎಂದು ಲೇವಡಿ ಮಾಡಿದ ಅವರು, ರಾಜ್ಯದಾದ್ಯಂತ ಗ್ರಾಮ ವಾಸ್ತವ್ಯ ಮಾಡುವ ಬದಲು ಮುಖ್ಯಮಂತ್ರಿಗಳು ಕೊಡಗಿನಲ್ಲಿ ವಾಸ್ತವ್ಯ ಹೂಡಿ ಇಲ್ಲಿನ ಸಂತ್ರಸ್ತರಿಗೆ ಸೂಕ್ತ ಸೌಲಭ್ಯಗಳನ್ನು ಕಲ್ಪಿಸಲು ಪ್ರಯತ್ನಿಸಲಿ ಎಂದು ಸಲಹೆ ನೀಡಿದರು.
ಕೊಡಗಿನ ಸಂತ್ರಸ್ತರಿಗಾಗಿ ದಾನಿಗಳು ಹಲವು ರೀತಿಯಲ್ಲಿ ನೆರವು ನೀಡಿದ್ದು, ಅದರಲ್ಲಿ ಸರಕಾರ ಎಷ್ಟು ಹಣವನ್ನು ವೆಚ್ಚ ಮಾಡಿದೆ ಎಂಬ ಬಗ್ಗೆ ಶ್ವೇತ್ರಪತ್ರ ಹೊರಡಿಸಲಿ ಎಂದು ಸವಾಲು ಹಾಕಿದ ರು. ತಮ್ಯಮ ಪುತ್ರ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಕಾರಣಕ್ಕಾಗಿ ಮಂಡ್ಯ ಜಿಲ್ಲೆಯೊಂದಕ್ಕೇ 8 ಸಾವಿರ ಕೋಟಿ ರೂ.ಗಳ ನೆರವು ಘೋಷಿಸಿದ ಮುಖ್ಯಮಂತ್ರಿಗೆ ಕೊಡಗಿನ ಸಂತ್ರಸ್ತರಿಗೆ ನೆರವು ನೀಡಲು ಸರಕಾರ ಬಳಿ ಹಣವಿಲ್ಲವೇ ಎಂದು ಯಮುನಾ ಚಂಗಪ್ಪ ಪ್ರಶ್ನಿಸಿದರು.

ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೀತಾ ಪವಿತ್ರಾ ಮಡಿಕೇರಿ ತಾಲೂಕು ಅಧ್ಯಕ್ಷೆ ಕವಿತಾ ಬೆಳ್ಯಪ್ಪ, ಸೋಮವಾರಪೇಟೆ ತಾಲೂಕು ಅಧ್ಯಕ್ಷೆ ನಳಿನಿ ಗಣೇಶ್‌, ಮಡಿಕೇರಿ ನಗರಾಧ್ಯಕ್ಷೆ ಅನಿತಾ ಪೂವಯ್ಯ ಹಾಗೂ ರಾಜ್ಯ ಸಮಿತಿ ಸದಸ್ಯೆ ಉಷಾ ತೇಜಸ್ವಿ ಉಪಸ್ಥಿತರಿದ್ದರು.

ಮಹಿಳಾ ಬಲ
ದೇಶದಲ್ಲಿ ಎನ್‌ಡಿಎ ಮೈತ್ರಿಕೂಟ ಐತಿಹಾಸಿಕ ಗೆಲವು ಸಾಧಿಸುವಲ್ಲಿ ಮಹಿಳೆಯರ ಪಾತ್ರ ಅತ್ಯಂತ ಹಿರಿದಾಗಿದೆ. ಮಹಿಳಾ ಮೋರ್ಚಾದ ಕಾರ್ಯಕರ್ತರು ಮನೆಮನೆಗಳಿಗೆ ತೆರಳಿ ಮೋದಿ ಅವರ ಸಾಧನೆ, ಅವರ ಜನಪರ ಕಾರ್ಯಕ್ರಮಗಳು, ಜಾತ್ಯತೀತ ಮನೋಭಾವದ ಬಗ್ಗೆ ಮಹಿಳೆಯರಿಗೆ ಮನದಟ್ಟು ಮಾಡುವಲ್ಲಿ ಸಫ‌ಲರಾಗಿದ್ದಾರೆ. ಮೋದಿ ನೇತೃತ್ವದ ಸರಕಾರ 5 ವರ್ಷಗಳಲ್ಲಿ ಜಾತಿ ಧರ್ಮವನ್ನು ನೋಡದೆ ಎಲ್ಲÉ ಜಾತಿ, ಜನಾಂಗದವರಿಗೂ ಅನುಕೂಲವಾಗುವಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಅದಲ್ಲದೆ ಈ ಅವಧಿಯಲ್ಲಿ ಭ್ರಷ್ಟಾಚಾರಕ್ಕೆ ಅವಕಾಶವಿಲ್ಲದೆ ಆಡಳಿತ ನಡೆಸಿದೆ ಎಂದು ಯಮುನಾ ಚಂಗಪ್ಪ ಹೇಳಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.